ದುಬಾೖಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರು

ಕೆಳ ಮಧ್ಯಮ, ಕಟ್ಟಡ ಕಾರ್ಮಿಕರೇ ಹೆಚ್ಚು ; ಸರಕಾರದ ಸಹಾಯ ನಿರೀಕ್ಷೆ

Team Udayavani, Apr 15, 2020, 7:00 AM IST

ದುಬಾೖಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ದುಬಾೖ ಸಹಿತ ಅರಬ್‌ ಸಂಯುಕ್ತ ಒಕ್ಕೂಟದ (ಯುಎಇ) ದೇಶಗಳಲ್ಲಿ ದುಡಿಯುತ್ತಿರುವ ಲಕ್ಷಾಂತರ ಕನ್ನಡಿಗರು ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರು ಅಲ್ಲಿರಲಾಗದೆ, ಇಲ್ಲಿಗೆ ಬರಲು ಅವಕಾಶವಿಲ್ಲದೆ ಅತಂತ್ರರಾಗಿದ್ದು, ರಾಜ್ಯ ಮತ್ತು ಕೇಂದ್ರ ಸರಕಾರಗಳ ಸಹಾಯದ ನಿರೀಕ್ಷೆಯಲ್ಲಿದ್ದಾರೆ.

ಕೇಂದ್ರ ಸರಕಾರ ಅಧಿಕೃತ ಲಾಕ್‌ಡೌನ್‌ ಘೋಷಣೆ ಮಾಡುವ ಮೊದಲೇ ಅಂತಾರಾಷ್ಟ್ರೀಯ ವಿಮಾನಯಾನ ಸ್ಥಗಿತಗೊಳಿಸಿದ್ದರಿಂದ ಕೊಲ್ಲಿ ದೇಶಗಳಲ್ಲಿ ಕೆಲಸ ಮಾಡುತ್ತಿರುವ ಕೆಳಮಧ್ಯಮ ವರ್ಗದ ಉದ್ಯೋಗಿಗಳು, ಕಟ್ಟಡ ಕಾರ್ಮಿಕರು, ಇತರ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಹೆಚ್ಚು ತೊಂದರೆಗೆ ಒಳಗಾಗಿದ್ದಾರೆ.

ಇದಲ್ಲದೆ ಸಂಬಂಧಿಕರನ್ನು ನೋಡಲು ಹೋದವರು, 3 ತಿಂಗಳ ವಿಸಿಟಿಂಗ್‌ ವೀಸಾದಲ್ಲಿ ತೆರಳಿದವರು, ಅರ್ಧವಾರ್ಷಿಕ ಉದ್ಯೋಗಿಗಳು ಮತ್ತು ಕೋವಿಡ್ 19 ವೈರಸ್ ಕಾರಣಕ್ಕಾಗಿ ನೂರಾರು ಕಂಪೆನಿಗಳಿಂದ ಕೆಲಸ ಕಳೆದುಕೊಂಡಿರುವವರು ಇದ್ದಾರೆ.

ವಿಶೇಷ ವಿಮಾನ ಸೌಲಭ್ಯ ಕಲ್ಪಿಸಿದರೆ ಕೊರೊನಾ ಪಾಸಿಟಿವ್‌ ಅಲ್ಲದವರನ್ನು ಮಾತ್ರ ವಾಪಸ್‌ ಕಳುಹಿಸುವ ಖರ್ಚು ವೆಚ್ಚಗಳನ್ನು ಭರಿಸಲು ಅಲ್ಲಿನ ಕನ್ನಡ ಪರ ಸಂಘಟನೆಗಳು, ಕನ್ನಡಿಗ ಉದ್ಯಮಿಗಳು ಸಿದ್ಧರಿದ್ದಾರೆ. ಜತೆಗೆ ಭಾರತಕ್ಕೆ ತೆರಳಿದ ಬಳಿಕ ಕ್ವಾರಂಟೈನ್‌ ವ್ಯವಸ್ಥೆಯ ಖರ್ಚನ್ನೂ ಭರಿಸಲೂ ಸಿದ್ಧರಿದ್ದಾರೆ ಎಂದು ಯುಎಇ ಕನ್ನಡಿಗರ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ‘ಉದಯವಾಣಿ’ಗೆ ತಿಳಿಸಿದ್ದಾರೆ.

ಕೇಂದ್ರ ಸರಕಾರದೊಂದಿಗೆ ಚರ್ಚಿಸಿ ಅಗತ್ಯವಿದ್ದರೆ ವೀಸಾ ಅವಧಿ ಮುಗಿದವರು ಮತ್ತು ತುರ್ತಾಗಿ ವಾಪಸ್‌ ಬರಲು ಇಚ್ಛಿಸುವವರನ್ನು ಅಲ್ಲಿಯೇ ತಪಾಸಣೆ ನಡೆಸಿ, ನೆಗೆಟಿವ್‌ ವರದಿ ಬಂದವರನ್ನು ರಾಜ್ಯಕ್ಕೆ ಕರೆತಂದು ಪ್ರತ್ಯೇಕವಾಗಿ ಕ್ವಾರಂಟೈನ್‌ನಲ್ಲಿ ಇಡುವ ವ್ಯವಸ್ಥೆ ಮಾಡಿದರೆ ಅನುಕೂಲ ಎಂದು ಯುಎಇ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಅಧ್ಯಕ್ಷ ಪ್ರವೀಣ್‌ ಶೆಟ್ಟಿ ಮುಖ್ಯಮಂತ್ರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಆದರೆ ದುಬಾೖಯಲ್ಲಿ ಕೋವಿಡ್ 19 ವೈರಸ್ ಸೋಂಕು ಹರಡುವಿಕೆ ವೇಗವಾಗಿದೆ. ಪ್ರತಿದಿನ ನೂರಾರು ಪ್ರಕರಣಗಳು ದಾಖಲಾಗುತ್ತಿವೆ. ಕಾರ್ಮಿಕರು ಒಂದೇ ರೂಮಿನಲ್ಲಿ 10-15 ಜನ ವಾಸವಾಗಿರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುತ್ತಿಲ್ಲ. ಸಮಯಕ್ಕೆ ಸರಿಯಾದ ಚಿಕಿತ್ಸೆ ಪಡೆಯಲಾಗದ ಪರಿಸ್ಥಿತಿ ಇರುವುದರಿಂದ ಭವಿಷ್ಯದ ಬಗ್ಗೆ ಆತಂಕಗೊಂಡಿದ್ದಾರೆ. ಲಾಕ್‌ಡೌನ್‌ ಇರುವುದರಿಂದ ಅಗತ್ಯ ವಸ್ತು ಸಿಗದೆ ಯಾರಿಗೂ ಹೇಳಲಾಗದ ಸ್ಥಿತಿಯಲ್ಲಿ ಅನೇಕರು ಕಾಲ ಕಳೆಯುವಂತಾಗಿದೆ.

ನಾಲ್ಕು ಲಕ್ಷ ಕನ್ನಡಿಗರು
ಯುಎಇಯಲ್ಲಿ ಸುಮಾರು 4 ಲಕ್ಷ ಕನ್ನಡಿಗರಿದ್ದಾರೆ. ದುಬಾೖ ಒಂದರಲ್ಲಿಯೇ ಸುಮಾರು 2 ಲಕ್ಷ ಕನ್ನಡಿಗರು ವಾಸವಾಗಿದ್ದಾರೆ. ಅವರಲ್ಲಿ ಬಹುತೇಕ ನೌಕರರು ಮತ್ತು ಕೂಲಿ ಕಾರ್ಮಿಕ ವರ್ಗದವರು. ಅಲ್ಲಿನ ಸರಕಾರ ಲಾಕ್‌ಡೌನ್‌ ಜಾರಿಗೊಳಿಸಿದ್ದರೂ ಕಟ್ಟಡ ನಿರ್ಮಾಣ ವಲಯವನ್ನು ಚಾಲನೆಯಲ್ಲಿ ಇರಿಸಿರುವುದರಿಂದ ಎಂಜಿನಿಯರ್‌ಗಳು ಮತ್ತು ಕಟ್ಟಡ ಕಾರ್ಮಿಕರು ಉದ್ಯೋಗದ ಅನಿವಾರ್ಯದಿಂದ ಸಾಮಾಜಿಕ ಅಂತರ ಕಾಯ್ದು ಕೆಲಸ ಮಾಡುವ ಸ್ಥಿತಿ ಇದೆ.

ದುಬಾೖ, ಯುಎಇ ಸೇರಿದಂತೆ ಇಲ್ಲಿನ ಪ್ರಭುತ್ವಗಳು ಸಹಕಾರ ಮುಂದುವರಿಸಿವೆ. ಆದರೆ ಉದ್ಯೋಗ ಕಳೆದುಕೊಂಡವರು, ಕಾರ್ಮಿಕರು, ಪ್ರವಾಸಿಗಳು ಸೇರಿದಂತೆ ಕರ್ನಾಟಕಕ್ಕೆ ಮರಳಲು ಉತ್ಸುಕರಾಗಿರುವವರನ್ನು ಮರಳಿ ಹುಟ್ಟೂರಿಗೆ ಕಳುಹಿಸಲು ಸರಕಾರಗಳ ಮಟ್ಟದಲ್ಲಿ ಮಾತುಕತೆಯಾಗಬೇಕು. ಕನ್ನಡಿಗರ ಸಂಘಟನೆಗಳು ಈ ಬಗ್ಗೆ ಸಂಪೂರ್ಣ ಸಹಕಾರ ನೀಡಲಿವೆ.
– ಸರ್ವೋತ್ತಮ ಶೆಟ್ಟಿ, ಯುಎಇ ಕನ್ನಡಿಗರ ಸಂಘಟನೆ ಅಧ್ಯಕ್ಷ

ಕಷ್ಟದಲ್ಲಿರುವ ಯಾರನ್ನೇ ಕಂಡರೂ ಅವರಿಗೆ ಸಾಧ್ಯವಾದಷ್ಟು ಆಹಾರ ನೀಡುತ್ತಿದ್ದೇವೆ. ಆದರೆ ಎಲ್ಲವೂ ನಮ್ಮಿಂದ ಮಾಡಲು ಸಾಧ್ಯವಾಗುವುದಿಲ್ಲ. ರಾಜ್ಯ ಮತ್ತು ಕೇಂದ್ರ ಸರಕಾರಗಳು ನಮ್ಮ ನೆರವಿಗೆ ಬರಬೇಕು. ಸ್ಥಳೀಯ ಕನ್ನಡಿಗ ಉದ್ಯಮಿಗಳೂ ಸಹಾಯ-ಸಹಕಾರ ನೀಡಿದರೆ ಅನುಕೂಲವಾಗುತ್ತದೆ.
– ಹಿದಾಯತ್‌ ಅಡ್ಡೂರ್‌, ದುಬಾೖ ಕನ್ನಡಿಗ

– ಶಂಕರ ಪಾಗೋಜಿ

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.