ಬೀದಿ ನಾಯಿಗಳಿಗೂ ಕೋವಿಡ್ 19 ವೈರಸ್ ‌ಗೂ ಸಂಬಂಧವಿಲ್ಲ

ವೈರಸ್‌ನ ಮೂಲದೊಂದಿಗೆ ಶ್ವಾನಗಳನ್ನು ತಳುಕುಹಾಕಿದ್ದ ಅಧ್ಯಯನ ; ಇದು ಕೇವಲ ಊಹೆ ಎಂದ ಭಾರತೀಯ ವಿಜ್ಞಾನಿಗಳು

Team Udayavani, May 1, 2020, 6:37 AM IST

ಬೀದಿ ನಾಯಿಗಳಿಗೂ ಕೋವಿಡ್ 19 ವೈರಸ್ ‌ಗೂ ಸಂಬಂಧವಿಲ್ಲ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕೋವಿಡ್ 19 ವೈರಸ್ ಜನ್ಮ ತಳೆಯುವಲ್ಲಿ ಬೀದಿ ನಾಯಿಗಳ ಪಾತ್ರವೂ ಸಾಕಷ್ಟಿದೆ ಎಂದು ಪ್ರತಿಪಾದಿಸಿದ ಅಧ್ಯಯನವನ್ನು ಪುಷ್ಟೀಕರಿಸುವ ಯಾವುದೇ ಆಧಾರಗಳಿಲ್ಲ. ಹೀಗಾಗಿ ಇದು ಕೇವಲ ಊಹೆ ಎಂದು ವಿಜ್ಞಾನಿಗಳು ಸ್ಪಷ್ಟಪಡಿಸಿದ್ದಾರೆ.

ಕೋವಿಡ್ 19 ವೈರಸ್ ‌ನ ಮೂಲದೊಂದಿಗೆ ಬೀದಿ ನಾಯಿಗಳನ್ನು ತಳಕು ಹಾಕಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ವಿಜ್ಞಾನಿಗಳು, ಇಂತಹ ದಾರಿತಪ್ಪಿಸುವ ಅಧ್ಯಯನಗಳಿಂದ ಶ್ವಾನಗಳನ್ನು ಸಾಕುವವರು ಅವುಗಳನ್ನು ಬೀದಿಗೆ ಬಿಡುವ ಅಪಾಯ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಎಪ್ರಿಲ್‌ ಆರಂಭದಲ್ಲಿ ಎರಡು ಇಂಗ್ಲಿಷ್‌ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದ ಕೆನಡಾದ ಒಟ್ಟಾವ ವಿವಿಯ ಕ್ಸುಹುವಾ ಕ್ಸಿಯಾ ಎಂಬುವರು ಬರೆದ ಅಧ್ಯಯನ ವರದಿಯಲ್ಲಿ ಬೀದಿ ನಾಯಿಗಳು ಮತ್ತು ಕೋವಿಡ್ 19 ವೈರಸ್ ‌ನ ಮೂಲಕ್ಕೂ ಸಂಬಂಧ ಕಲ್ಪಿಸಲಾಗಿತ್ತು.

ಮುಖ್ಯವಾಗಿ ಶ್ವಾನಗಳ ಕರುಳು ವೈರಸ್‌ನ ವಿಕಸನ ಹಾಗೂ ವಾಸಕ್ಕೆ ಅನುಕೂಲಕರವಾಗಿರುವ ವಾತಾವರಣ ಹೊಂದಿರುತ್ತದೆ ಎಂದು ಕ್ಸಿಯಾ ಅಭಿಪ್ರಾಯ ಪಟ್ಟಿದ್ದರು. ಹೀಗಾಗಿ, ಬೀದಿ ನಾಯಿಗಳಲ್ಲಿ ವೈರಸ್‌ ಪತ್ತೆಗೆ ಮುಂದಾಗುವಂತೆ ಸಲಹೆ ನೀಡಿದ್ದರು.

ಆದರೆ ಈ ವಾದವನ್ನು ಭಾರತೀಯ ವಿಜ್ಞಾನಿಗಳು ಅಲ್ಲಗಳೆದಿದ್ದಾರೆ. ಇದೊಂದು ಸೈದ್ಧಾಂತಿಕ ಅಧ್ಯಯನ. ಇಲ್ಲಿ ಶ್ವಾನಗಳನ್ನು ವೈರಸ್‌ ಜತೆ ತಳುಕುಹಾಕುವ ಅಂಶಗಳನ್ನು ಸಾಬೀತುಪಡಿಸಲು ಬಲವಾದ ಸಾಕ್ಷ್ಯಗಳಿಲ್ಲ. ಅಲ್ಲದೆ, ಅಧ್ಯಯನದಲ್ಲಿ ಉಲ್ಲೇಖಿಸಿರುವ ನಿರ್ದಿಷ್ಟ ಬದಲಾವಣೆಗಳನ್ನು ಮಾಡುವುದರಿಂದ ವೈರಸ್‌ನ ಪ್ರಭಾವ ಕಡಿಮೆ ಆಗುತ್ತದೆ ಎಂಬುದನ್ನು ಸಾಬೀತು ಮಾಡಲು ಯಾವುದೇ ರೀತಿಯ ಪ್ರಯೋಗಗಳನ್ನು ಸಹ ಮಾಡಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಶ್ವಾನಗಳ ಕರುಳಿನಲ್ಲಿ ವೈರಸ್‌ ವಿಕಸನ ಹೊಂದುತ್ತದೆ ಎಂಬುದು ಅತಿ ದೊಡ್ಡ ಊಹೆಯಾಗಿರಲಷ್ಟೇ ಸಾಧ್ಯ ಎಂದು ಕೋಲ್ಕತಾದ ಐಐಸಿಬಿ ವಿಜ್ಞಾನಿ ಸುಭಜಿತ್‌ ಬಿಸ್ವಾಸ್‌ ಹೇಳಿದ್ದಾರೆ.

ಶ್ವಾನಗಳಿಗೆ ವೈರಸ್‌ ಪತ್ತೆ ತರಬೇತಿ
ಶ್ವಾನಗಳು ಕೋವಿಡ್ 19 ವೈರಸ್‌ ಪತ್ತೆ ಹಚ್ಚಬಲ್ಲವೇ? ಹೌದು ಎನ್ನುತ್ತಿದೆ ಮೆಡಿಕಲ್‌ ಡಿಟೆಕ್ಷನ್‌ ಡಾಗ್ಸ್‌ ಎಂಬ ಬ್ರಿಟಿಷ್‌ ಸಂಸ್ಥೆ. ಮಾತ್ರವಲ್ಲ, ವೈರಸ್‌ನ ಸ್ಯಾಂಪಲ್‌ಗ‌ಳ ವಾಸನೆ ತೋರಿಸುವ ಮೂಲಕ ಶ್ವಾನಗಳಿಗೆ ತರಬೇತಿ ಸಹ ನೀಡಲಾಗುತ್ತಿದೆ. ಪ್ರತಿಯೊಂದು ರೋಗವೂ ಒಂದು ನಿರ್ದಿಷ್ಟ ವಾಸನೆ ಹೊಂದಿರುತ್ತದೆ.

ಹಾಗೇ ಶ್ವಾನಗಳು ಅಂತಹ ವಾಸನೆಯನ್ನು ಗ್ರಹಿಸುವ ವಿಶಿಷ್ಟ ಶಕ್ತಿ ಹೊಂದಿವೆ ಎಂಬ ಅಂಶಗಳ ಆಧಾರದಲ್ಲಿ ಈ ತರಬೇತಿ ನಡೆಯುತ್ತಿದೆ. ಸಂಸ್ಥೆಯು ಈ ಹಿಂದೆ ಕ್ಯಾನ್ಸರ್‌ ಮತ್ತು ಪಾರ್ಕಿನ್ಸನ್‌ ಕಾಯಿಲೆಗಳ ಪತ್ತೆಗೆ ಹಾಗೂ ಬ್ಯಾಕ್ಟೀರಿಯಾ ಮೂಲಕ ಹರಡುವ ಸೋಂಕುಗಳನ್ನು ಪತ್ತೆ ಮಾಡಲು ಶ್ವಾನಗಳನ್ನು ಬಳಸಿಕೊಂಡು, ಅದರಲ್ಲಿ ಯಶಸ್ವಿಯಾಗಿತ್ತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.