ಕೋವಿಡ್ 19 ಹೊಡೆತ: ಜೀವನ ಸಾಗಿಸಲು ಕಿರಾಣಿ ಅಂಗಡಿ ತೆರೆದ ಖ್ಯಾತ ಚಿತ್ರ ನಿರ್ದೇಶಕ!
ಕಿರಾಣಿ ಅಂಗಡಿ ತೆರೆಯಲು ಮಾತ್ರ ಅನುಮತಿ ಇದೆ. ಹೀಗಾಗಿ ನಾನು ಅಂಗಡಿ ತೆರೆಯಲು ನಿರ್ಧರಿಸಿದ್ದೆ.
Team Udayavani, Jul 4, 2020, 1:35 PM IST
ಚೆನ್ನೈ:ದೇಶಾದ್ಯಂತ ನಾಗಾಲೋಟದಲ್ಲಿ ಹರಡುತ್ತಿರುವ ಕೋವಿಡ್ 19 ವೈರಸ್ ಒಂದೆಡೆಯಾದರೆ, ಮತ್ತೊಂದೆಡೆ ವಾಣಿಜ್ಯ, ವ್ಯವಹಾರದ ಮೇಲೆ ದೊಡ್ಡ ಪರಿಣಾಮ ಬೀರಿದೆ. ಅದಕ್ಕೆ ಸೇರ್ಪಡೆ ಎಂಬಂತೆ ಕೋವಿಡ್ ಬಿಕ್ಕಟ್ಟಿನಿಂದಾಗಿ ಚೆನ್ನೈ ಮೂಲದ ಸಿನಿಮಾ ನಿರ್ದೇಶಕರೊಬ್ಬರು ತಮ್ಮ ವೃತ್ತಿಗೆ ಗುಡ್ ಬೈ ಹೇಳಿ ರೇಷನ್ ಅಂಗಡಿ ತೆರೆದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಕಳೆದ ಹತ್ತು ವರ್ಷಕ್ಕೂ ಅಧಿಕ ಕಾಲ ತಮಿಳು ಚಿತ್ರರಂಗದಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದ ಆನಂದ್ ಅವರ ಲೆಕ್ಕಚಾರದಂತೆ ಕೋವಿಡ್ 19 ಭೀತಿ ಮುಂದಿನ ವರ್ಷದವರೆಗೂ ಮುಂದುವರೆಯಲಿದ್ದು, ದೇಶಾದ್ಯಂತ ಚಿತ್ರಮಂದಿರಗಳು ಕೂಡಾ ಬಂದ್ ಆಗಲಿದೆ ಎಂಬುದಾಗಿ ಮನಗಂಡಿದ್ದಾರೆ.
ಇದೇ ಪರಿಸ್ಥಿತಿಯಲ್ಲಿ ಮುಂದುವರಿದರೆ ಜೀವನ ಸಾಗಿಸುವುದು ಕಷ್ಟವಾಗಲಿದೆ ಎಂದು ಅರಿತ ನಿರ್ದೇಶಕ ಆನಂದ್ ತಮ್ಮ ಉಳಿತಾಯದ ಹಣದಲ್ಲಿ ಚೆನ್ನೈನ ಮೌಲಿವಕ್ಕಮ್ ನಲ್ಲಿರುವ ಸ್ನೇಹಿತನ ಕಟ್ಟಡದಲ್ಲಿ ಕಿರಾಣಿ ಅಂಗಡಿ ಪ್ರಾರಂಭಿಸಿದ್ದಾರೆ.
ಕೋವಿಡ್ 19 ವೈರಸ್ ನ ಲಾಕ್ ಡೌನ್ ಸಂದರ್ಭದಲ್ಲಿ ಸುಮ್ಮನೆ ಮನೆಯಲ್ಲಿ ಕುಳಿತಿದ್ದಾಗ, ನನ್ನ ಮನಸ್ಸಿಗೆ ಹೊಳೆದದ್ದು ಕಿರಾಣಿ ಅಂಗಡಿ ತೆರೆಯುವುದು. ತಮಿಳುನಾಡಿನಲ್ಲಿ ಕಿರಾಣಿ ಅಂಗಡಿ ತೆರೆಯಲು ಮಾತ್ರ ಅನುಮತಿ ಇದೆ. ಹೀಗಾಗಿ ನಾನು ಅಂಗಡಿ ತೆರೆಯಲು ನಿರ್ಧರಿಸಿದ್ದೆ. ನಾನೀಗ ಅಂಗಡಿಯಲ್ಲಿ ದಿನಬಳಕೆಯ ಅಡುಗೆ ಎಣ್ಣೆ, ಅಕ್ಕಿ, ಟೀ ಪುಡಿಯನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವ ಮೂಲಕ ಹೆಚ್ಚು ಗ್ರಾಹಕರನ್ನು ಸೆಳೆಯುತ್ತಿದ್ದೇನೆ. ನಾನು ಈಗ ಖುಷಿಯಾಗಿದ್ದೇನೆ ಎಂದು ಮಾಜಿ ನಿರ್ದೇಶಕ ಆನಂದ್ ತಿಳಿಸಿದ್ದಾರೆ!
ಆನಂದ್ ಅವರು Oru Mazhai Naangu Saaral,ಮತ್ತು ‘Mouna Mazhai ಎಂಬ ಸಿನಿಮಾ ನಿರ್ದೇಶಿಸಿದ್ದರು. ಅವರ ಕೊನೆಯ ಸಿನಿಮಾ ಥುಣಿಂತು ಸೈ ಅಂತಿಮ ಹಂತದಲ್ಲಿದ್ದು, ಎರಡು ಹಾಡುಗಳ ರೆಕಾರ್ಡಿಂಗ್ ಬಾಕಿ ಇದ್ದಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ