ಕೋವಿಡ್ 2ನೇ ಅಲೆ ಎಚ್ಚರ ತಪ್ಪಬೇಡಿ, ನಿಯಮ ಪಾಲಿಸಿ: ಸಿಎಂ ಸಭೆಯಲ್ಲಿ ಪ್ರಧಾನಿ ಮೋದಿ
ಅಂತರ್ ರಾಜ್ಯ ಪ್ರಯಾಣಿಕರ ಮಾಹಿತಿಯನ್ನು ಸಂಗ್ರಹಿಸುವಂತೆ ಪ್ರಧಾನಿ ಈ ಸಂದರ್ಭದಲ್ಲಿ ಸೂಚನೆ ನೀಡಿದ್ದಾರೆ.
Team Udayavani, Mar 17, 2021, 2:07 PM IST
ನವದೆಹಲಿ: ಕೋವಿಡ್ ವಿಚಾರದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬೇಡಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ, ಲಸಿಕೆ ಹಾಕಿಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ(ಮಾರ್ಚ್ 17) ದೇಶದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ದೇಶಾದ್ಯಂತ ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನಾವು ಕೋವಿಡ್ ಸೋಂಕಿನ ಎರಡನೇ ಅಲೆಯನ್ನು ತಡೆಗಟ್ಟಬೇಕಾದ ಅಗತ್ಯವಿದೆ ಎಂದರು.
ಸಣ್ಣ ನಗರಗಳಲ್ಲಿ ಕೋವಿಡ್ ಪರೀಕ್ಷೆಯನ್ನು ಇನ್ನಷ್ಟು ಹೆಚ್ಚಳ ಮಾಡಬೇಕಾಗಿದೆ. ಜನರು ಮಾಸ್ಕ್ ಧರಿಸುವುದನ್ನು ಕಡಿಮೆ ಮಾಡುತ್ತಿದ್ದಾರೆ. ಸಾಮಾಜಿಕ ಅಂತರ ಕೂಡಾ ಕಾಯ್ದುಕೊಳ್ಳುತ್ತಿಲ್ಲ. ಇಡೀ ಜಗತ್ತು ಕೋವಿಡ್ ವಿರುದ್ಧ ಹೋರಾಡುತ್ತಿದೆ. ನಾವು ಕೋವಿಡ್ ವಿರುದ್ಧ ಕಳೆದ ಒಂದು ವರ್ಷದಿಂದ ಹೋರಾಟ ನಡೆಸುತ್ತಿದ್ದೇವು ಎಂದು ಪ್ರಧಾನಿ ಹೇಳಿದರು.
ರಾಜ್ಯಗಳಲ್ಲಿಯೂ ಕೋವಿಡ್ ನ ಆರ್ ಟಿಪಿಎಸ್ ಪರೀಕ್ಷೆಗಳ ಪ್ರಮಾಣ ಹೆಚ್ಚಳ ಮಾಡಬೇಕಾಗಿದೆ. ಕೋವಿಡ್ ಹತ್ತಿಕ್ಕಿದ್ದೇವೆ ಎಂಬ ಅತೀಯಾದ ವಿಶ್ವಾಸಬೇಡ. ಈಗಾಗಲೇ 70 ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಳವಾಗಿದೆ. ಅಷ್ಟೇ ಅಲ್ಲ ಅಂತರ್ ರಾಜ್ಯ ಪ್ರಯಾಣಿಕರ ಮಾಹಿತಿಯನ್ನು ಸಂಗ್ರಹಿಸುವಂತೆ ಪ್ರಧಾನಿ ಈ ಸಂದರ್ಭದಲ್ಲಿ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು