ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ
ದೆಹಲಿಯ ನಿಜಾಮುದ್ದೀನ್ ಪ್ರದೇಶ 14ನೇ ಶತಮಾನದ ಸೂಫಿ ಸಂತ ಖ್ವಾಜಾ ನಿಜಾಮುದ್ದೀನ್ ಆಹ್ಲುಲಿಯಾ ದರ್ಗಾವಾಗಿದೆ ಎಂದು ವರದಿ ತಿಳಿಸಿದೆ.
Team Udayavani, Apr 5, 2020, 9:18 PM IST
ಜೋಹಾನ್ಸ್ ಬರ್ಗ್:ದೆಹಲಿಯ ನಿಜಾಮುದ್ದೀನ್ ಮರ್ಕಜ್ ಮಸೀದಿಯ ತಬ್ಲೀಘಿ ಧಾರ್ಮಿಕ ಸಭೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು
ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾಕ್ಕೆ ವಾಪಸ್ ಮರಳಿದ್ದ ಮುಸ್ಲಿಂ ಮೌಲ್ವಿ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವುದಾಗಿ ಕುಟುಂಬದ
ಸದಸ್ಯರು ತಿಳಿಸಿರುವುದಾಗಿ ವರದಿ ತಿಳಿಸಿದೆ.
ಮೌಲಾನಾ ಯೂಸೂಫ್ ಟೂಟ್ಲಾ(80ವರ್ಷ) ಎಂಬ ವ್ಯಕ್ತಿ ಮಾರ್ಚ್ 1ರಿಂದ 15ರವರೆಗೆ ನಡೆದ ತಬ್ಲೀಘಿ ಜಮಾತ್ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದಾಗಿ ವರದಿ ತಿಳಿಸಿದೆ. ಇದರೊಂದಿಗೆ ಭಾರತದಲ್ಲಿ ಕೋವಿಡ್ 19 ಸೋಂಕು ಹರಡುವ ಕೇಂದ್ರ ಬಿಂದು ಎಂದು ಪರಿಗಣಿಸಲ್ಪಡುವಂತಾಗಿರುವುದಾಗಿ ವರದಿ ವಿವರಿಸಿದೆ.
ಟೂಟ್ಲಾ ಮಂಗಳವಾರ ಸಾವನ್ನಪ್ಪಿದ್ದು, ಇಸ್ಲಾಮಿಕ್ ರುದ್ರಭೂಮಿಯಲ್ಲಿ ಶವದ ಅಂತ್ಯಸಂಸ್ಕಾರ ನೇರವೇರಿಸಲಾಗಿದೆ ಎಂದು ವರದಿ ತಿಳಿಸಿದೆ. ದೆಹಲಿಯ ನಿಜಾಮುದ್ದೀನ್ ಪ್ರದೇಶ 14ನೇ ಶತಮಾನದ ಸೂಫಿ ಸಂತ ಖ್ವಾಜಾ ನಿಜಾಮುದ್ದೀನ್ ಆಹ್ಲುಲಿಯಾ ದರ್ಗಾವಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ