ಕೋವಿಡ್ 19 ವೈರಸ್ ಎಫೆಕ್ಟ್: ಶ್ರೀಲಂಕಾ ಸಂಸತ್ ಚುನಾವಣೆ 2 ತಿಂಗಳ ಕಾಲ ಮುಂದೂಡಿಕೆ
ಇಂತಹ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸುವುದು ಅಗತ್ಯವಿಲ್ಲ ಎಂದು ಗೋಟಬಯಾ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.
Team Udayavani, Apr 21, 2020, 5:21 PM IST
President Gotabaya Rajapaksa
ಕೊಲಂಬೊ:ಕೋವಿಡ್ 19 ವೈರಸ್ ಹರಡುವಿಕೆ ಹಿನ್ನೆಲೆಯಲ್ಲಿ ಶ್ರೀಲಂಕಾ ಸಂಸತ್ ಚುನಾವಣೆಯನ್ನು ಎರಡು ತಿಂಗಳ ಕಾಲ ಮುಂದೂಡಿರುವುದಾಗಿ ತಿಳಿಸಿದೆ. ಶ್ರೀಲಂಕಾದಲ್ಲಿ ಕೋವಿಡ್ 19 ವೈರಸ್ ಗೆ ಏಳು ಮಂದಿ ಸಾವನ್ನಪ್ಪಿದ್ದು, 295 ಜನರು ಸೋಂಕು ಪೀಡಿತರಾಗಿದ್ದಾರೆ ಎಂದು ವರದಿ ತಿಳಿಸಿದೆ.
ಶ್ರೀಲಂಕಾ ಅಧ್ಯಕ್ಷ ಗೋಟಬಯಾ ರಾಜಪಕ್ಸೆ ಅವರು ಸಂಸತ್ ಅನ್ನು ಮಾರ್ಚ್ 2ರಂದು ವಿಸರ್ಜಿಸಿದ್ದು, ಏಪ್ರಿಲ್ 25ರಂದು ಚುನಾವಣೆ ನಡೆಯಲಿದೆ ಎಂದು ಘೋಷಿಸಿದ್ದರು. ಇದೀಗ ಕೋವಿಡ್ ಹಿನ್ನೆಲೆಯಲ್ಲಿ ಜೂನ್ 20ಕ್ಕೆ ಚುನಾವಣೆ ನಡೆಸುವುದಾಗಿ ತಿಳಿಸಿದ್ದಾರೆ.
ರಾಷ್ಟ್ರೀಯ ಚುನಾವಣಾ ಆಯೋಗದ ಮೂವರು ಸದಸ್ಯರು ಗಜೆಟ್ ನೋಟಿಸ್ ಗೆ ಸಹಿ ಹಾಕಿದ್ದು, ಜೂನ್ 20ರಂದು ಚುನಾವಣೆ ನಡೆಯಲಿದೆ ಎಂದು ಸೋಮವಾರ ಘೋಷಿಸಿದ್ದಾರೆ. ದೇಶದ ಆರೋಗ್ಯ ಮತ್ತು ಭದ್ರತಾ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ವರದಿ ವಿವರಿಸಿದೆ.
ಏತನ್ಮಧ್ಯೆ ಚುನಾವಣೆ ಮುಂದೂಡುವುದರಿಂದ ತಲೆದೋರಲಿರುವ ಸಾಂವಿಧಾನಿಕ ತೊಂದರೆ ಬಗ್ಗೆ ದೇಶದ ಉನ್ನತ ಕೋರ್ಟ್ ನ ಅಭಿಪ್ರಾಯ ಕೇಳುವಂತೆ ಚುನಾವಣಾ ಆಯೋಗ ಅಧ್ಯಕ್ಷ ರಾಜಪಕ್ಸೆಗೆ ಪತ್ರ ಬರೆದು ಮನವಿ ಮಾಡಿಕೊಂಡಿತ್ತು. ಆದರೆ ಚುನಾವಣಾ ಆಯೋಗದ ಕೆಲಸ ಚುನಾವಣಾ ದಿನಾಂಕ ನಿಗದಿಪಡಿಸುವುದು. ಅಲ್ಲದೇ ಇಂತಹ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸುವುದು ಅಗತ್ಯವಿಲ್ಲ ಎಂದು ಗೋಟಬಯಾ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!