![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಕೋವಿಡ್: ಭಾರತದಲ್ಲಿ ಸ್ಫುಟ್ನಿಕ್ V ಲಸಿಕೆ ತುರ್ತು ಬಳಕೆಗೆ ತಜ್ಞರ ಸಮಿತಿ ಗ್ರೀನ್ ಸಿಗ್ನಲ್
1,600 ಮಂದಿ ಮೇಲೆ ಸ್ಪುಟ್ನಿಕ್ ಲಸಿಕೆಯ ಪ್ರಯೋಗ ನಡೆಸಲಾಗಿತ್ತು ಎಂದು ವರದಿ ಹೇಳಿದೆ.
Team Udayavani, Apr 12, 2021, 4:04 PM IST
![ಕೋವಿಡ್ : ಭಾರತದಲ್ಲಿ ಸ್ಫುಟ್ನಿಕ್ V ಲಸಿಕೆ ತುರ್ತು ಬಳಕೆಗೆ ತಜ್ಞರ ಸಮಿತಿ ಗ್ರೀನ್ ಸಿಗ್ನಲ್](https://www.udayavani.com/wp-content/uploads/2021/04/Covid-Sputnic-620x376.jpg)
ನವದೆಹಲಿ: ಭಾರತದಲ್ಲಿ ಕೋವಿಡ್ 19 ಸೋಂಕು ಕ್ಷಿಪ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಷ್ಯಾದ ಕೋವಿಡ್ ಸ್ಫುಟ್ನಿಕ್ V ಲಸಿಕೆಯನ್ನು ದೇಶದಲ್ಲಿ ಬಳಸಿಕೊಳ್ಳಲು ತಜ್ಞರ ಸಮಿತಿ ಶಿಫಾರಸು ಮಾಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಹೆದ್ದಾರಿ ದರೋಡೆ ಸಂಚು ತಡೆದ ಮಂಗಳೂರು ಪೊಲೀಸರು: ಕುಖ್ಯಾತ T.B ಗ್ಯಾಂಗ್ ನ 8 ಆರೋಪಿಗಳ ಬಂಧನ
ಒಂದು ವೇಳೆ ಸ್ಫುಟ್ನಿಕ್ V ಲಸಿಕೆ ಬಳಕೆಗೆ ಡಿಸಿಜಿಐ(ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ) ಅನುಮತಿ ನೀಡಿದರೆ ಸೇರಂನ ಕೋವಿಶೀಲ್ಡ್, ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ನಂತರ ಸ್ಫುಟ್ನಿಕ್ ಭಾರತದಲ್ಲಿ ಬಳಕೆಯಾಗುತ್ತಿರುವ ಮೂರನೇ ಲಸಿಕೆಯಾಗಲಿದೆ ಎಂದು ವರದಿ ವಿವರಿಸಿದೆ.
ಭಾರತದಲ್ಲಿ ಡಾ.ರೆಡ್ಡೀಸ್ ಸ್ಫುಟ್ನಿಕ್ V ಲಸಿಕೆಯನ್ನು ಉತ್ಪಾದಿಸುತ್ತಿದೆ. ಮೊಡೆರ್ನಾ ಹಾಗೂ ಫೈಜರ್ ಬಳಿಕ ಸ್ಫುಟ್ನಿಕ್ ಕೋವಿಡ್ ಗೆ ಅತ್ಯಂತ (ಶೇ.91.6) ಪರಿಣಾಮಕಾರಿ ಲಸಿಕೆಯಾಗಿದೆ ಎಂದು ವರದಿ ಹೇಳಿದೆ. ಈಗಾಗಲೇ ಭಾರತದಲ್ಲಿ ಸ್ಪುಟ್ನಿಕ್ ಲಸಿಕೆ ಮೂರು ಹಂತದ ಪ್ರಯೋಗ ನಡೆದಿದ್ದು, ದೇಶದಲ್ಲಿ ತುರ್ತು ಬಳಕೆಗೆ ಸ್ಪುಟ್ನಿಕ್ ಗೆ ಅನುಮತಿ ನೀಡಬೇಕೆಂದು ಡಾ.ರೆಡ್ಡೀಸ್ ಫೆಬ್ರುವರಿ 19ರಂದು ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರು.
ಸ್ಫುಟ್ನಿಕ್ ಲಸಿಕೆ ಒಂದು ಬಾರಿ ತೆಗೆದುಕೊಂಡ ಮೇಲೆ ಮನುಷ್ಯನ ದೇಹದೊಳಗಿನ ರೋಗನಿರೋಧಕ ಶಕ್ತಿಯ ಪ್ರತಿಕ್ರಿಯೆ ಹೇಗಿರುತ್ತದೆ ಎಂಬ ಬಗ್ಗೆ ಅಂಕಿಅಂಶ ನೀಡುವಂತೆ ಕೇಂದ್ರದ ತಜ್ಞರ ಸಮಿತಿ ಡಾ.ರೆಡ್ಡೀಸ್ ಗೆ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.
ಅಷ್ಟೇ ಅಲ್ಲ ಸ್ಫುಟ್ನಿಕ್ ಲಸಿಕೆ ಪಡೆದ ನಂತರ ವ್ಯಕ್ತಿಯ ಆರೋಗ್ಯದ ಮೇಲಾಗುವ ಎಲ್ಲಾ ಅಡ್ಡ ಪರಿಣಾಮಗಳ ಬಗ್ಗೆಯೂ ಮಾಹಿತಿ ನೀಡುವಂತೆ ತಜ್ಞರ ಸಮಿತಿ ಸೂಚಿಸಿದೆ. ಭಾರತದಲ್ಲಿ 18ರಿಂದ 99 ವರ್ಷದ ಸುಮಾರು 1,600 ಮಂದಿ ಮೇಲೆ ಸ್ಪುಟ್ನಿಕ್ ಲಸಿಕೆಯ ಪ್ರಯೋಗ ನಡೆಸಲಾಗಿತ್ತು ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.