ಕೋವಿಡ್ ಹೊಸ ಪ್ರಭೇದ..ಎಚ್ಚರ ಅಗತ್ಯ; ರಾಜ್ಯದಲ್ಲಿ ಸದ್ಯ ಲಾಕ್ ಡೌನ್ ಇಲ್ಲ: ಸಚಿವ ಸುಧಾಕರ್
Team Udayavani, Dec 21, 2020, 6:03 PM IST
ಬೆಂಗಳೂರು: ಬ್ರಿಟನ್ ಸೇರಿದಂತೆ ಜಗತ್ತಿನ ಮೂರು ದೇಶಗಳಲ್ಲಿ ಈಗಾಗಲೇ ಕೋವಿಡ್ ನ ಹೊಸ ಪ್ರಭೇದ ಪತ್ತೆಯಾಗಿದ್ದು, ಇದು ಕ್ಷಿಪ್ರವಾಗಿ ಹರಡುತ್ತಿದ್ದು, ಈ ಬಗ್ಗೆ ಮುಂಜಾಗ್ರತೆ ಅತ್ಯಗತ್ಯ. ಅಲ್ಲದೇ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಹೇರುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಈವರೆಗೂ ಹೊಸ ಕೋವಿಡ್ ತಳಿ ಪತ್ತೆಯಾಗಿಲ್ಲ, ಆದರೆ ಇದರ ಬಗ್ಗೆ ನಿರ್ಲಕ್ಷ್ಯ ವಹಿಸುವಂತಿಲ್ಲ. ಇದು ಕೋವಿಡ್ 19 ಸೋಂಕಿಗಿಂತ ಹೆಚ್ಚು ಕ್ಷಿಪ್ರವಾಗಿ ಹರಡುತ್ತದೆ ಎಂದು ಸಚಿವ ಸುಧಾಕರ್ ಹೇಳಿದರು.
ಕೋವಿಡ್ ಹೊಸ ಪ್ರಭೇದದಲ್ಲಿ ಹರಡುವಿಕೆ ಗುಣ ಹೆಚ್ಚಾಗಿದ್ದು, ರಾಜ್ಯದ ಜನರು ಕೂಡಾ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದಕ್ಕೆ ಆದ್ಯತೆ ನೀಡಬೇಕು. ಈ ಬಗ್ಗೆ ನಾವು ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುವುದು ಮುಖ್ಯ ಎಂದು ಸೋಮವಾರ (ಡಿಸೆಂಬರ್ 21, 2020) ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತ ವಿವರಿಸಿದರು.
ಈಗಾಗಲೇ ಬ್ರಿಟನ್ ನಿಂದ ರಾಜ್ಯಕ್ಕೆ 530 ಮಂದಿ ಬಂದಿದ್ದು, ಇದರಲ್ಲಿ 138 ಪ್ರಯಾಣಿಕರು ಪರೀಕ್ಷೆ ಮಾಡಿಸದೇ ಆಗಮಿಸಿದ್ದು, ಅವರು ಒಂದು ವಾರ ಹೋಮ್ ಕ್ವಾರಂಟೈನ್ ಗೆ ಒಳಗಾಗಬೇಕು ಎಂದು ಹೇಳಿದರು. ಕೇಂದ್ರ ಸರ್ಕಾರದ ಆದೇಶದಂತೆ ವಿದೇಶದಿಂದ ಬಂದ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ