ಮಾಸ್ಕ್ ನಲ್ಲಿ ಪಾನ್‌ ಕಲೆ; ಪಾಕ್‌ಗೆ ಬಳಕೆಯಾದ ಪಿಪಿಇ ಕಿಟ್‌


Team Udayavani, May 22, 2020, 9:48 AM IST

ಮಾಸ್ಕ್ ನಲ್ಲಿ ಪಾನ್‌ ಕಲೆ; ಪಾಕ್‌ಗೆ ಬಳಕೆಯಾದ ಪಿಪಿಇ ಕಿಟ್‌

ಬಿಕಾನೆರ್‌: ಬಣ್ಣ ಬಣ್ಣದ ಮಾಸ್ಕ್ ಗಳನ್ನು ಮಾರಾಟ ಮಾಡಲು ಇಟ್ಟಿರುವ ಅಂಗಡಿಯಾತ.

ಮುಝಫ‌ರಾಬಾದ್‌: ಪಾಕಿಸ್ಥಾನದಲ್ಲಿ ಕಳಪೆ ಆರೋಗ್ಯ ಸಂರಕ್ಷಣಾ ಸೌಲಭ್ಯಗಳಿರುವುದು ಮತ್ತೂಮ್ಮೆ ಬೆಳಕಿಗೆ ಬಂದಿದೆ. ಆಕ್ರಮಿತ ಕಾಶ್ಮೀರ(ಪಿಒಕೆ)ದ ಮುಝಫ‌ರಾಬಾದ್‌ನ ಶೇಕ್‌ ಖಲೀಫಾ ಬಿನ್‌ ಝೈದ್‌ ಮಿಲಿಟರಿ ಆಸ್ಪತ್ರೆಗೆ ಕಳುಹಿಸಲಾಗಿರುವ ವೈಯಕ್ತಿಕ ಸುರಕ್ಷಾ ಸಾಧನ(ಪಿಪಿಇ) ಕಿಟ್‌ಗಳು ಅದಾಗಲೇ ಬಳಸಲ್ಪಟ್ಟಿದ್ದು, ಕೆಲವಲ್ಲಿ ಪಾನ್‌ ಜಗಿದು ಉಗುಳಿದ ಕಲೆಗಳಿರುವುದಾಗಿ ಅಧಿಕಾರಿಗಳು ದೂರಿದ್ದಾರೆ.

“ಆಸ್ಪತ್ರೆಗೆ ರಾವಲ್ಪಿಂಡಿ ಸೇನಾ ಆಸ್ಪತೆಯಿಂದ ಸುಮಾರು 3 ಲಕ್ಷ ಪಿಪಿಇ ಕಿಟ್‌ಗಳು ಬಂದಿವೆ. ಆದರೆ ನಮಗೆ ರವಾನೆಯಾಗಿರುವ ಕಿಟ್‌ಗಳು ಈಗಾಗಲೇ ಬಳಸಲ್ಪಟ್ಟಿವೆ. ಕೆಲ ಮಾಸ್ಕ್ಗಳಲ್ಲಿ ಕೆಂಪು ಕಲೆಗಳಿವೆ. ಪ್ರಯೋಗಾಲಯದಲ್ಲಿ ಅವನ್ನು ಪರೀಕ್ಷಿಸಿದ ಬಳಿಕ ಅವು ಪಾನ್‌ ಜಗಿದು ಉಗುಳಿದ ಕಲೆಗಳೆಂದು ಗೊತ್ತಾಯಿತು’ ಎಂದು ಆಸ್ಪತ್ರೆಯ ಅಧಿಕಾರಿ ಟ್ವೀಟ್‌ ಮಾಡಿದ್ದಾರೆ.

“ಆಸ್ಪತ್ರೆಯ ಶಿಷ್ಟಾಚಾರದಂತೆ ಸೋಂಕು ಹರಡುವುದನ್ನು ತಪ್ಪಿಸಲು ನಾವು ಎಲ್ಲ ಕಿಟ್‌ಗಳನ್ನು ನಾಶಪಡಿಸಿದ್ದೇವೆ. ನಕಲಿ ಚೀನ ನಿರ್ಮಿತ ಪರೀಕ್ಷಾ ಯಂತ್ರಗಳು ಬಂದ ಬಳಿಕ ಆಗ ಬಳಸಲ್ಪಟ್ಟ ಪಿಪಿಇ ಕಿಟ್‌ಗಳನ್ನು ಕಳುಹಿಸುತ್ತಿರುವುದು ನಾಚಿಕೆಗೇಡು’ ಎಂದು ಅಧಿಕಾರಿ ಹೇಳಿದ್ದಾರೆ.

ಪಾಕಿಸ್ಥಾನದಲ್ಲಿ ಹೊಸದಾಗಿ 1,932 ಪ್ರಕರಣಗಳು ವರದಿಯಾಗಿದ್ದು ಕೋವಿಡ್‌ ಪೀಡಿತರ ಸಂಖ್ಯೆ ಬುಧವಾರ 45,898ಕ್ಕೇರಿದೆ. ಆಕ್ರಮಿತ ಕಾಶ್ಮೀರದಲ್ಲಿ ವೈದ್ಯಕೀಯ ಸೌಲಭ್ಯಗಳು ಕಳಪೆಯಾಗಿವೆ ಮತ್ತು ತರಬೇತಾದ ವೈದ್ಯಕೀಯ ಸಿಬಂದಿಯ ಕೊರತೆಯಿದೆ. ಆಕ್ರಮಿತ ಕಾಶ್ಮೀರದಲ್ಲಿ 133 ಹಾಗೂ ಗಿಲ್ಗಿಟ್‌ ಬಾಲ್ಟಿಸ್ಥಾನ್‌ನಲ್ಲಿ 556 ಮಂದಿಗೆ ಸೋಂಕು ದೃಢಪಟ್ಟಿದೆ.

ಈ ಮುನ್ನ ಆಕ್ರಮಿತ ಕಾಶ್ಮೀರದಲ್ಲಿ ಕೋವಿಡ್‌-19 ರೋಗಿಗಳಿಗೆ ಚಿಕಿತ್ಸೆ ನೀಡುವುದಕ್ಕಾಗಿ ತಮಗೆ ಪಿಪಿಇ ಕಿಟ್‌ಗಳನ್ನು ಒದಗಿಸಲು ಸರಕಾರ ವಿಫ‌ಲವಾಗಿರುವುದನ್ನು ವಿರೋಧಿಸಿ ವೈದ್ಯರು ಪ್ರತಿಭಟನೆ ನಡೆಸಿದ್ದರು. ಪಿಪಿಇ ಇಲ್ಲದೆ ಆಸ್ಪತ್ರೆಗಳಿಗೆ ತೆರಳಲು ಅನೇಕ ಆರೋಗ್ಯ ಕಾರ್ಯಕರ್ತರು ನಿರಾಕರಿಸಿದ್ದರು ಮತ್ತು ಇದರಿಂದಾಗಿ ಕೋವಿಡ್‌ ಶಂಕಿತರ ಪರೀಕ್ಷೆ ಹಾಗೂ ಚಿಕಿತ್ಸೆ ಮೇಲೆ ಪರಿಣಾಮವಾಗಿತ್ತು. ಪಾಕ್‌ ಸರಕಾರ ಕೋವಿಡ್‌ ಹಬ್ಬುತ್ತಿರುವ ವೇಳೆ ಆಕ್ರಮಿತ ಕಾಶ್ಮೀರ ಮತ್ತು ಗಿಲ್ಗಿಟ್‌ ಬಾಲ್ಟಿಸ್ತಾನಕ್ಕೆ ಸಂಬಂಧಿಸಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಮತ್ತು ಇದರಿಂದಾಗಿ ವಲಯದ ಜನರ ಜೀವನದ ಮೇಲೆ ನೇರ ಪರಿಣಾಮವಾಗಿದೆ.

ಕೋವಿಡ್‌ ವೈರಸ್‌ ಬಗ್ಗೆ ಆರಂಭದಿಂದಲೂ ಪಾಕಿಸ್ಥಾನ ಬೇಜವಾಬ್ದಾರಿ ತೋರಿಸುತ್ತಿದೆ. ವೈದ್ಯಕೀಯ ಸಾಧನಗಳಿಗಾಗಿ ಅದು ಚೀನವನ್ನು ಮಾತ್ರ ಅವಲಂಬಿಸಿದೆ. ಚೀನ ಆರಂಭದಲ್ಲಿ ಬಳಸಿದ ಒಳ ಉಡುಪಿನ ಬಟ್ಟೆಯಿಂದ ತಯಾರಿಸಿದ ಮಾಸ್ಕ್ ಗಳನ್ನು ಪಾಕಿಸ್ಥಾನಕ್ಕೆ ಪೂರೈಸಿದ ಎಂಬ ಆರೋಪ ಕೇಳಿಬಂದಿತ್ತು. ಎರಡೂ ದೇಶಗಳು ಇದನ್ನು ಅಲ್ಲಗಳೆದಿವೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.