ಕೋವಿಡ್‌ ಸೋಂಕಿಗೆ ತಡೆ; ಕಜಕಿಸ್ಥಾನಕ್ಕೆ ವಿಶ್ವಾಸ

ವೈದ್ಯಕೀಯ ವಲಯದಿಂದ ಯಶಸ್ವಿ ನಿರ್ವಹಣೆ

Team Udayavani, Jul 10, 2020, 9:10 AM IST

ಕೋವಿಡ್‌ ಸೋಂಕಿಗೆ ತಡೆ; ಕಜಕಿಸ್ಥಾನಕ್ಕೆ ವಿಶ್ವಾಸ

ನೂರ್‌ ಸುಲ್ತಾನ್‌: ರಾಜಧಾನಿಯ ಮಾರುಕಟ್ಟೆಯೊಂದರ ಎದುರು ನಿಂತ ಗ್ರಾಹಕರು.

ಅಸ್ತಾನಾ : ಚೀನ ಹರಡಿದ್ದ ಕೋವಿಡ್ ವೈರಸ್‌ ನಿಂದ ಇಡೀ ಜಗತ್ತಿನ ಆರ್ಥಿಕತೆಯೇ ತತ್ತರಿಸಿ ಕುಸಿತದ ದವಡೆಗೆ ಸಿಲುಕಿದೆ. ವಿಶ್ವದ ಬಹುತೇಕ ರಾಷ್ಟ್ರಗಳು ಆರ್ಥಿಕ ಹಿಂಜರಿತದ ಜತೆಗೆ ಏತ್ಮನಧ್ಯೆ ಎದುರಾಗಿರುವ ಸೋಂಕಿನಿಂದಾಗಿ ಸಾಮಾಜಿಕ ಅಭದ್ರತೆಯೂ ಕಾಡುತ್ತಿದೆ. ಅದರಲ್ಲಂತೂ ಹಿಂದುಳಿದ ದೇಶಗಳ ಪರಿಸ್ಥಿತಿ ಈ ಸಾಂಕ್ರಾಮಿಕ ಪಿಡುಗಿನಿಂದ ಮತ್ತಷ್ಟು ಹೀನಾಯವಾಗಿದ್ದು, ಸೋಂಕು ಬಿಕ್ಕಟ್ಟನ್ನು ನಿರ್ವಹಿಸಲು ಅಗತ್ಯ ಇರುವ ಆರೋಗ್ಯ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಕೋವಿಡ್‌-19 ಬಿಕ್ಕಟ್ಟಿನಿಂದ ಹಣ ದುಬ್ಬರ, ನಷ್ಟ, ಉದ್ಯೋಗ ಸೇರಿದಂತೆ ನಾನಾ ಸಮಸ್ಯೆಗಳ ಸಿಲುಕಿ ಪರದಾಡುತ್ತಿರುವ ಈ ಪರಿಸ್ಥಿತಿ ನಡುವೆಯೇ ಕಜಕಿಸ್ಥಾನ ದೇಶ ಮಾತ್ರ ಬಿಕ್ಕಟ್ಟನ್ನು ಎದುರಿಸಲು ನಾವು ಸಮರ್ಥರಾಗಿದ್ದೇವೆ ಎಂಬ ವಿಶ್ವಾಸವನ್ನು ಹೊಂದಿದೆ.

ಪರಿಣಾಮಕಾರಿ ನಿರ್ವಹಣೆ
ಹಲವು ದೇಶಗಳಲ್ಲಿ ಪರಿಸ್ಥಿತಿ ಕೈ ಮೀರಿದ್ದು, ಚಿಕಿತ್ಸೆಗೆ ನಿರ್ದಿಷ್ಟ ಸವಲತ್ತುಗಳಿಲ್ಲದೇ ಆರೋಗ್ಯ ವ್ಯವಸ್ಥೆ ಕೆಟ್ಟದಾಗಿದೆ. ಕೊರೊನಾ ಪ್ರಾರಂಭವಾದಗಿನಿಂದ ಈ ಮಾತುಗಳು ಕೇಳಿ ಬರುತ್ತಲೇ ಇವೆ. ಆದರೆ ಕಜಕಿಸ್ಥಾನದ ಸ್ಥಿತಿ ಇದಕ್ಕೆ ತದ್ವಿರುದ್ಧವಾಗಿದ್ದು, ವಾಸ್ತವದ ಸ್ಥಿತಿ ಬೇರೆಯೇ ಇದೆ. ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದರೂ ಧೃತಿಗೆೆಡದ ಕಝಕಿಸ್ತಾನದ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಲ್ಲಿ ಯಶಸ್ವಿಯಾಗಿದ್ದು, ವ್ಯವಸ್ಥಿತವಾಗಿ ಚಿಕಿತ್ಸೆ ಮತ್ತು ಆರೋಗ್ಯ ಸೇವೆಯನ್ನು ನೀಡುತ್ತಾ ಬಂದಿದೆ. ಸರಾಸರಿ 1ಲಕ್ಷ ಜನರಲ್ಲಿ 90 ಸಾವಿರ ಮಂದಿಯನ್ನು ಸೋಂಕು ಪರೀಕ್ಷೆಗೆ ಒಳಪಡಿಸುತ್ತಿದ್ದು, ತ್ವರಿತವಾಗಿ ಸೋಂಕು ಮೂಲ ಪತ್ತೆ ಮಾಡುವಲ್ಲಿ ಅಗತ್ಯವಿರುವ ಕ್ರಮಗಳನ್ನು ದೇಶ ಜಾರಿ ಮಾಡಿದೆ. ಫ್ರಾನ್ಸ್, ಜರ್ಮನಿ, ಕೆನಡಾ ಮತ್ತು ಇತರ ಹಲವು ದೇಶಗಳು ನಡೆಸುವುದಕ್ಕಿಂತ ಅತೀ ಹೆಚ್ಚು ಸೋಂಕು ಪರೀಕ್ಷೆಗಳನ್ನು ಕಜಕಿಸ್ಥಾನನಡೆಸುತ್ತಿದೆ. ಅಲ್ಲಿ ಸರಿಸುಮಾರು 1,400 ಹೊಸ ಪ್ರಕರಣಗಳು ದಾಖಲಾಗುತ್ತಿದೆ. ಸೋಂಕು ಏರಿಕೆ ಪ್ರಮಾಣ ಶೇ.3ರಷ್ಟಿದೆ. ಇಲ್ಲಿಯವರೆಗೆ ದೇಶದಲ್ಲಿ ಸುಮಾರು 50 ಸಾವಿರ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 23 ಸಾವಿರದಷ್ಟು ಪ್ರಕರಣಗಳು ಲಕ್ಷಣ ರಹಿತವಾಗಿವೆ. ಬಿಕ್ಕಟ್ಟು ತಡೆಯುವ ವಿಶ್ವಾಸವನ್ನು ಅಲ್ಲಿನ ಸರಕಾರ ವ್ಯಕ್ತಪಡಿಸಿದೆ.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.