ಸೋಂಕು 75 ಸಾವಿರ, ಸಾವು 1,500 : ಬುಧವಾರ ದಾಖಲೆಯ 4,764 ಮಂದಿಗೆ ಸೋಂಕು 55 ಸಾವು


Team Udayavani, Jul 23, 2020, 6:05 AM IST

ಸೋಂಕು 75 ಸಾವಿರ, ಸಾವು 1,500 : ಬುಧವಾರ ದಾಖಲೆಯ 4,764 ಮಂದಿಗೆ ಸೋಂಕು 55 ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ರಾಜ್ಯದಲ್ಲಿ ಬುಧವಾರ ದಾಖಲೆಯ 4,764 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 55 ಸೋಂಕಿತರು ಸಾವಿಗೀಡಾಗಿದ್ದಾರೆ.

ಒಟ್ಟಾರೆ ಸೋಂಕು ಪ್ರಕರಣಗಳು 75 ಸಾವಿರದ ಗಡಿ ದಾಟಿದ್ದು, ಸಾವು ಕೂಡ 1,500ಕ್ಕೆ ತಲುಪಿವೆ. ಸಮಾಧಾನಕರವೆಂಬಂತೆ ಅತಿ ಹೆಚ್ಚು, ಅಂದರೆ 1,780 ಸೋಂಕಿತರು ಗುಣಮುಖರಾಗಿದ್ದಾರೆ.

ಸದ್ಯ ಸೋಂಕು ಪ್ರಕರಣಗಳ ಸಂಖ್ಯೆ 75,833, ಸಾವಿಗೀಡಾದವರು 1,519 ಹಾಗೂ ಗುಣಮುಖರಾದವರ ಸಂಖ್ಯೆ 27,239 ಆಗಿದೆ. 47,069 ಮಂದಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ. ಆಸ್ಪತ್ರೆಯಲ್ಲಿರುವವರ ಪೈಕಿ 618 ಮಂದಿ ಸ್ಥಿತಿ ಗಂಭೀರವಾಗಿದ್ದು, ತುರ್ತು ನಿಗಾ ಘಟಕದಲ್ಲಿದ್ದಾರೆ.

ಜು. 18ರಂದು 4,537 ಮಂದಿಗೆ ಸೋಂಕು ದೃಢಪಟ್ಟಿತ್ತು. ಆ ಬಳಿಕ ಒಂದೇ ದಿನ ಅತಿ ಹೆಚ್ಚು ಸೋಂಕು ಪ್ರಕರಣಗಳು ಬುಧವಾರ ದೃಢ ಪಟ್ಟಿವೆ. ಸೋಂಕು ಹೆಚ್ಚಳಕ್ಕೆ ಪರೀಕ್ಷೆ ಪ್ರಮಾಣ ಹೆಚ್ಚಳವಾಗಿರುವುದು ಪ್ರಮುಖ ಕಾರಣವಾಗಿದೆ.

ಮಂಗಳವಾರ 43 ಸಾವಿರ ಇದ್ದ ಸೋಂಕು ಪರೀಕ್ಷೆಗಳು ಒಂದೇ ದಿನದಲ್ಲಿ 48 ಸಾವಿರಕ್ಕೆ ಹೆಚ್ಚಳವಾಗಿವೆ. ದಿನದ ಅತಿ ಹೆಚ್ಚು ಸೋಂಕು ಪ್ರಕರಣಗಳು ಬೆಂಗಳೂರಿನಲ್ಲಿ 2,050 ಪತ್ತೆಯಾಗಿದ್ದು, 15 ಸೋಂಕಿತರ ಸಾವಾಗಿದೆ. ಬೆಂಗಳೂರಿನ ಒಟ್ಟಾರೆ ಪ್ರಕರಣಗಳು 36 ಸಾವಿರ ಹಾಗೂ ಸಾವು 735ಕ್ಕೆ ಏರಿದೆ.

ಎರಡು ಜಿಲ್ಲೆಯಲ್ಲಿ ದ್ವಿಶತಕ, ಎಂಟರಲ್ಲಿ ಶತಕ
ಬೆಂಗಳೂರು ಹೊರತುಪಡಿಸಿದರೆ ದಕ್ಷಿಣ ಕನ್ನಡ, ಕಲಬುರಗಿ, ಮೈಸೂರು, ಧಾರವಾಡ, ರಾಯಚೂರು ಬಳ್ಳಾರಿ, ಉಡುಪಿ, ಬಳ್ಳಾರಿಯಲ್ಲಿ ಸೋಂಕು ತೀವ್ರಗೊಂಡಿದೆ. ಈ ಜಿಲ್ಲೆಗಳಲ್ಲಿ ನಿತ್ಯ 100ಕ್ಕೂ ಹೆಚ್ಚು ಮಂದಿ ಸೋಂಕಿತರಾಗುತ್ತಿದ್ದಾರೆ.

ಬುಧವಾರ ಬೆಳಗಾವಿ ಮತ್ತು ಉಡುಪಿಯಲ್ಲಿ 200ಕ್ಕೂ ಹೆಚ್ಚು, ಕಲಬುರಗಿ, ದಕ್ಷಿಣ ಕನ್ನಡ, ಧಾರವಾಡ, ಮೈಸೂರು, ಬೆಂಗಳೂರು ಗ್ರಾಮಾಂತರ, ರಾಯಚೂರು, ಬಳ್ಳಾರಿ, ಚಿಕ್ಕಬಳ್ಳಾಪುರದಲ್ಲಿ 100ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.

ಹೆಚ್ಚು ಗುಣಮುಖ
ಎರಡು ದಿನಗಳಿಂದ ದಾಖಲೆ ಸಂಖ್ಯೆಯಲ್ಲಿ ಸೋಂಕಿತರು ಗುಣಮುಖರಾಗುತ್ತಿದ್ದಾರೆ. ಮಂಗಳವಾರ 1,664, ಬುಧವಾರ 1,780 ಮಂದಿ ಗುಣಮುಖರಾಗಿದ್ದಾರೆ. ಇವರಲ್ಲಿ ಅರ್ಧದಷ್ಟು  ಬೆಂಗಳೂರಿನವರು.

ವಾರದಲ್ಲಿ 28,000 ಸೋಂಕು
ರಾಜ್ಯದಲ್ಲಿ ಒಂದು ವಾರದಲ್ಲಿ ನಿತ್ಯ ಸರಾಸರಿ 4 ಸಾವಿರ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು 28,580 ಜನರಿಗೆ ಸೋಂಕು ದೃಢಪಟ್ಟಿದೆ. ಜು.16ಕ್ಕೆ 50 ಸಾವಿರ ಗಡಿದಾಟಿದ್ದ ಸೋಂಕು ಆರು ದಿನದಲ್ಲಿಯೇ 75 ಸಾವಿರ ಗಡಿದಾಟಿದೆ. ಮೊದಲ 25 ಸಾವಿರ ಪ್ರಕರಣಗಳು ದೃಢಪಡಲು 119 ದಿನ ಹಿಡಿದಿತ್ತು. ಎರಡನೇ 25 ಸಾವಿರ ಪ್ರಕರಣಗಳು 10 ದಿನ ಮತ್ತು ಮೂರನೇ 25 ಸಾವಿರ ಪ್ರಕರಣಗಳು ಕೇವಲ ಆರು ದಿನದಲ್ಲಿ ದೃಢಪಟ್ಟಿವೆ.

ಸೋಂಕು ವಿವರ
1000   –    ಮೇ 15

10,000 –   ಜೂನ್‌ 24

25,000 –   ಜುಲೈ 6

50,000 –   ಜುಲೈ 16

75,000 –   ಜುಲೈ 22

ಸಾವಿನ ವಿವರ
100   –   ಜೂನ್‌ 17

500   –   ಜುಲೈ 10

1000 –   ಜುಲೈ 16

1500 –   ಜುಲೈ 22

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.