ಅಮೆರಿಕ ಆರ್ಥಿಕತೆ : ಮಹಾ ಕುಸಿತದ ಆತಂಕ

ಷೇರು ಮಾರುಕಟ್ಟೆ, ವ್ಯವಹಾರ ಕುಸಿತಗೊಂಡಿದ್ದು ಭೀತಿ ಕಾಡಿದೆ

Team Udayavani, Jun 15, 2020, 12:28 PM IST

ಅಮೆರಿಕ ಆರ್ಥಿಕತೆ : ಮಹಾ ಕುಸಿತದ ಆತಂಕ

ಸಾಂದರ್ಭಿಕ ಚಿತ್ರ

ವಾಷಿಂಗ್ಟನ್‌: ಅಮೆರಿಕ ಮತ್ತು ಜಗತ್ತಿನಾದ್ಯಂತ ಕೋವಿಡ್ ತನ್ನ ಬಿಗಿಪಟ್ಟನ್ನು ಇನ್ನಷ್ಟು ಬಲಪಡಿಸುತ್ತಿರುವಂತೆಯೇ ಅಮೆರಿಕ ಆರ್ಥಿಕತೆಗೆ ಮಹಾಕುಸಿತದ ಆತಂಕ ಕಾಡಿದೆ. ಅಮೆರಿಕದ ಆದಾಯ ಕಳೆದೆರಡು ತಿಂಗಳಲ್ಲಿ ತೀವ್ರ ಕುಸಿತವಾಗಿದ್ದು, ಇದರಿಂದ ಚೇತರಿಸಿಕೊಳ್ಳಲು ಹಲವು ವರ್ಷಗಳೇ ಬೇಕಾಗಬಹುದು ಎಂದು ಹೇಳಲಾಗಿದೆ. ಕಳೆದ ಗುರುವಾರದಿಂದ ಬಳಿಕ ಅಮೆರಿಕ ಷೇರು ಮಾರುಕಟ್ಟೆ ತೀವ್ರ ಇಳಿಕೆ ಕಂಡಿದ್ದು, ಈ ವರೆಗಿನ ಅತಿ ಕೆಟ್ಟ ವ್ಯವಹಾರದ ದಿನಗಳು ಎಂದು ಕರೆಯಲಾಗಿದೆ. ಇದೇ ಸಂದರ್ಭ ಜಗತ್ತಿನ ಪ್ರಮುಖ ಷೇರು ಮಾರುಕಟ್ಟೆಗಳಾದ ಜಪಾನ್‌, ಹಾಂಗ್‌ಕಾಂಗ್‌, ಚೀನದ ಷೇರು ಮಾರುಕಟ್ಟೆಗಳೂ ಕುಸಿತ ಕಂಡಿದ್ದವು.

ಇಂಧನ, ಪ್ರಮುಖ ಕೈಗಾರಿಕೆಗಳ, ಮನೋರಂಜನೆ ಕ್ಷೇತ್ರಗಳ ಷೇರುಗಳು ತೀವ್ರ ಇಳಿಕೆ ಕಂಡಿವೆ. ಏತನ್ಮಧ್ಯೆ ಅಮೆರಿಕದಲ್ಲಿ ನಿರುದ್ಯೋಗಿಗಳ ನೆರವಿಗೆ ಅರ್ಜಿ ಸಲ್ಲಿಸುವವರ ಸಂಖ್ಯೆ ಹೆಚ್ಚಾಗಿದೆ. ಒಂದು ವಾರದಲ್ಲಿ ಸುಮಾರು 15 ಲಕ್ಷ ಮಂದಿ ನೆರವಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಅಮೆರಿಕದ ಕಾರ್ಮಿಕ ವಿಭಾಗ ಹೇಳಿದೆ.
ಈ ವರ್ಷಾಂತ್ಯದೊಳಗೆ ಅಮೆರಿಕದ ನಿರುದ್ಯೋಗ ಪ್ರಮಾಣ ಶೇ.9ರಷ್ಟು ಇರಬಹುದು ಎಂದು ಅಮೆರಿಕದ ಶಾಸನಸಭೆಯ ಪ್ರತಿನಿಧಿಗಳು ಹೇಳಿದ್ದಾರೆ.

ಅಮೆರಿಕದ ಹಲವು ರಾಜ್ಯಗಳು ಆರ್ಥಿಕ ಚಟುವಟಿಕೆಗೆ ಲಾಕ್‌ಡೌನ್‌ ಸಡಿಲಗೊಳಿಸಿದ್ದರೂ ಸಂಪೂರ್ಣವಾಗಿ ಇನ್ನೂ ತೆರೆದುಕೊಂಡಿಲ್ಲ. ಸ್ಥಳೀಯವಾಗಿ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇರುವುದರಿಂದ ಜನರು ವ್ಯವಹಾರಕ್ಕೆ, ಖರೀದಿಗೆ, ಪ್ರಯಾಣಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ಮಾಲ್‌ಗ‌ಳು, ರೆಸ್ಟೋರೆಂಟ್‌ಗಳು, ಮನೋರಂಜನ ತಾಣಗಳಲ್ಲಿ ವ್ಯವಹಾರ ನಡೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ಲಾಕ್‌ಡೌನ್‌ ಮತ್ತೆ ಹೇರವುದನ್ನು ಕಾಣ ಬಯಸುವುದಿಲ್ಲ ಎಂದು ಅಮೆರಿಕ ಆರ್ಥಿಕ ಕಾರ್ಯದರ್ಶಿ ಸ್ಟೀವನ್‌ ಮು°ಚಿನ್‌ ಅವರು ಹೇಳಿದ್ದಾರೆ. ಆದರೆ ಹೊರಗೆ ಬಂದರೆ ಅನಾರೋಗ್ಯವಾಗುತ್ತದೆ ಎಂಬ ಹೆದರಿಕೆ ಜನರಿಗೆ ಹೆಚ್ಚಾಗಿ ಇದ್ದರೆ ಅವರು ಹೆಚ್ಚಾಗಿ ಮನೆಯಲ್ಲೇ ಇರುವುದು ಒಳ್ಳೆಯದು ಎಂದು ಅಮೆರಿಕದ ಆರ್ಥಿಕ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಆಸ್ಪತ್ರೆ ಬಿಲ್‌ ನೋಡಿ ಆಘಾತ!
ಅಮೆರಿಕದ 70 ವರ್ಷ ವಯಸ್ಸಿನ ಮೈಕೆಲ್‌ ಫ್ಲೋರ್‌ ಎಂಬ ವೃದ್ಧರೊಬ್ಬರು ಕೊರೊನಾ ವೈರಸ್‌ ಸೋಂಕಿಗೆ ತುತ್ತಾಗಿ ಅಲ್ಲಿನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು. ತೀರಾ ಗಂಭೀರ ಸ್ಥಿತಿಯಲ್ಲಿದ್ದ ಅವರು 62 ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದರು. ಬಳಿಕ ಚೇತರಿಸಿಕೊಂಡ ಅವರು ಆಸ್ಪತ್ರೆಯಿಂದ ಡಿಸಾcರ್ಜ್‌ ಆಗುವಾಗ 181 ಪುಟಗಳಿದ್ದ ಬಿಲ್‌ನಲ್ಲಿ 1.1 ಮಿಲಿಯನ್‌ ಡಾಲರ್‌ ಎಂದು ನಮೂದಿಸಿರುವುದನ್ನು ಕಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.