ಸಿಂಗಾಪುರದಲ್ಲಿ ಸೋಂಕು ಪ್ರಕರಣ ಹೆಚ್ಚಳ ; ಗೆಲುವಿನ ನಗೆ ಬೀರಿದ್ದ ದೇಶ ಎಡವಿದ್ದೆಲ್ಲಿ?


Team Udayavani, Apr 22, 2020, 11:34 PM IST

ಸಿಂಗಾಪುರದಲ್ಲಿ ಸೋಂಕು ಪ್ರಕರಣ ಹೆಚ್ಚಳ ; ಗೆಲುವಿನ ನಗೆ ಬೀರಿದ ದೇಶ ಎಡವಿದ್ದೆಲ್ಲಿ?

ಈ ದುರಂತವನ್ನು ತಪ್ಪಿಸಲು ಪ್ರಾರಂಭಿಕ ಹಂತದಲ್ಲಿಯೇ ಸರಕಾರ ಕಠಿಣ ಕ್ರಮಗಳನ್ನು ಕೈಗೊಂಡಿತ್ತು.

ಮಣಿಪಾಲ: ಚೀನ, ಅಮೆರಿಕ, ಭಾರತ, ಇಟಲಿ, ಫ್ರಾನ್ಸ್ ಹೀಗೆ ಜಗತ್ತಿನ ಎಲ್ಲ ಪ್ರಬಲ ರಾಷ್ಟ್ರಗಳೂ ಚೋಟುದ್ದುದ ವೈರಾಣುವಿನಿಂದ ಹೈರಾಣಾಗಿ ತಲೆ ಮೇಲೆ ಕೈಹೊತ್ತು ಕುಳಿತಿವೆ. ಈಗ ಸಿಂಗಾಪುರ ಸಹ ಸೋಂಕಿನ ಅಟ್ಟಹಾಸಕ್ಕೆ ನಲುಗಿದೆ.

ಈ ಹಿಂದೆ ಸೋಂಕು ಹರಡುವಿಕೆ ತಡೆಗಟ್ಟಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿರುವ ಇತರೆ ದೇಶಗಳಿಗೆ ಸಿಂಗಾಪುರ ಎಂಬ ಚಿಕ್ಕ ದೇಶ ಮಾದರಿ ಎಂಬ ವರದಿಗಳು ಪ್ರಕಟವಾಗಿದ್ದವು. ಆದರೆ ಇದಕ್ಕೆ ತದ್ವಿರುದ್ಧವಾದ ಬೆಳವಣಿಗೆಗೆ ಸಿಂಗಾಪುರ ಸಾಕ್ಷಿಯಾಗಿದ್ದು, ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ.

ಗೆಲುವಿನ ನಗೆ ಬೀರಿತ್ತು
ಸಿಂಗಾಪುರ ತುಂಬಾ ಪುಟ್ಟ ದೇಶ. ಒಟ್ಟು ಜನಸಂಖ್ಯೆ 5,838,208. ಪ್ರತಿ ಚದರ ಕಿಲೋಮೀಟರ್‌ ಗೆ 8358 ಜನ ಸಾಂದ್ರತೆ ಹೊಂದಿದೆ. ಹಾಗಾಗಿ ಕೋವಿಡ್‌-19 ಕಣ್ಣು ಮುಚ್ಚಿ ತೆರೆಯುವಷ್ಟರಲ್ಲಿ ಇಡೀ ದೇಶವನ್ನೇ ವ್ಯಾಪಿಸುವುದರಲ್ಲಿ ಸಂಶಯವೇ ಇಲ್ಲ.

ಈ ದುರಂತವನ್ನು ತಪ್ಪಿಸಲು ಪ್ರಾರಂಭಿಕ ಹಂತದಲ್ಲಿಯೇ ಸರಕಾರ ಕಠಿಣ ಕ್ರಮಗಳನ್ನು ಕೈಗೊಂಡಿತ್ತು. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಸುಮಾರು 8,930 ಮಂದಿಯನ್ನು ಸರಕಾರ ಗುರುತಿಸಿ, 2,643 ಮಂದಿಗೆ ದಿಗ್ಬಂಧನ ವಿಧಿಸಿತ್ತು. ಸ್ಟೇ ಹೋಂ ನೋಟಿಸ್‌ನಲ್ಲಿ ಸುಮಾರು 38,000 ಮಂದಿಯನ್ನಿಟ್ಟು, ಕಟ್ಟುನಿಟ್ಟಾಗಿ ವ್ಯವಸ್ಥೆಯನ್ನು ಜಾರಿ ಮಾಡಿ ಗೆಲುವಿನ ನಗೆ ಬೀರಿತ್ತು.

ಆದರೀಗ ಮಾರ್ಚ್‌ 17 ರ ಬಳಿಕ ಸೋಂಕು ಪ್ರಕರಣಗಳ ಸಂಖ್ಯೆ ಏರುತ್ತಿದೆ. ಮಾರ್ಚ್‌ ಮಧ್ಯಂತರದಲ್ಲಿ 266ರಷ್ಟಿದ್ದ ಸೋಂಕಿತರ ಸಂಖ್ಯೆ 15 ದಿನಗಳು ಕಳೆಯುವುದರ ಒಳಗೆ 6 ಸಾವಿರಕ್ಕೇರಿತು. ವಿಶ್ವದಲ್ಲೇ ಉತ್ತಮ ದರ್ಜೆಯ ವೈದ್ಯಕೀಯ ಚಿಕಿತ್ಸೆ, ಆಸ್ಪತ್ರೆಗಳು, ಸೋಂಕನ್ನು ನಿಯಂತ್ರಿಸಲು ಉಪಯುಕ್ತವಾಗುವ ಸೌಲಭ್ಯಗಳಿದ್ದರೂ ಸಿಂಗಾಪುರ ಎಡವಿತ್ತು.

ವಲಸೆ ಕಾರ್ಮಿಕರನ್ನು ಮರೆತ ದೇಶ
ಇಷ್ಟೆಲ್ಲ ಸವಲತ್ತುಗಳಿದ್ದರೂ ಎಲ್ಲಿ ತಪ್ಪಾಯಿತು ಎಂಬ ಪ್ರಶ್ನೆ ಸಹಜವಾಗಿ ಕಾಡುತ್ತದೆ. ಅದಕ್ಕೆ ಉತ್ತರ ಎಂದರೆ ಸರಕಾರವು ವಲಸೆ ಕಾರ್ಮಿಕರನ್ನು ಮರೆತೇ ಬಿಟ್ಟಿತ್ತು. ನಗರಗಳಿಂದಾಚೆಗೆ ವಾಸಿಸುವ ವಲಸೆ ಕಾರ್ಮಿಕರಿಗೆ ಪರೀಕ್ಷೆ ಮಾಡದೇ ಇರುವುದೇ ಸೋಂಕು ಪ್ರಕರಣಗಳ ಹೆಚ್ಚಳಕ್ಕೆ ಕಾರಣ ಎಂದು ಅಂದಾಜು ಮಾಡಲಾಗಿದೆ. ಹೊರ ದೇಶಗಳಿಂದ ಬಂದ ಸಾವಿರಾರು ಕಾರ್ಮಿಕರನ್ನು ತಪಾಸಣೆ ಮಾಡದೇ ದೇಶದೊಳಗೆ ಬಿಡಲಾಗಿತ್ತು ಎನ್ನಲಾಗಿದೆ.

ಸಾಮಾಜಿಕ ಅಂತರ ಅವಗಣನೆ
ಈ ಕಾರ್ಮಿಕರು ಇರುವ ಪ್ರದೇಶಗಳಲ್ಲಿ ಜನ ಸಾಂದ್ರತೆಯೂ ಹೆಚ್ಚಿದ್ದು, ಇಕ್ಕಟ್ಟಿನ ಪ್ರದೇಶದಲ್ಲಿ ಸಹಸ್ರಾರು ಕುಟುಂಬಗಳು ಜೀವನ ನಡೆಸುತ್ತಿವೆ. ಜತೆಗೆ ಇಲ್ಲಿ ಯಾವುದೇ ಲಾಕ್‌ಡೌನ್‌ ನಿಯಮಗಳು ಜಾರಿ ಇಲ್ಲ ಎಂಬ ಮಾಹಿತಿ ದೃಢಪಟ್ಟಿದ್ದು, ಸಾಮಾಜಿಕ ಅಂತರವನ್ನು ಅವಗಣಿಸಲಾಗಿದೆ. ಇವೆಲ್ಲವೂ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ಈಗ ಹೊರ ದೇಶಗಳಿಂದ ಬಂದ ವಲಸೆ ಕಾರ್ಮಿಕರನ್ನು ಪತ್ತೆ ಹಚ್ಚುವ ಕೆಲಸ ಆರಂಭಿಸಲಾಗಿದೆ.

ನ್ಯೂಜಿಲೆಂಡ್‌: ಲಾಕ್‌ಡೌನ್‌ ಮುಂದುವರಿಕೆ
ಸೋಂಕು ಹರಡುವುದನ್ನು ನಿಯಂತ್ರಿಸಲು ಲಾಕ್‌ಡೌನ್‌ ನಿಯಮ ಇನ್ನೂ ಒಂದುವಾರ ಮುಂದುವರೆಯಲಿದೆ ಎಂದು ನ್ಯೂಜಿಲೆಂಡ್‌ ಪ್ರಧಾನಿ ಜಸಿಂಡಾ ಆರ್ಡೆರ್ನ್ ಘೋಷಿಸಿದ್ದಾರೆ. ನಾಲ್ಕು ವಾರಗಳಿಂದ ಅಗತ್ಯ ವಸ್ತುಗಳ ಖರೀದಿಗೆ ಹೊರತು ಜನರು ಮನೆಯಿಂದ ಹೊರ ಬರುವುದನ್ನು ನಿರ್ಬಂಧಿಸಲಾಗಿತ್ತು. ಆದರೆ, ಇನ್ನೊಂದು ವಾರದ ಬಳಿಕ ನಿರ್ಮಾಣ ಕಾರ್ಮಿಕರು, ಕಾರ್ಖಾನೆಗಳಲ್ಲಿ ಕೆಲಸ ಮಾಡುವವರು ಮತ್ತಿತರ ಪ್ರಮುಖ ವ್ಯವಹಾರಗಳಿಗೆ ಅವಕಾಶ ಕಲ್ಪಿಸುವುದಾಗಿ ತಿಳಿಸಿದ್ದಾರೆ.

ನ್ಯೂಜಿಲೆಂಡ್‌ನ‌ ಸಾರ್ವಜನಿಕ ಪ್ರಸಾರ ಕೇಂದ್ರದ ಮಾಹಿತಿ ಪ್ರಕಾರ, ‘ಸೋಂಕು ಪ್ರಸರಣ ಶೇ.0.48 ರಷ್ಟಿದ್ದು, ಇತರೆ ದೇಶಗಳಲ್ಲಿ ಶೇ.2.5 ರಷ್ಟಿದೆ. ಹಾಗಾಗಿ ನಾವು ಸೋಂಕು ನಿಯಂತ್ರಣದಲ್ಲಿ ತಕ್ಕ ಮಟ್ಟಿಗೆ ಯಶಸ್ಸು ಸಾಧಿಸಲಾಗಿದೆ’ ಎಂದು ತಿಳಿಸಿದೆ. ಮುಂದಿನ ವಾರದಿಂದ ಕೆಲ ಶಾಲಾ, ಕಾಲೇಜುಗಳನ್ನು ತೆರೆಯಲು ಅವಕಾಶ ನೀಡಲಾಗುತ್ತದೆ. ಆದರೆ, ಪೋಷಕರು ತಮ್ಮ ಮಕ್ಕಳು ಮನೆಯಲ್ಲೇ ಕೂತು ಅಭ್ಯಾಸ ಮಾಡುವಂತೆ ಪ್ರೋತ್ಸಾಹಿಸಿ ಎಂದಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.