ಪ್ರವಾಸೋದ್ಯಮ ಆರಂಭ: ಕ್ಯೂಬಾ ಸರಕಾರ ಚಿಂತನೆ

ಸದ್ಯ ಬೀಚ್‌ ಪ್ರವಾಸೋದ್ಯಮಕ್ಕೆ ಸೀಮಿತ ಅವಕಾಶ ನೀಡಲು ನಿರ್ಧರಿಸಲಾಗಿದೆ

Team Udayavani, Jun 12, 2020, 12:45 PM IST

ಪ್ರವಾಸೋದ್ಯಮ ಆರಂಭ: ಕ್ಯೂಬಾ ಸರಕಾರ ಚಿಂತನೆ

ಹವಾನಾ: ಕೋವಿಡ್‌ ಮುಂಜಾಗ್ರತೆಯಾಗಿ ನಗರದಲ್ಲಿ ಮನೆಗಳಿಗೆ ಆರೋಗ್ಯ ಸಿಬಂದಿ ಭೇಟಿ ನೀಡುತ್ತಿದ್ದಾರೆ.

ಕ್ಯೂಬಾ: ಅಂತಾರಾಷ್ಟ್ರೀಯ ಟೂರಿಸಂ ಆರಂಭವಾದ ಬಳಿಕ ತನ್ನ ದೇಶಕ್ಕೆ ಬರುವ ಎಲ್ಲ ಪ್ರವಾಸಿಗರನ್ನು ಕೊರೊನಾ ವೈರಸ್‌ ಪತ್ತೆ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಕ್ಯೂಬಾದ ಪ್ರಧಾನಿ ಮನಿಯಲ್‌ ಮೆರೇರೋ ಕ್ರೂಜ್‌ ಅವರು ಬುಧವಾರ ಹೇಳಿದ್ದಾರೆ. ದೇಶದಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್‌ ಅನ್ನು ಭಾಗಶಃ ತೆರವು ಮಾಡುವ ಬಗ್ಗೆ ಘೋಷಿಸಿದ ಅವರು, ಬೀಚ್‌ ಪ್ರವಾಸೋದ್ಯಮಕ್ಕೆ ಸೀಮಿತ ಅವಕಾಶ ನೀಡಲಾಗುವುದು ಎಂದು ಹೇಳಿದರು.

ಪ್ರವಾಸೋದ್ಯಮ ಪುನರಾರಂಭಕ್ಕೆ ಸಮಯಮಿತಿ ನಿಗದಿಗೊಳಿಸದ ಅವರು, ಪ್ರವಾಸಿಗರು ತಂಗುವ ಹೊಟೇಲ್‌ಗ‌ಳಲ್ಲಿ ಸಾಂಕ್ರಾಮಿಕ ಆರೋಗ್ಯ ತಜ್ಞರು ನಿಗಾ ಇರಿಸಲಿದ್ದಾರೆ.ಪ್ರವಾಸಿಗರು ಹವಾನಕ್ಕೆ ಭೇಟಿ ನೀಡುವುದನ್ನು ಕೂಡ ನಿರ್ಬಂಧಿಸಲಾಗುವುದು. ಪ್ರವಾಸೋದ್ಯಮವನ್ನು ಮೊದಲು ದೇಶದ ಪ್ರಜೆಗಳಿಗೆ ಮುಕ್ತಗೊಳಿಸಿ, ಆ ಬಳಿಕ ವಿದೇಶಿಯರ ಆಗಮನಕ್ಕೆ ಅವಕಾಶ ನೀಡಲಾಗುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಕೋವಿಡ್‌ ಹೋರಾಟದಲ್ಲಿ ಜಯ
ಈ ಪುಟ್ಟ ಕೆರಿಬಿಯನ್‌ ದ್ವೀಪವು ಅತಿ ಕಡಿಮೆ ಕೋವಿಡ್ ಸೋಂಕಿತರನ್ನು ಹೊಂದಿತ್ತು ಹಾಗೂ ಕೊರೊನಾಮುಕ್ತವಾಗುವ ದಿನಗಳು ಹತ್ತಿರದಲ್ಲಿದೆ.ಹೊಸ ಲಾಕ್‌ಡೌನ್‌ ಯೋಜನೆ ಬಗ್ಗೆ ತಿಳಿಸಿದ ಪ್ರಧಾನಿ, ದೇಶದ ಸಾರ್ವಜನಿಕ ಈಜುಕೊಳಗಳು ಈ ಬಾರಿಯ ಬೇಸಗೆಗೆ ಶೇ. 30ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯಾರಂಭ ಮಾಡಲಿದೆ. ಸಾಮಾಜಿಕ ಅಂತರ ಕಾಪಾಡುವ ಷರತ್ತಿನೊಂದಿಗೆ ಸ್ಥಳೀಯಾಡಳಿತ ನಿಗಾದಲ್ಲಿ ಬೀಚುಗಳು ಪ್ರವಾಸಿಗರಿಗೆ ಮುಕ್ತವಾಗಲಿವೆ. ಆದರೆ ಸೋಂಕು ಹರಡುವುದನ್ನು ತಡೆಯುವ ಭಾಗವಾಗಿ ಈ ಬಾರಿ ಬೀಚುಗಳಲ್ಲಿ ಬೇಸಗೆ ಹಬ್ಬಗಳನ್ನು ಸರಕಾರ ಆಯೋಜಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ನಡುವೆ ಶಾಲೆಗಳನ್ನು ಸೆಪ್ಟಂಬರ್‌ ಮತ್ತು ನವೆಂಬರ್‌ನಲ್ಲಿ ಎರಡು ಹಂತಗಳಲ್ಲಿ ತೆರೆಯಲು ಸರಕಾರ ನಿರ್ಧರಿಸಿದೆ. ಸಾರ್ವಜನಿಕ ಹಾಗೂ ಖಾಸಗಿ ವಾಹನ ಸಂಚಾರವು ಕ್ರಮೇಣ ದೇಶವ್ಯಾಪಿಯಾಗಿ ಪುನರಾರಂಭವಾಗಲಿದೆ. ಸಾರ್ವಜನಿಕ ಸ್ಥಳಗಳು ಹಾಗೂ ಜನರು ಹತ್ತಿರದ ಸಂಪರ್ಕದಲ್ಲಿರುವಲ್ಲೆಲ್ಲ ಮಾಸ್ಕ್ ಬಳಕೆ ಕಡ್ಡಾಯವಾಗಿದೆ ಎಂದೂ ಅವರು ಹೇಳಿದ್ದಾರೆ. ದೇಶದಲ್ಲಿ ಸೋಂಕು ಪತ್ತೆಯಾದ ಕೂಡಲೇ ಗಡಿಗಳನ್ನು ಹಾಗೂ ಶಾಲೆಗಳನ್ನು ಮುಚ್ಚುವ ಮೂಲಕ ಸರಕಾರವು ವೈರಸ್‌ ಹೆಚ್ಚು ಹರಡದಂತೆ ನೋಡಿಕೊಂಡಿತ್ತು.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.