ದೇಶಕ್ಕೆ ಮಾದರಿಯಾದ “ಭಿಲ್ವಾರಾ” ನಗರದ 25 ಮಂದಿ ಕೋವಿಡ್ ಸೋಂಕಿತರು ಗುಣಮುಖ
ನೆಗೆಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಈಗಾಗಲೇ 15 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ
Team Udayavani, Apr 10, 2020, 2:27 PM IST
ರಾಜಸ್ಥಾನ್: ಮಾರಕ ಕೋವಿಡ್ 19 ವೈರಸ್ ತಡೆಗಟ್ಟುವ ವಿಚಾರದಲ್ಲಿ ಇಡೀ ದೇಶಕ್ಕೆ ಮಾದರಿಯಾಗಿದ್ದು ರಾಜಸ್ಥಾನದ ಭಿಲ್ವಾರಾ ನಗರ. ಇದೀಗ ಭಿಲ್ವಾರ ಜಿಲ್ಲೆಯಲ್ಲಿನ 28 ಮಂದಿ ಕೋವಿಡ್ 19 ಸೋಂಕು ಪೀಡಿತರಲ್ಲಿ 25 ಮಂದಿ ಗುಣಮುಖರಾಗುವ ಮೂಲಕ ಮತ್ತೊಂದು ಯಶಸ್ಸು ಸಾಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಡೀ ಜಗತ್ತನ್ನೇ ಕೋವಿಡ್ 19 ವೈರಸ್ ಕಂಗೆಡಿಸುತ್ತಿದ್ದರೆ, ಕೋವಿಡ್ ನಿಯಂತ್ರಣಕ್ಕಾಗಿ ದೇಶದಲ್ಲಿ 21 ದಿನಗಳ ಲಾಕ್ ಡೌನ್ ಘೋಷಿಸಲಾಗಿತ್ತು. ಏತನ್ಮಧ್ಯೆ ದೇಶದ ಗಮನ ಸೆಳೆದದ್ದು ರಾಜಸ್ಥಾನದ ಭಿಲ್ವಾರಾ ಜಿಲ್ಲೆ. ಆರಂಭದಲ್ಲಿ ಭಿಲ್ವಾರಾ ಜಿಲ್ಲೆಯನ್ನೇ ಕೋವಿಡ್ ವೈರಸ್ ನ ಕೇಂದ್ರ ಎಂದು ಬಿಂಬಿಸಲಾಗಿತ್ತು. ಮಾರ್ಚ್ 19ರಂದು ಪ್ರಥಮ ಕೋವಿಡ್ ಪ್ರಕರಣ ಪತ್ತೆಯಾಗಿತ್ತು. ಜತೆಗೆ ಸೋಂಕು ಪೀಡಿತರ ಸಂಖ್ಯೆಯೂ ಅಧಿಕವಾಗಿತ್ತು. ಮಾರ್ಚ್ 26ರಂದು ಹಾಗೂ ಆ ನಂತರ ಕೋವಿಡ್ ಗೆ ಇಬ್ಬರು ಸಾವನ್ನಪ್ಪಿದ್ದರು. ತದನಂತರ ಭಿಲ್ವಾರ ಜಿಲ್ಲೆ ಕೈಗೊಂಡ ಕ್ರಮದಿಂದ ಕೋವಿಡ್ ಸೋಂಕು ಪೀಡಿತರ ಸಂಖ್ಯೆ ಗಣನೀಯ ಇಳಿಕೆಯಾಗಿತ್ತು.
28 ಮಂದಿ ಸೋಂಕಿತರಲ್ಲಿ ಇಬ್ಬರು ಸಾವನ್ನಪ್ಪಿದ್ದರು. 26 ಮಂದಿ ಸೋಂಕು ಪೀಡಿತರಲ್ಲಿ ಈಗ 25 ಮಂದಿ ಗುಣಮುಖರಾಗಿದ್ದು, 28ನೇ ಪ್ರಕರಣದ ವ್ಯಕ್ತಿಯನ್ನು ಐಸೋಲೇಶನ್ ನಲ್ಲಿ ಇಡಲಾಗಿದೆ ಎಂದು ವರದಿ ತಿಳಿಸಿದೆ.
ನೆಗೆಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಈಗಾಗಲೇ 15 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಉಳಿದ ಹತ್ತು ಮಂದಿ ವರದಿ ಕೂಡಾ ನೆಗೆಟಿವ್ ಬಂದಿದ್ದು ಎರಡು ದಿನಗಳಲ್ಲಿ ಡಿಸ್ ಚಾರ್ಜ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಭಟ್ ತಿಳಿಸಿದ್ದಾರೆ.
ಭಿಲ್ವಾರ ನಗರದಲ್ಲಿ ಒಟ್ಟು 26 ಲಕ್ಷ ಜನಸಂಖ್ಯೆ ಹೊಂದಿದ್ದು, ಎಲ್ಲರನ್ನೂ ಸ್ಕ್ರೀನಿಂಗ್ ಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿವರಿಸಿದ್ದಾರೆ. ಜೈಪುರ್ ಸೇರಿದಂತೆ ರಾಜಸ್ಥಾನದಲ್ಲಿ ಹಾಟ್ ಸ್ಪಾಟ್ ಎಂದು ಗುರುತಿಸಲ್ಪಟ್ಟ ಪ್ರದೇಶಗಳಲ್ಲಿ ಭಿಲ್ವಾರಾ ಮಾದರಿ ಅನುಸರಿಸುವಂತೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ