ಗೋ ಕೋವಿಡ್ ಕಾರ್ಯಕ್ಕೆ ಸ್ವಸಹಾಯ ಸಂಘಗಳ ಸದಸ್ಯರ ಸಾಥ್‌


Team Udayavani, Apr 21, 2020, 6:24 AM IST

ಗೋ ಕೋವಿಡ್ ಕಾರ್ಯಕ್ಕೆ ಸ್ವಸಹಾಯ ಸಂಘಗಳ ಸದಸ್ಯರ ಸಾಥ್‌

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಣಿಪಾಲ: ಕೋವಿಡ್‌-19 ವೈರಸ್‌ ಅನ್ನು ಸೋಲಿಸಲು ದೇಶಾದ್ಯಂತ ಲಾಕ್‌ಡೌನ್‌ ಹೇರಲಾಗಿದೆ. ಈ ಮಧ್ಯೆ 1.3 ಬಿಲಿಯನ್‌ ಭಾರತೀಯರು ಮನೆಯಲ್ಲಿ ಬಂದಿಯಾಗಿದ್ದಾರೆ.

ಇವುಗಳ ನಡುವೆ ಮಹಿಳೆಯರ ಸ್ವ-ಸಹಾಯ ಗುಂಪುಗಳ ಸಾಮೂಹಿಕ ಶಕ್ತಿಯ ಪರಿಚಯ ದೇಶಕ್ಕೆ ಆಗುತ್ತಿದೆ. ನಗರಗಳಿಂದ ದೂರ ಇರುವ ಭಾರತದ 90 ಪ್ರತಿಶತ ಜಿಲ್ಲೆಗಳಲ್ಲಿ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ಫೇಸ್‌ ಮಾಸ್ಕ್ ಗಳನ್ನು ತಯಾರಿಸುತ್ತಿದ್ದಾರೆ.

ಬಡತನ ದೂರ
ಸುಮಾರು 15 ವರ್ಷಗಳ ಹಿಂದೆ ಆರಂಭವಾದ ಈ ಮಹಿಳಾ ಚಳವಳಿ ಇಂದು ಈ ಕಷ್ಟ ಕಾಲದಲ್ಲಿ ಎಷ್ಟು ಮಹತ್ವ ಎಂಬುದನ್ನು ತೋರಿಸಿಕೊಡುತ್ತಿದೆ. ಸದ್ಯ ದೇಶಾದ್ಯಂತ ಇದು ಅಮೂಲ್ಯವಾದ ಸಂಪನ್ಮೂಲ ಎಂದು ಸಾಬೀತಾಗಿದೆ.

ಗ್ರಾಮೀಣ ಪ್ರದೇಶದ ಬಡ ಮಹಿಳೆಯರನ್ನು ಸ್ವ-ಸಹಾಯ ಗುಂಪುಗಳ ಸದಸ್ಯರನ್ನಾಗಿಸಲಾಗಿದ್ದು, ಈ ಮೂಲಕ ಬಡತನವನ್ನು ಕಡಿಮೆ ಮಾಡುವ ಭಾರತದ ಪ್ರಮುಖ ಕಾರ್ಯಕ್ರಮವಾಗಿ ಬದಲಾಗಿದೆ.

ಎರಡು ದಶಕಗಳಲ್ಲಿ ಭಾರತದ ಸ್ವಸಹಾಯ ಸಂಘವು ಸಣ್ಣ ಉಳಿತಾಯದ ಮೂಲ ಮತ್ತು ಸಾಲ ಸೌಲಭ್ಯಗಳು ವಿಕಸನಗೊಂಡಿದೆ. ಇದು ವಿಶ್ವದ ಅತಿದೊಡ್ಡ ಬಡವರ ಸಾಂಸ್ಥಿಕ ವೇದಿಕೆಯಾಗಿ ಇಂದು ಬದಲಾಗಿದೆ. ಇಂದು 67 ಮಿಲಿಯನ್‌ ಭಾರತೀಯ ಮಹಿಳೆಯರು ಸುಮಾರು 6 ಮಿಲಿಯನ್‌ ಸ್ವಸಹಾಯ ಸಂಘಗಳ ಸದಸ್ಯರಾಗಿದ್ದಾರೆ.

ಸಮವಸ್ತ್ರ ಬದಲು ಮಾಸ್ಕ್ ತಯಾರಿ
ಒಡಿಶಾದಲ್ಲಿ ಶಾಲಾ ಸಮವಸ್ತ್ರವನ್ನು ಹೊಲಿಯುವುದರಲ್ಲಿ ನಿರತರಾಗಿದ್ದ ಬಡ ಗ್ರಾಮೀಣ ಮಹಿಳೆಯರು ಈಗ ಮುಖವಾಡಗಳನ್ನು ಹೊಲಿಯುತ್ತಿದ್ದಾರೆ. ಎರಡು ವಾರಗಳಲ್ಲಿ ಈ ಮಹಿಳೆಯರು 1 ಮಿಲಿಯನ್‌ಗಿಂತಲೂ ಹೆಚ್ಚು ಮುಖವಾಡಗಳನ್ನು ತಯಾರಿಸಿದ್ದಾರೆ.

19 ಮಿಲಿಯನ್‌ ಮಾಸ್ಕ್
27 ಭಾರತೀಯ ರಾಜ್ಯಗಳಲ್ಲಿ ಸುಮಾರು 20,000 ಸ್ವಸಹಾಯ ಸಂಘಗಳು 19 ಮಿಲಿಯನ್‌ಗೂ ಹೆಚ್ಚು ಮುಖಗವಸುಗಳನ್ನು ಉತ್ಪಾದಿಸಿವೆ. ಜತೆಗೆ 1 ಲಕ್ಷ ಲೀಟರ್‌ ಸ್ಯಾನಿಟೈಸರ್‌ ಮತ್ತು ಸುಮಾರು 50,000 ಲೀಟರ್‌ ಹ್ಯಾಂಡ್‌ ವಾಶ್‌ ಉತ್ಪಾದಿಸಿವೆ.

ಅಡುಗೆಮನೆಗಳು
ಕೆಲವು ಪ್ರದೇಶಗಳಲ್ಲಿ ವಲಸೆ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಇದನ್ನು ಗಮನಿಸಿ, ಸ್ವಸಹಾಯ ಸಂಘಗಳು ದೇಶಾದ್ಯಂತ 10,000ಕ್ಕೂ ಹೆಚ್ಚು ಸಮುದಾಯ ಅಡುಗೆಮನೆಗಳನ್ನು ಸ್ಥಾಪಿಸಿವೆ.

ಆಹಾರ ಪ್ಯಾಕೆಟ್‌
ಕೇರಳದಲ್ಲಿನ ‘ಕುಟುಂಬ ಶ್ರೀ’ ಯೋಜನೆಯಡಿ 4.4 ಮಿಲಿಯನ್‌ ಸದಸ್ಯರನ್ನು ಹೊಂದಿರುವ ಮಹಿಳಾ ಸಂಘ ಹಲವು ವರ್ಷಗಳಿಂದ ಸಾಮುದಾಯಿಕ ಅಡುಗೆ ಕಾರ್ಯಗಳನ್ನು ನಡೆಸುತ್ತಾ ಬಂದಿದೆ. ಈಗ ರಾಜ್ಯಾದ್ಯಂತ 1,300 ಅಡುಗೆ ಮನೆಗಳನ್ನು ನಡೆಸುತ್ತಿವೆ.

ಜತೆಗೆ ಕ್ಯಾರೆಂಟೈನ್‌ ಮತ್ತು ಹಾಸಿಗೆ ಹಿಡಿದವರಿಗೆ ಆಹಾರವನ್ನು ತಲುಪಿಸುತ್ತಿವೆ. ಬಡತನ ಹೆಚ್ಚಿರುವ ಝಾರ್ಖಂಡ್‌ನ‌ಲ್ಲಿ ಸ್ವಸಹಾಯ ಸಂಘಗಳು ಆಹಾರ ಪ್ಯಾಕೆಟ್‌ಗಳನ್ನು ಒದಗಿಸಲು ಜಿಲ್ಲಾಡಳಿತಗಳಿಗೆ ನೆರವಾಗುತ್ತಿದೆ.

ಏನು ಮಾಡುತ್ತಿವೆ
ಈಗ ಈ ಮಹಿಳೆಯರಲ್ಲಿ ಅನೇಕರು ಸ್ವಸಹಾಯದ ಮೂಲಕ ಬಡತನದ ರೇಖೆಯಿಂದ ಪಾರಾಗಿದ್ದಾರೆ. ಇಂದು ಕೋವಿಡ್‌ -19 ವೈರಸ್‌ ವಿರುದ್ಧದ ನಮ್ಮ ಹೋರಾಟದಲ್ಲಿ ಈ ಮಹಿಳಾ ಗುಂಪುಗಳು ನಿರ್ಣಾಯಕ ಪಾತ್ರ ವಹಿಸುತ್ತಿವೆ.

ಮಾಸ್ಕ್ ಗಳು, ಸ್ಯಾನಿಟೈಸರ್‌ಗಳು ಮತ್ತು ರಕ್ಷಣಾ ಸಾಧನಗಳಲ್ಲಿನ ಕೊರತೆಯನ್ನು ಪೂರೈಸುತ್ತಿವೆ. ಇವುಗಳ ಕೊರತೆಯನ್ನು ನೀಗಿಸಲು ದೇಶಾದ್ಯಂತ ಗುಂಪುಗಳು ತೀವ್ರವಾಗಿ ಕಾರ್ಯನಿರ್ವಹಿಸುತ್ತಿವೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.