ಕೋವಿಡ್ 19: ಹಿಮ್ಮೆಟ್ಟಿಸಿದ ಶತಾಯುಷಿ ಮಹಿಳೆ


Team Udayavani, Aug 2, 2020, 6:52 AM IST

ಕೋವಿಡ್ 19: ಹಿಮ್ಮೆಟ್ಟಿಸಿದ ಶತಾಯುಷಿ ಮಹಿಳೆ

ಚಿತ್ರದುರ್ಗ: ನಗರದ 110 ವರ್ಷ ಪ್ರಾಯದ ಅಜ್ಜಿ ಹಾಗೂ ಆಕೆಯ 13 ತಿಂಗಳ ಮರಿ ಮೊಮ್ಮಗಳು ಕೋವಿಡ್ 19 ಸೋಂಕು ಗೆಲ್ಲುವ ಮೂಲಕ ರೋಗಿಗಳಲ್ಲಿ ಹೊಸ ಆತ್ಮವಿಶ್ವಾಸ ಮೂಡಿಸಿದ್ದಾರೆ.

ಕೋವಿಡ್ 19 ಹಿರಿಯರಿಗೆ ಮತ್ತು ಮಕ್ಕಳಿಗೆ ಹೆಚ್ಚು ಅಪಾಯ ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕ ಎಂಬಂತೆ 60 ವರ್ಷ ದಾಟಿದ ಅನೇಕರು ಇದಕ್ಕೆ ಬಲಿಯಾಗಿದ್ದಾರೆ.

“ಜೀವನದಲ್ಲಿ ಯಾವುದಕ್ಕೂ ಹೆದರಿದವಳಲ್ಲ. ಹಾಗಾಗಿ ಕೋವಿಡ್ 19 ಸೋಂಕಿಗೂ ಭಯಪಟ್ಟಿಲ್ಲ’ ಎನ್ನುವ ಸಿದ್ಧಮ್ಮ ಚಿತ್ರದುರ್ಗದ ಕೋವಿಡ್‌ ಆಸ್ಪತ್ರೆಯಿಂದ ಶನಿವಾರ ಬಿಡುಗಡೆಯಾಗಿದ್ದಾರೆ.

ಪ್ರಕರಣದ ವಿವರ
ನಗರದ ಜಿಲ್ಲಾಸ್ಪತ್ರೆ ಎದುರಿನಲ್ಲಿರುವ ಪೊಲೀಸ್‌ ಕ್ವಾಟ್ರಸ್‌ನ ಮೊಮ್ಮಗನ ಮನೆಯಲ್ಲಿದ್ದ ಅಜ್ಜಿ ಸಿದ್ಧಮ್ಮ, 13 ತಿಂಗಳ ಮರಿ ಮೊಮ್ಮಗಳು, ಇಬ್ಬರು ಸೊಸೆಯಂದಿರು ಸೇರಿ ನಾಲ್ವರಿಗೆ ಜು. 27ರಂದು ಕೋವಿಡ್ 19 ದೃಢಪಟ್ಟಿತ್ತು. ಜು. 28ರಂದು ಅವರನ್ನು ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸತತ ಐದು ದಿನಗಳ ಚಿಕಿತ್ಸೆಯ ಬಳಿಕ ಅಜ್ಜಿ ಹಾಗೂ ಮಗು ಡಿಸ್ಚಾರ್ಜ್‌ ಆಗಿದ್ದಾರೆ.

ಆಸ್ಪತ್ರೆಯಿಂದ ನಗುಮೊಗದೊಂದಿಗೆ ಹೊರ ಬಂದ ಅಜ್ಜಿಯು ಮೊಮ್ಮಕ್ಕಳ ಆರೋಗ್ಯ ವಿಚಾರಿಸಿದರು. ಈ ವೇಳೆ ಎದುರಾದ ಮಾಧ್ಯಮದವರು ಮಾತನಾಡಿಸಿದಾಗ, “ನಾನು ಆರೋಗ್ಯವಾಗಿದ್ದೇನೆ. ನನಗೆ ಏನೂ ಆಗಿರಲಿಲ್ಲ. ಆಸ್ಪತ್ರೆ ಚೆನ್ನಾಗಿದೇರಿ. ಊಟಕ್ಕೆ ಗಂಜಿ ಕೊಟ್ರಾ. ನನಗೆ ಗಟ್ಟಿ ಪದಾರ್ಥ ಸೇರಲ್ಲ’ ಎಂದು ನೆನಪಿಗೆ ಬಂದಷ್ಟನ್ನು ಹೇಳಿಕೊಂಡರು.

ಆರೋಗ್ಯವಂತೆ
ಅಜ್ಜಿಗೆ ಬಿಪಿ, ಶುಗರ್‌ ಯಾವುದೂ ಇಲ್ಲ. ಚೆನ್ನಾಗಿದ್ದಾರೆ. ಮುದ್ದೆ ಇಷ್ಟಪಡುತ್ತಾರೆ. 110 ವರ್ಷದಲ್ಲೂ ಅವರ ಕೆಲಸಗಳನ್ನು ಅವರೇ ಮಾಡಿಕೊಳ್ಳುತ್ತಾರೆ, ಓಡಾಡುತ್ತಾರೆ. ಕೋವಿಡ್ 19 ಅವರನ್ನು ಧೃತಿಗೆಡಿಸಿಲ್ಲ ಎನ್ನುತ್ತಾರೆ ಮನೆಯವರು.

ನಮ್ಮ ಆಸ್ಪತ್ರೆಯಲ್ಲಿ ಈ ಹಿಂದೆ ಹಿರಿಯೂರಿನ 97 ವರ್ಷದ ವೃದ್ಧೆ, ಹೊಸದುರ್ಗದ 96 ವರ್ಷದ ವೃದ್ಧೆಗೆ ಚಿಕಿತ್ಸೆ ನೀಡಲಾಗಿತ್ತು. ಅವರಿಬ್ಬರೂ ಗುಣಮುಖರಾಗಿದ್ದರು. ಈಗ 110 ವರ್ಷದ ಅಜ್ಜಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ 110 ವರ್ಷದ ವೃದ್ಧೆ ಚೇತರಿಸಿಕೊಂಡಿದ್ದು ಇದೇ ಮೊದಲ ಪ್ರಕರಣ ಇರಬಹುದು. ಇಂಥವರನ್ನು ನೋಡಿದಾಗ ಚಿಕಿತ್ಸೆ ನೀಡಲು ಉತ್ಸಾಹ ಹೆಚ್ಚಾಗುತ್ತದೆ.
– ಡಾ| ಎಚ್‌.ಜೆ. ಬಸವರಾಜಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕ

ಟಾಪ್ ನ್ಯೂಸ್

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.