ದ.ಆಫ್ರಿಕಾ ಆಸ್ಪತ್ರೆಗಳಲ್ಲಿ ನೂಕುನುಗ್ಗಲು

ಶುಕ್ರವಾರದ ಬೆಳಗ್ಗೆ ವರೆಗೆ ಹಿಂದಿನ 24 ತಾಸಿನ‌ಲ್ಲಿ 8728 ಪ್ರಕರಣಗಳು ವರದಿಯಾಗಿವೆ

Team Udayavani, Jul 4, 2020, 11:01 AM IST

ದ.ಆಫ್ರಿಕಾ ಆಸ್ಪತ್ರೆಗಳಲ್ಲಿ ನೂಕುನುಗ್ಗಲು

ಜೊಹಾನ್ಸ್‌ಬರ್ಗ್‌: ಇಲ್ಲಿನ ಆಸ್ಪತ್ರೆಯೊಂದರ ಹೊರಗೆ ಥರ್ಮಲ್‌ ಟೆಸ್ಟಿಂಗ್‌.

ಜೊಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾದಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆ ಕಾಣುತ್ತಿರುವಂತೆಯೇ, ಆಸ್ಪತ್ರೆಗಳಲ್ಲಿ ಭಾರೀ ಪ್ರಮಾಣದ ನೂಕು ನುಗ್ಗಲು ಕಂಡು ಬಂದಿದೆ. ಸೋಂಕಿತರಿಗೆ ಚಿಕಿತ್ಸೆ ನೀಡಲು ವೈದ್ಯರು, ದಾದಿಯರು ಹೆಣಗಾಡುತ್ತಿದ್ದು ಪರಿಸ್ಥಿತಿ ಹೀಗೆಯೇ ಮುಂದುವರಿದರೆ ದೇಶದ ವೈದ್ಯಕೀಯ ವ್ಯವಸ್ಥೆ ಹಳಿ ತಪ್ಪುವ ಭೀತಿ ಎದುರಾಗಿದೆ. ದಿನವೂ ದೊಡ್ಡ ಸಂಖ್ಯೆಯಲ್ಲಿ ಜನರು ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ. ಎಲ್ಲರೂ ಕೋವಿಡ್‌ ರೋಗಿಗಳೇ ಆಗಿರುವುದರಿಂದ ಅವರನ್ನು ನಿಭಾಯಿಸಲು ಕಷ್ಟವಾಗುತ್ತಿದೆ. ಈ ವಿಚಾರದಲ್ಲಿ ನಾವೀಗ ಅಸ ಹಾಯಕರಾಗಿದ್ದೇವೆ ಎಂದು ದಾದಿಯೊಬ್ಬರು ಹೇಳುತ್ತಾರೆ.

ದ. ಆಫ್ರಿಕಾದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ನಾಲ್ಕು ಪಟ್ಟು ಏರಿಕೆಯಾಗಿದ್ದು ಜೂನ್‌ನಲ್ಲಿ ಅತ್ಯಧಿಕ ಪ್ರಕರಣಗಳು ಏರಿಕೆಯಾಗಿವೆ. ಪರೀಕ್ಷೆ ಪ್ರಮಾಣವನ್ನು ಸರಕಾರ ಏರಿಕೆ ಮಾಡುತ್ತಿರುವಂತೆ, ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗುತ್ತಿದೆ. ಆಸ್ಪತ್ರೆ ಗಳಲ್ಲಿ ರೋಗಿಗಳು ತುಂಬತೊಡಗಿದ್ದು, ತಾತ್ಕಾಲಿಕ ವಾರ್ಡ್‌ಗಳನ್ನು ಆಸ್ಪತ್ರೆಯ ಹೊರಗೆ ಮಾಡಬೇಕಾಗಿ ಬಂದಿದೆ. ದೇಶದ ಆರೋಗ್ಯ ವ್ಯವಸ್ಥೆಯಲ್ಲಿರುವ ಸೌಕರ್ಯಗಳು ಸಾಕಾಗುತ್ತಿಲ್ಲ. ಎರಡು ತಿಂಗಳ ಲಾಕ್‌ಡೌನ್‌ ಬಳಿಕ ದೇಶದಲ್ಲಿ ಲಾಕ್‌ಡೌನ್‌ ಸಡಿಲಿಸಲಾಗಿದೆ. ಆ ಬಳಿಕವೇ ಸೋಂಕಿತರ ಸಂಖ್ಯೆ ಏರತೊಡಗಿದೆ. ಇದರೊಂದಿಗೆ ಜೂನ್‌ನಲ್ಲಿ ನಿರುದ್ಯೋಗ ಪ್ರಮಾಣವೂ ಶೇ.30ರಷ್ಟಕ್ಕೆ ಏರಿಕೆಯಾಗಿದೆ. ಹಸಿವಿನ ಪ್ರಮಾಣವೂ ಏರಿಕೆಯಾಗಿದೆ.

ಜೊಹಾನ್ಸ್‌ ಬರ್ಗ್‌ನ ಪರಿಸ್ಥಿತಿ ಕೈ ಮೀರಿ ಹೋಗುತ್ತಿರುವುದರಿಂದ ನಗರದ ಹಲವು ಕಡೆಗಳಲ್ಲಿ ಲಾಕ್‌ಡೌನ್‌ ಅನ್ನು ಮರು ಹೇರಬೇಕು ಎಂಬ ಚಿಂತನೆಯನ್ನು ಆಡಳಿತ ಮಾಡುತ್ತಿದೆ. ನಿತ್ಯವೂ ಜೊಹಾರ್ನ್ಸ್ ಬರ್ಗ್‌ನಲ್ಲಿ ವರದಿಯಾಗುತ್ತಿರುವ ಕೋವಿಡ್‌ ಸೋಂಕಿತರ ಸಂಖ್ಯೆಯನ್ನು ನೋಡುತ್ತಿದ್ದರೆ ಚಿಂತೆಯಾಗುತ್ತಿದೆ ಎಂದು ವಿಟ್‌ವಾಟರ್‌ಸ್ಟಾಂಡ್‌ ವಿವಿಯ ಪ್ರಾಧ್ಯಾಪಕ ಪ್ರೊ| ಸಬೀರ್‌ ಮಧಿ ಹೇಳುತ್ತಾರೆ. ಈ ವಿಶ್ವವಿದ್ಯಾಲಯ, ಬ್ರಿಟನ್‌ ಆಕ್ಸ್‌ಫ‌ಡ್‌ ವಿ.ವಿ.ಯೊಂದಿಗೆ ಕೋವಿಡ್‌ ಔಷಧ ಕುರಿತು ಸಂಶೋಧನೆಗಳನ್ನು ನಡೆಸುತ್ತಿದೆ. ಕಳೆದ ವಾರ ಲಸಿಕೆಯ ಮಾನವ ಪ್ರಯೋಗ ಆರಂಭವಾಗಿದ್ದು, ಸಂಶೋಧನೆಗೆ ಆಯ್ದುಕೊಂಡ ವ್ಯಕ್ತಿಗಳ ಪಟ್ಟಿಯನ್ನು ರದ್ದುಗೊಳಿಸಲಾಗಿದೆ. ಕಾರಣ ಅವರೆಲ್ಲರಲ್ಲೂ ಕೋವಿಡ್‌ ಸೋಂಕು ಕಂಡುಬಂದಿದ್ದು, ಆರೋಗ್ಯವಂತ ವ್ಯಕ್ತಿಯ ಮೇಲೆ ಔಷಧದ ಪರಿಣಾಮ ತಿಳಿಯಲು ಉದ್ದೇಶಿಸಲಾಗಿತ್ತು.

ಈಗ ಎಲ್ಲೆಡೆ ರೋಗಿಗಳು ತುಂಬಿರುವುದರಿಂದ ಸಂಶೋಧನೆಯೇ ಯಶಸ್ವಿಯಾಗಿ ನಡೆಯುತ್ತದೆ ಎಂದು ಹೇಳಲೂ ಸಾಧ್ಯವಾಗದ ಸ್ಥಿತಿಗೆ ಬಂದಿದ್ದೇವೆ ಎಂದು ಅವರು ಹೇಳುತ್ತಾರೆ. ಆಫ್ರಿಕಾ ದೇಶಗಳಲ್ಲೇ ಶೇ.40ರಷ್ಟುಪ್ರಕರಣಗಳು ದಕ್ಷಿಣ ಆಫ್ರಿಕಾ ದೇಶವೊಂದರಲ್ಲೇ ಕಂಡುಬಂದಿದೆ. ಜೂನ್‌ ಆರಂಭದ ವೇಳೆ 34 ಸಾವಿರಷ್ಟಿದ್ದ ಪ್ರಕರಣಗಳು ಏಕಾಏಕಿ ಏರಿಕೆ ಕಂಡಿದ್ದು, ಈಗ ಇದರ ಪ್ರಮಾಣ 1.68 ಲಕ್ಷದ ಗಡಿಯನ್ನು ದಾಟಿದೆ.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.