ವೈಯಕ್ತಿಕ ಸುರಕ್ಷಾ ಸಾಧನಗಳ ಪೂರೈಕೆಗೆ ಆಗ್ರಹಿಸಿ ಭಾರತೀಯ ಮೂಲದ ಗರ್ಭಿಣಿ ವೈದ್ಯೆಯ ಪ್ರತಿಭಟನೆ


Team Udayavani, Apr 22, 2020, 1:34 PM IST

ವೈಯಕ್ತಿಕ ಸುರಕ್ಷಾ ಸಾಧನಗಳ ಪೂರೈಕೆಗೆ ಆಗ್ರಹಿಸಿ ಭಾರತೀಯ ಮೂಲದ ಗರ್ಭಿಣಿ ವೈದ್ಯೆಯ ಪ್ರತಿಭಟನೆ

ಲಂಡನ್: ಯನೈಟೆಡ್‌ ಕಿಂಗ್‌ಡಮ್‌ನ ರಾಷ್ಟ್ರೀಯ ಆರೋಗ್ಯ ಸೇವಾ ಸಿಬಂದಿಗೆ ಸರ್ಜಿಕಲ್‌ ಉಡುಪುಗಳು ಸೇರಿದಂತೆ ವೈಯಕ್ತಿಕ ಸುರಕ್ಷಾ ಸಾಧನಗಳ ಕೊರತೆಯಿರುವುದನ್ನು ಖಂಡಿಸಿ ಭಾರತೀಯ ಮೂಲದ ಗರ್ಭಿಣಿ ವೈದ್ಯೆ ಬ್ರಿಟನ್‌ ಪ್ರಧಾನಮಂತ್ರಿ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

6 ತಿಂಗಳ ಗರ್ಭಿಣಿಯಾಗಿರುವ ಡಾ| ಮೀನಲ್‌ ವಿಜ್‌ ಅವರೇ ಪ್ರತಿಭಟನೆ ನಡೆಸಿದ ವೈದ್ಯೆ. ಆಸ್ಪತ್ರೆಯ ಉಡುಗೆಯನ್ನು ತೊಟ್ಟು, ಸರ್ಜಿಕಲ್‌ ಮಾಸ್ಕ್ ಧರಿಸಿದ್ದ ಅವರು, ಆರೋಗ್ಯಸೇವಾ ಸಿಬಂದಿಯನ್ನು ರಕ್ಷಿಸಿ ಎಂಬ ಫ‌ಲಕವನ್ನು ಹಿಡಿದು ಪ್ರಧಾನಿ ಕಾರ್ಯಾಲಯವಾದ ಡೌನಿಂಗ್‌ ಸ್ಟ್ರೀಟ್‌ ನ ಗೇಟಿನ ಮುಂದೆ ನಿಂತು ಪ್ರತಿಭಟನೆ ನಡೆಸಿದ್ದಾರೆ.

ಸರಿಯಾದ ಸುರಕ್ಷಾ ಪರಿಕರಗಳಿಲ್ಲದೇ ಈಗಾಗಲೇ ಇಂಗ್ಲಂಡ್ ನಲ್ಲಿ ಸಾವಿಗೀಡಾಗಿರುವ ಆರೋಗ್ಯ ಯೋಧರ ಸಂಖ್ಯೆ 100ಕ್ಕೆ ತಲುಪಿದೆ. ಒಂದುವೇಳೆ ಸರಿಯಾದ ವೈಯಕ್ತಿಕ ಸುರಕ್ಷಾ ಸಾಧನಗಳು ಲಭ್ಯವಿದ್ದ ಪಕ್ಷದಲ್ಲಿ ಈ ಸಾವಿನ ಸಂಖ್ಯೆಯನ್ನು ಗಣನೀಯವಾಗಿ ಕಡಿಮೆಗೊಳಿಸಬಹುದಿತ್ತು ಎಂಬುದು ವಿಜ್ ಅವರ ವಾದವಾಗಿದೆ.


‘ಕೋವಿಡ್ ವೈರಸ್ ವಿರುದ್ಧ ಮುಂಚೂಣಿಯಲ್ಲಿ ನಿಂತು ಹೋರಾಡುತ್ತಿರುವ ಆರೋಗ್ಯ ಯೋಧರ ಸಮುದಾಯದಲ್ಲಿ ನಡೆಯುತ್ತಿರುವ ಸಾವುಗಳು ಸಮಂಜಸವಾದುದಲ್ಲ ಎನ್ನುವುದನ್ನು ನಾನು ಸರಕಾರಕ್ಕೆ ಮತ್ತು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ನಾನು ಈ ರಿತಿಯಾಗಿ ಬೀದಿಗೆ ಬರಬೇಕಾಯಿತು.

ಆರೋಗ್ಯ ಯೋಧರ ಸಾವು ಇದೀಗ ಸಹಜವಾಗಿ ಹೋಗಿದೆ ಆದರೆ ಇದು ಖಂಡಿತಾ ಸಹಜವಾಗಿ ಪರಿಗಣಿಸುವ ವಿಚಾರವಲ್ಲ. ಇದನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಬೇಕಾಗಿದೆ’ ಎಂದು ಡಾ. ಮೀನಲ್ ವಿಜ್ ಅವರು ತನ್ನ ಪ್ರತಿಭಟನೆಯ ಉದ್ದೇಶವನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ.

‘ಈ ವಿಚಾರದಲ್ಲಿ ನಮ್ಮನ್ನೆಲ್ಲಾ ಮೌನವಾಗಿಸಲಾಗಿದೆ. ನಮ್ಮ ಆಸ್ಪತ್ರೆಗಳ ಆಡಳಿತ ಮಂಡಳಿಗಳೇ ನಮಗೆ ಮೌನ ವಹಿಸುವಂತೆ ಒತ್ತಡ ಹಾಕುತ್ತಿವೆ. ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿರುವ ಹೆಚ್ಚಿನವರು ತಮ್ಮ ಸುರಕ್ಷತೆಯ ಕುರಿತಾಗಿ ಭಯಗೊಂಡಿದ್ದಾರೆ, ಆದರೆ ಇದೇ ಸಂದರ್ಭದಲ್ಲಿ ಅವರಿಗೆ ತಾವು ಕೆಲಸ ಕಳೆದುಕೊಳ್ಳುವ ಕುರಿತಾಗಿಯೂ ಭಯ ಆವರಿಸಿದೆ. ಕೆಲವರಿ ವಿಸಾ ಕಳೆದುಕೊಳ್ಳುವ ಭೀತಿಯಲ್ಲಿದ್ದರೆ ಇನ್ನು ಕೆಲವರ ಕುಟುಂಬಗಳು ಬೀದಿಗೆ ಬರಬಹುದು ಎಂದು ಹೆದರಿದ್ದಾರೆ’ ಎಂದು ಡಾ. ವಿಜ್ ಅವರು ಪ್ರಸ್ತುತ ಪರಿಸ್ಥಿತಿಯನ್ನು ವಿವರಿಸಿದರು.

ಟಾಪ್ ನ್ಯೂಸ್

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.