ಕೋವಿಡ್ ಕಾರ್ಯಪಡೆ : 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಸರಕಾರಿ ನೌಕರರ ಮಾಹಿತಿ ಕೇಳಿದ ಸರಕಾರ


Team Udayavani, Jul 9, 2020, 6:45 PM IST

ಕೋವಿಡ್ ಕಾರ್ಯಪಡೆ : 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಸರಕಾರಿ ನೌಕರರ ಮಾಹಿತಿ ಕೇಳಿದ ಸರಕಾರ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕಿನ ಹಬ್ಬುವಿಕೆ ಜೋರಾಗುತ್ತಿದೆ.

ಅದರಲ್ಲೂ ಬೆಂಗಳೂರು ನಗರ ಜಿಲ್ಲೆಯಲ್ಲಿ ಇದರ ಪ್ರಮಾಣ ಇನ್ನಷ್ಟು ಹೆಚ್ಚಾಗಿದೆ.

ಈ ನಡುವೆ ಅನ್ ಲಾಕ್ 2 ಪ್ರಕ್ರಿಯೆಯೂ ಜಾರಿಯಲ್ಲಿರುವುದರಿಂದ ದೈನಂದಿನ ಚಟುವಟಿಕೆಗಳನ್ನು ನಡೆಸಿಕೊಂಡೇ ಕೋವಿಡ್ 19 ಸೋಂಕನ್ನು ನಿಯಂತ್ರಿಸುವ ಸಾಹಸಕ್ಕೆ ರಾಜ್ಯ ಸರಕಾರ ಕೈ ಹಾಕಿದೆ.

ಸರಕಾರದ ಈ ಉದ್ದೇಶಕ್ಕೆ ಈಗಿರುವ ಸಿಬ್ಬಂದಿಗಳು ಸಾಕಾಗುತ್ತಿಲ್ಲ. ಹಾಗಾಗಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿರುವ ಎ, ಬಿ ಹಾಗೂ ಸಿ ಗ್ರೂಪ್ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿಗಳನ್ನು ಸೋಂಕು ನಿಯಂತ್ರಣದಲ್ಲಿ ಕೋವಿಡ್ ಯೋಧರನ್ನಾಗಿ ಬಳಸಿಕೊಳ್ಳಲು ಸರಕಾರ ನಿರ್ಧರಿಸಿದೆ.

ಈ ಕಾರಣಕ್ಕಾಗಿ ರಾಜ್ಯ ಸರಕಾರದ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಪತ್ರವೊಂದನ್ನು ಬರೆದಿರುವ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿರು ವಿಜಯ ಭಾಸ್ಕರ್ ಅವರು ಸಂಬಂಧಿತ ಇಲಾಖೆಗಳ ಎಲ್ಲಾ ಸಾರ್ವಜನಿಕ ವಲಯದ ಘಟಕಗಳಲ್ಲಿ ಹಾಗೂ ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಮಾಹಿತಿಯನ್ನು ತಕ್ಷಣವೇ ಕಳುಹಿಸಿಕೊಡುವಂತೆ ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರ, ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೇ ವಾಸವಾಗಿರುವ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಗ್ರೂಪ್ ಎ, ಬಿ, ಸಿ ವೃಂದದ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿಗಳ ಮಾಹಿತಿಯನ್ನು ಸರಕಾರ ಕೇಳಿದೆ.

ಇದರಲ್ಲಿ ಗರ್ಭಿಣಿಯರು, ಬಾಣಂತಿಯರು ಹಾಗೂ ವಿಕಲ ಚೇತನ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ರಿಯಾಯಿತಿ ನೀಡಲಾಗಿದೆ.

ಪ್ರತೀ ಇಲಾಖೆ ಹಾಗೂ ಸಂಸ್ಥೆಯು ತನ್ನಲ್ಲಿರುವ ಒಟ್ಟು ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗದವರಲ್ಲಿ 25 ರಿಂದ 50 ಪ್ರತಿಶತದಷ್ಟನ್ನು ಮಾತ್ರವೇ ಇಲಾಖಾ ಕಾರ್ಯಗಳಿಗೆ ಉಳಿಸಿಕೊಂಡು ಉಳಿದವರೆಲ್ಲರ ಮಾಹಿತಿಯನ್ನು ಕಳುಹಿಸಿಕೊಡುವಂತೆ ಈ ಸೂಚನೆಯಲ್ಲಿ ತಿಳಿಸಲಾಗಿದೆ.

ಹೀಗೆ ಪಟ್ಟಿಮಾಡಲ್ಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪೂರ್ಣ ಸಮಯದ ಆಧಾರದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯ ಆದೇಶದಡಿಯಲ್ಲಿ ಕೆಲಸ ನಿರ್ವಹಿಸುವ ಅಗತ್ಯವಿದ್ದು ಯಾವುದೇ ವಿನಾಯಿತಿ ದೊರಕುವುದಿಲ್ಲ ಎಂದು ಈ ಸೂಚನೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

ಜು.10ರ ಒಳಗಾಗಿ ಈ ಮಾಹಿತಿಯನ್ನು ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸೂಕ್ತ ವಿವರದೊಂದಿಗೆ ಕಳುಹಿಸಿಕೊಡುವಂತೆ ತಿಳಿಸಲಾಗಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.