ಭಾರತ: ಕಳೆದ 24ಗಂಟೆಯಲ್ಲಿ 9,800 ಕೋವಿಡ್ 19 ಪ್ರಕರಣ ಪತ್ತೆ, 273 ಸಾವು: ಕೇಂದ್ರ
ದೇಶದಲ್ಲಿ ಕೋವಿಡ್ 19 ವೈರಸ್ ನಿಂದ ಶೇ.48.27ರಷ್ಟು ಮಂದಿ ಗುಣಮುಖರಾಗುತ್ತಿದ್ದಾರೆ.
Team Udayavani, Jun 5, 2020, 1:47 PM IST
ನವದೆಹಲಿ:ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಮೂರನೇ ಹಂತದ ಲಾಕ್ ಡೌನ್ ಮುಕ್ತಾಯವಾಗಿದ್ದು, ನಾಲ್ಕನೇ ಹಂತದಲ್ಲಿ ಹಲವು ಮಾರ್ಗಸೂಚಿಯೊಂದಿಗೆ ನಿರ್ಬಂಧ ಸಡಿಲಿಕೆ ಮಾಡಲಾಗಿತ್ತು. ಇದೀಗ ಕಳೆದ 24ಗಂಟೆಯಲ್ಲಿ ದೇಶದಲ್ಲಿ 9,851 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಸಾವಿನ ಸಂಖ್ಯೆ 273ಕ್ಕೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಭಾರತದಲ್ಲಿ ಈವರೆಗೆ 2,26,770 ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, 1,09,462 ಮಂದಿ ಗುಣಮುಖರಾಗಿದ್ದಾರೆ. 6348 ಜನರು ಕೋವಿಡ್ 19 ವೈರಸ್ ಗೆ ಬಲಿಯಾಗಿದ್ದಾರೆ. ಅಲ್ಲದೇ ದೇಶದಲ್ಲಿ ಕೋವಿಡ್ 19 ವೈರಸ್ ನಿಂದ ಶೇ.48.27ರಷ್ಟು ಮಂದಿ ಗುಣಮುಖರಾಗುತ್ತಿದ್ದಾರೆ.
ಜಗತ್ತಿನಲ್ಲಿ ಅಮೆರಿಕ, ಬ್ರೆಜಿಲ್, ರಷ್ಯಾ, ಯುನೈಟೆಡ್ ಕಿಂಗ್ ಡಮ್, ಸ್ಪೇನ್ ಹಾಗೂ ಇಟಲಿ ನಂತರ ಅತೀ ಹೆಚ್ಚು ಕೋವಿಡ್ ಪ್ರಕರಣ ಹೊಂದಿರುವ 7ನೇ ದೇಶ ಭಾರತವಾಗಿದೆ.
ಕೋವಿಡ್ 19 ವೈರಸ್ ಗೆ ಸಂಬಂಧಿಸಿದಂತೆ ಸಂಭವಿಸುವ ಸಾವಿನ ಅಂಕಿಅಂಶದಲ್ಲಿ ಭಾರತ 12ನೇ ಸ್ಥಾನದಲ್ಲಿದೆ. ರಾಷ್ಟ್ರರಾಜಧಾನಿ ಸೇರಿದಂತೆ ದೇಶದಲ್ಲಿ ಕಡಿಮೆ ಪ್ರಮಾಣದಲ್ಲಿ ಪರೀಕ್ಷೆ ನಡೆಯುತ್ತಿರುವುದರಿಂದ ಅತೀ ಹೆಚ್ಚು ಪಾಸಿಟಿವ್ ಪ್ರಕರಣ ಜಾಸ್ತಿಯಾಗಲು ಕಾರಣವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ