ನಮ್ಮ ಸ್ಥಿತಿ ಉತ್ತಮ ; ಫ‌ಲ ಕೊಡುತ್ತಿದೆ ಕೋವಿಡ್ 19 ವೈರಸ್ ವಿರುದ್ಧದ ಹೋರಾಟ


Team Udayavani, Apr 29, 2020, 6:55 AM IST

ನಮ್ಮ ಸ್ಥಿತಿ ಉತ್ತಮ ; ಫ‌ಲ ಕೊಡುತ್ತಿದೆ ಕೋವಿಡ್ 19 ವೈರಸ್ ವಿರುದ್ಧದ ಹೋರಾಟ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಎರಡು ಹಂತದ ರಾಷ್ಟ್ರವ್ಯಾಪಿ ಲಾಕ್‌ ಡೌನ್‌, ಸಮಯಕ್ಕೆ ಸರಿಯಾದ ನಿರ್ಧಾರಗಳು ಹಾಗೂ ಸೂಕ್ತ ಕ್ರಮಗಳ ಮೂಲಕ ಭಾರತವು ಕೋವಿಡ್ 19 ವೈರಸ್ ವಿರುದ್ಧದ ಹೋರಾಟದಲ್ಲಿ ಯಶಸ್ಸು ಸಾಧಿಸುವತ್ತ ಸಾಗಿದೆ.

ಭಾರತದಷ್ಟೇ ಜನಸಂಖ್ಯೆಯ ಗಾತ್ರ ಬರುವಂಥ 20 ದೇಶಗಳ ಒಟ್ಟಾರೆ ಪರಿಸ್ಥಿತಿಗೆ ಹೋಲಿಸಿದರೆ, ಆ ದೇಶಗಳಲ್ಲಿ ಭಾರತಕ್ಕಿಂತ 84 ಪಟ್ಟು ಅಧಿಕ ಪ್ರಕರಣಗಳು ಪತ್ತೆಯಾಗಿರುವುದೇ ಇದಕ್ಕೆ ಸಾಕ್ಷಿ.

ಈ ಅಂಶವನ್ನು ಕೇಂದ್ರ ಆರೋಗ್ಯ ಖಾತೆ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್‌ ಮಂಗಳವಾರ ನಡೆಸಿದ ದೈನಂದಿನ ಸುದ್ದಿಗೋಷ್ಠಿಯಲ್ಲಿ ಪುಷ್ಟೀಕರಿಸಿದ್ದಾರೆ.

ಗರಿಷ್ಠ ಕೋವಿಡ್ 19 ವೈರಸ್ ಪ್ರಕರಣಗಳು ಪತ್ತೆಯಾಗಿರುವಂಥ ಸುಮಾರು 20 ದೇಶಗಳಲ್ಲಿನ ಸಾವಿನ ಸಂಖ್ಯೆಯನ್ನು ಲೆಕ್ಕ ಹಾಕಿದರೆ, ಭಾರತದಲ್ಲಿ ಸಂಭವಿಸಿರುವ ಸಾವಿನ ಪ್ರಮಾಣ ಅವುಗಳಿಗಿಂತ 200 ಪಟ್ಟು ಕಡಿಮೆಯಿದೆ.

ಅಲ್ಲದೆ, ನಮ್ಮ ದೇಶದಲ್ಲಿ ಗುಣಮುಖರಾಗುವವರ ಪ್ರಮಾಣವು ಮಂಗಳವಾರ ಸಂಜೆ ವೇಳೆಗೆ ಶೇ.23.3 ಆಗಿದೆ. ಇದು ಕೋವಿಡ್ 19 ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಸಾಧಿಸಿರುವ ಯಶಸ್ಸಿನ ಫ‌ಲ ಎಂದು ಅವರು ಹೇಳಿದ್ದಾರೆ.

ಎ.27ರಂದು ವಿಶ್ವ ಆರೋಗ್ಯ ಸಂಸ್ಥೆ (WHO) ನೀಡಿರುವ ದತ್ತಾಂಶದ ಪ್ರಕಾರ, ನಾವು ಈ 20 ದೇಶಗಳಲ್ಲಿನ ಸೋಂಕಿತರ ಸಂಖ್ಯೆಯನ್ನು ಭಾರತದಲ್ಲಿನ ಸೋಂಕಿತರ ಸಂಖ್ಯೆಯೊಂದಿಗೆ ಹೋಲಿಕೆ ಮಾಡಿ ನೋಡಿದೆವು. ಆಗ, ಭಾರತದ ಸೋಂಕಿತರಿಗೆ ಹೋಲಿಸಿದರೆ ಈ ದೇಶಗಳ ಒಟ್ಟಾರೆ ಸೋಂಕಿತರ ಪ್ರಮಾಣ ಶೇ.84ರಷ್ಟು ಹೆಚ್ಚಿರುವುದು ತಿಳಿದುಬಂದು. ಅಲ್ಲದೆ, ಈ ದೇಶಗಳು ಭಾರತಕ್ಕಿಂತ ಶೇ.200ರಷ್ಟು ಹೆಚ್ಚು ಸಾವುಗಳನ್ನು ಕಂಡಿವೆ ಎಂಬುದೂ ಗೊತ್ತಾಯಿತು ಎಂದಿದ್ದಾರೆ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್.

ಯಾವೆಲ್ಲ ದೇಶಗಳ ಲೆಕ್ಕ?: ಅಮೆರಿಕ, ಸ್ಪೇನ್‌, ಇಟಲಿ, ಯು.ಕೆ., ರಷ್ಯಾ, ಟರ್ಕಿ, ಜರ್ಮನಿ, ಫ್ರಾನ್ಸ್‌, ಇರಾನ್‌, ಬ್ರೆಜಿಲ್, ಬೆಲ್ಜಿಯಂ, ಕೆನಡಾ, ನೆದರ್ಲೆಂಡ್‌, ಸ್ವಿಜರ್ಲೆಂಡ್‌, ಪೆರು, ಪೋರ್ಚುಗಲ್‌, ಈಕ್ವೆಡಾರ್‌, ಸ್ವೀಡನ್‌, ಐರ್ಲೆಂಡ್‌ ಮತ್ತು ಸೌದಿ ಅರೇಬಿಯಾಗಳನ್ನು ಈ ಹೋಲಿಕೆಗೆ ಬಳಸಲಾಗಿದೆ.

ಏಕೆಂದರೆ, ಈ 20 ರಾಷ್ಟ್ರಗಳ ಒಟ್ಟು ಜನಸಂಖ್ಯೆಯನ್ನು ಲೆಕ್ಕ ಹಾಕಿದರೆ, ಭಾರತದ ಒಟ್ಟು ಜನಸಂಖ್ಯೆಗೆ ಸಮವಾಗುತ್ತದೆ. ಹೀಗಾಗಿಯೇ, ಈ ದೇಶಗಳ ಒಟ್ಟಾರೆ ಸೋಂಕಿತರೊಂದಿಗೆ ಭಾರತದ ಸೋಂಕಿನ ಸಂಖ್ಯೆಯನ್ನು ಹೋಲಿಕೆ ಮಾಡಲಾಗಿದೆ.

24 ಗಂಟೆಗಳಲ್ಲಿ 1,543 ಪ್ರಕರಣ: ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ 51 ಮಂದಿ ಮೃತಪಟ್ಟಿದ್ದು, 1,543 ಹೊಸ ಪ್ರಕರಣಗಳು ಪತ್ತೆಯಾಗಿವೆ. ಪ್ರಕರಣಗಳು ದ್ವಿಗುಣಗೊಳ್ಳುವ ಪ್ರಮಾಣ 10.2 ದಿನಗಳಿಗೆ ಏರಿಕೆಯಾಗಿವೆ ಎಂದೂ ಅಗರ್ವಾಲ್‌ ಮಾಹಿತಿ ನೀಡಿದ್ದಾರೆ.

ಒಟ್ಟಾರೆ ಈವರೆಗೆ ಸುಮಾರು 7 ಸಾವಿರ ಮಂದಿ ಗುಣಮುಖರಾಗಿ ಮನೆಗಳಿಗೆ ತೆರಳಿದ್ದಾರೆ. ಕೇವಲ ಒಂದೇ ದಿನದಲ್ಲಿ 684 ರೋಗಿಗಳು ಗುಣಮುಖರಾಗಿದ್ದು, ಗುಣಮುಖರಾಗುವವರ ಪ್ರಮಾಣ ಶೇ.23.3ಕ್ಕೇರುವಂತಾಗಿದೆ. ಕಳೆದ 28 ದಿನಗಳಲ್ಲಿ ದೇಶದ 17 ಜಿಲ್ಲೆಗಳಲ್ಲಿ ಯಾವುದೇ ಹೊಸ ಪ್ರಕರಣ ಪತ್ತೆಯಾಗಿಲ್ಲ ಎಂದೂ ಅವರು ತಿಳಿಸಿದ್ದಾರೆ.

ಮಾದರಿ ಯಾವುದೂ ಇಲ್ಲ: ಕೋವಿಡ್ 19 ವೈರಸ್ ವ್ಯಾಪಿಸದಂತೆ ತಡೆಯಲು ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಳ್ಳುತ್ತಿದ್ದೇವೆ. ಕೆಲವು ಪ್ರದೇಶಗಳಲ್ಲಿ ವ್ಯಾಪಿಸುವಿಕೆಗೆ ಕಡಿವಾಣ ಬಿದ್ದಿದೆ. ಇಲ್ಲಿ ಭಿಲ್ವಾರಾ, ಆಗ್ರಾ ಮಾದರಿ ಎಂಬ ಪ್ರಶ್ನೆಯೇ ಬರುವುದಿಲ್ಲ.

ಈ ರೀತಿಯ ಲೇಬಲ್‌ ಹಚ್ಚುವ ಮೊದಲು ಎಲ್ಲರೂ ಸ್ವಲ್ಪ ಎಚ್ಚರಿಕೆ ವಹಿಸಬೇಕಾಗುತ್ತದೆ ಎಂದು ಅಗರ್ವಾಲ್‌ ಹೇಳಿದ್ದಾರೆ. ಜತೆಗೆ, ರೋಗಿಯ ವರದಿ ನೆಗೆಟಿವ್‌ ಎಂದು ಬರುವವರೆಗೂ ಆತನ ಹೋಂ ಐಸೋಲೇಷನ್‌ ಮುಂದುವರಿಯುತ್ತದೆ ಎಂದಿದ್ದಾರೆ.

ಏಳು ನಗರಗಳಲ್ಲಿ ಸೋಂಕು ಪ್ರಮಾಣ ಹೆಚ್ಚು
ರಾಷ್ಟ್ರ ರಾಜಧಾನಿ ಹೊಸದಿಲ್ಲಿ, ಮುಂಬಯಿ ಹಾಗೂ ಅಹಮದಾಬಾದ್‌ ನಗರಗಳು ದೇಶದ ಅತಿ ಹೆಚ್ಚು ಸೋಂಕು ಪ್ರಕರಣಗಳು ದಾಖಲಾಗಿರುವ ನಗರಗಳಲ್ಲಿ ಸ್ಥಾನ ಪಡೆದಿವೆ ಎಂದು ನೀತಿ ಆಯೋಗದ ಮುಖ್ಯಸ್ಥ ಅಮಿತಾಭ್‌ ಕಾಂತ್‌ ತಿಳಿಸಿದ್ದಾರೆ.

‘ಈ 15 ನಗರಗಳಲ್ಲಿ ಏಳು ನಗರಗಳಲ್ಲಿ ಸೋಂಕಿತರ ಪ್ರಮಾಣ ಅತ್ಯಧಿಕವಾಗಿದೆ. ಅವುಗಳೆಂದರೆ, ಹೈದರಾಬಾದ್‌ (ತೆಲಂಗಾಣ), ಪುಣೆ (ಮಹಾರಾಷ್ಟ್ರ), ಜೈಪುರ (ರಾಜಸ್ಥಾನ), ಇಂದೋರ್‌ (ಮಧ್ಯಪ್ರದೇಶ), ಅಹ್ಮದಾಬಾದ್‌ (ಗುಜರಾತ್‌) ಹಾಗೂ ಮುಂಬಯಿ (ಮಹಾರಾಷ್ಟ್ರ) ಹಾಗೂ ದೆಹಲಿ’ ಎಂದು ಅವರು ತಿಳಿಸಿದ್ದಾರೆ.

ಇನ್ನುಳಿದಂತೆ, ಇದೇ ಪಟ್ಟಿಯಲ್ಲಿರುವ ವಡೋದರಾ (ಗುಜರಾತ್‌), ಕರ್ನೂಲು (ಆಂಧ್ರಪ್ರದೇಶ), ಭೋಪಾಲ್‌ (ಮಧ್ಯಪ್ರದೇಶ), ಜೋಧ್‌ಪುರ (ರಾಜಸ್ಥಾನ), ಆಗ್ರಾ (ಉತ್ತರ ಪ್ರದೇಶ), ಥಾಣೆ (ಮಹಾರಾಷ್ಟ್ರ), ಚೆನ್ನೈ (ತಮಿಳುನಾಡು) ಹಾಗೂ ಸೂರತ್‌ (ಗುಜರಾತ್‌) ತುಂಬಾ ಆಪತ್ತಿನ ಪರಿಸ್ಥಿತಿ ಎದುರಿಸುತ್ತಿವೆ ಎಂದು ಕಾಂತ್‌ ತಿಳಿಸಿದ್ದಾರೆ.

ಭಾರತಕ್ಕೆ ಎಡಿಬಿ 11,300 ಕೋಟಿ ಸಾಲ
ಕೋವಿಡ್ 19 ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಾಥ್‌ ನೀಡಿರುವ ಏಷ್ಯನ್‌ ಡೆವಲಪ್‌ ಮೆಂಟ್‌ ಬ್ಯಾಂಕ್‌(ಎಡಿಬಿ) 11,300 ಕೋಟಿ ರೂ. ಮೊತ್ತವನ್ನು ಸಾಲದ ರೂಪದಲ್ಲಿ ನೀಡುವುದಾಗಿ ಮಂಗಳವಾರ ಘೋಷಿಸಿದೆ.

ಸೋಂಕಿಗೆ ಕಡಿವಾಣ ಮತ್ತು ತಡೆ, ಬಡವರು ಹಾಗೂ ಆರ್ಥಿಕವಾಗಿ ದುರ್ಬಲವಾಗಿರುವ ವಲಯಗಳಿಗೆ ಸಾಮಾಜಿಕ ರಕ್ಷಣೆ ಒದಗಿಸುವುದು ಸೇರಿದಂತೆ ಪ್ರಮುಖ ಆದ್ಯತೆಗಳಿಗೆ ನೆರವಾಗಲೆಂದು ಈ ಮೊತ್ತವನ್ನು ನೀಡುತ್ತಿರುವುದಾಗಿ ಎಡಿಬಿ ತಿಳಿಸಿದೆ. ಇಂಥದ್ದೊಂದು ಸಂಕಷ್ಟದ ಕಾಲದಲ್ಲಿ ಭಾರತದ ಹೋರಾಟಕ್ಕೆ ಬೆಂಬಲ ನೀಡಲು ನಾವು ಸದಾ ಸಿದ್ಧರಿದ್ದೇವೆ ಎಂದು ಬ್ಯಾಂಕ್‌ ಮುಖ್ಯಸ್ಥ ಮಸಾಟ್ಸುಗು ಅಸಕಾವಾ ಹೇಳಿದ್ದಾರೆ.

ಎಂಎನ್‌ಸಿಗಳ ಸ್ವಾಗತಕ್ಕೆ ಸಜ್ಜಾಗಿ
ಕೋವಿಡ್ 19 ವೈರಸ್ ಮೂಲ ಸ್ಥಾನವಾದ ಚೀನಾವನ್ನು ತೊರೆಯಲು ಅಲ್ಲಿ ಬೀಡುಬಿಟ್ಟಿದ್ದ ಅನೇಕ ಬಹುರಾಷ್ಟ್ರೀಯ ಕಂಪನಿಗಳು ಮನಸ್ಸು ಮಾಡಿವೆ. ಅವೆಲ್ಲವನ್ನೂ ನಮ್ಮ ರಾಜ್ಯಗಳತ್ತ ಸೆಳೆಯಲು ಸರ್ವರೀತಿಯ ಪ್ರಯತ್ನಗಳನ್ನು ಮಾಡಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕರೆ ನೀಡಿದ್ದಾರೆ.

ಸೋಮವಾರ ಮುಖ್ಯಮಂತ್ರಿಗಳ ಜತೆಗಿನ ವಿಡಿಯೋ ಕಾನ್ಫರೆನ್ಸ್‌ ವೇಳೆ ಪ್ರಧಾನಿ ಈ ಅಂಶ ಪ್ರಸ್ತಾಪಿಸಿದ್ದಾರೆ. ‘ನಿಮಗೇ (ಸಿಎಂಗಳು) ತಿಳಿದಿರುವಂತೆ ಅನೇಕ ಉದ್ಯಮಗಳು ಚೀನಾವನ್ನು ತೊರೆಯಲು ಸಜ್ಜಾಗಿವೆ. ನಮ್ಮಲ್ಲಿ ಉತ್ತಮ ಬೇಡಿಕೆಯುಳ್ಳ ಮಾರುಕಟ್ಟೆ ವ್ಯವಸ್ಥೆಯಿದೆ. ಸಾಲದ್ದಕ್ಕೆ ಅಗಾಧವಾದ ಮಾನವ ಶಕ್ತಿಯಿದೆ.

ಇದರ ಜೊತೆಗೆ, ಸೂಕ್ತ ಮೂಲಸೌಕರ್ಯಗಳನ್ನು ಕಲ್ಪಿಸಿಕೊಟ್ಟರೆ ಚೀನಾದಿಂದ ಕಾಲ್ತೆಗೆಯುವ ಬಹುತೇಕ ಎಲ್ಲಾ ಕಂಪನಿಗಳು ನಮ್ಮಲ್ಲಿ ನೆಲೆಯೂರುವಂತೆ ಮಾಡಬಹುದು’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.