ಹೈಡ್ರೋಕ್ಸಿಕ್ಲೋರೋಕ್ವಿನ್‌ ಮೇಲೆ ಅಧ್ಯಯನ ಆರಂಭ

ಕ್ಲೋರೋಕ್ವಿನ್‌, ಹೈಡ್ರೋಕ್ಸಿಕ್ಲೋ ರೋಕ್ವಿನ್‌ ಅಥವಾ ಪ್ಲೇಸ್‌ಬೊ ಸಂಯೋಜನೆ

Team Udayavani, May 22, 2020, 10:44 AM IST

ಹೈಡ್ರೋಕ್ಸಿಕ್ಲೋರೋಕ್ವಿನ್‌ ಮೇಲೆ ಅಧ್ಯಯನ ಆರಂಭ

ಸಾಂದರ್ಭಿಕ ಚಿತ್ರ

ಲಂಡನ್‌: ಮಲೇರಿಯ ಚಿಕಿತ್ಸೆಗೆ ಬಳಸಲಾಗುವ ಎರಡು ಔಷಧಿಗಳು ಕೋವಿಡ್‌-19ನ್ನು ತಡೆಗಟ್ಟಬಲ್ಲುದೇ ಎಂಬುದನ್ನು ತಿಳಿಯುವುದಕ್ಕಾಗಿ ಬ್ರೈಟನ್‌ ಮತ್ತು ಆಕ್ಸ್‌ಫ‌ರ್ಡ್‌ನಲ್ಲಿ ಅಧ್ಯಯನವೊಂದು ಆರಂಭವಾಗಿದೆ. ಕ್ಲೋರೋಕ್ವಿನ್‌, ಹೈಡ್ರೋಕ್ಸಿಕ್ಲೋರೋಕ್ವಿನ್‌ ಅಥವಾ ಪ್ಲೇಸ್‌ಬೊ (ನಿಷ್ಕ್ರಿಯ ಔಷಧಿ) ಔಷಧಿಯೊಂದನ್ನು ಯೂರೋಪ್‌, ಆಫ್ರಿಕ, ಏಶ್ಯ ಮತ್ತು ದಕ್ಷಿಣ ಅಮೆರಿಕದ 40,000ಕ್ಕೂ ಅಧಿಕ ಆರೋಗ್ಯ ಕಾರ್ಯಕರ್ತರಿಗೆ ನೀಡಲಾಗುವುದು. ಇವರೆಲ್ಲ ಕೋವಿಡ್‌-19 ರೋಗಿಗಳೊಂದಿಗೆ ಸಂಪರ್ಕದಲ್ಲಿದ್ದವರಾಗಿದ್ದಾರೆ.

ಅಧ್ಯಯನಕ್ಕೊಳಪಡುವವರಲ್ಲಿ ಬ್ರಿಟನಿನವರನ್ನು ಬ್ರೈಟನ್‌ ಮತ್ತು ಸಸೆಕ್ಸ್‌ ಯೂನಿವರ್ಸಿಟಿ ಆಸ್ಪತ್ರೆಗಳಲ್ಲಿ ಹಾಗೂ ಜಾನ್‌ ರಾಡ್‌ಕ್ಲಿಫ್ ಆಸ್ಪತ್ರೆಯಲ್ಲಿ ಗುರುವಾರದಿಂದ ನೋಂದಾಯಿಸಲಾಗುತ್ತಿದೆ. ಅವರಿಗೆ ಮೂರು ತಿಂಗಳ ಕಾಲ ಹೈಡ್ರೋಕ್ಸಿಕ್ಲೋರೋಕ್ವಿನ್‌ ಅಥವಾ ಪ್ಲೇಸ್‌ಬೊವೊಂದನ್ನು ನೀಡಲಾಗುವುದು. ಏಶ್ಯದ ತಾಣಗಳಲ್ಲಿ ಅಧ್ಯಯನದಲ್ಲಿ ಪಾಲ್ಗೊಳ್ಳುವವರಿಗೆ ಕ್ಲೋರೋಕ್ವಿನ್‌ ಅಥವಾ ಪ್ಲೇಸ್‌ಬೋವೊಂದನ್ನು ನೀಡಲಾಗುವುದು. ಬ್ರಿಟನಿನ 25 ತಾಣಗಳಲ್ಲಿ ಇಂಥ ಅಧ್ಯಯನಗಳನ್ನು ನಡೆಸಲು ಉದ್ದೇಶಿಸಲಾಗಿದ್ದು ಈ ವರ್ಷಾಂತ್ಯ ವೇಳೆ ಇದರ ಫ‌ಲಿತಾಂಶವನ್ನು ನಿರೀಕ್ಷಿಸಲಾಗಿದೆ. ಇಂಗ್ಲೆಂಡ್‌ನ‌ಲ್ಲಿ ಕೋವಿಡ್‌ ರೋಗಿಗಳ ನೇರ ಉಪಚಾರದಲ್ಲಿ ತೊಡಗಿರುವ ಯಾರು ಬೇಕಿದ್ದರೂ ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ. ಆದರೆ ಅವರಿಗೆ ಕೋವಿಡ್‌-19 ಸೋಂಕು ತಗಲಿರಬಾರದು. ವೈರಸ್‌ ಅಪಾಯ ಎದುರಿಸುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಈ ಔಷಧಿ ರಕ್ಷಣೆ ಒದಗಿಸಬಲ್ಲುದೇ ಎಂಬುದು ಇದರಿಂದ ಸ್ಪಷ್ಟವಾಗಲಿದೆ.

ಲಾಭವೇ ? ಹಾನಿಯೇ ?
“ಕ್ಲೋರೋಕ್ವಿನ್‌ ಅಥವಾ ಹೈಡ್ರೋಕ್ಸಿಕ್ಲೋರೋಕ್ವಿನ್‌ ಕೋವಿಡ್‌-19ರ ವಿರುದ್ಧ ಹೋರಾಟದಲ್ಲಿ ಲಾಭದಾಯಕವೇ ಅಥವಾ ಹಾನಿಕಾರಿಯೇ ಎಂಬುದು ನಮಗೆ ಗೊತ್ತಿಲ್ಲ. ಆದರೆ ಈ ಅಧ್ಯಯನ ಅದನ್ನು ಕಂಡುಕೊಳ್ಳುವುದಕ್ಕೆ ಅತ್ಯುತ್ತಮ ವಿಧಾನ’ ಎಂದು ಅಧ್ಯಯನದ ನೇತೃತ್ವ ವಹಿಸಿರುವ ಪ್ರೊ| ನಿಕೋಲಸ್‌ ವೈಟ್‌ ಹೇಳುತ್ತಾರೆ.ಅಧ್ಯಯನದಲ್ಲಿ ಬ್ರಿಟನ್‌ ಅಲ್ಲದೆ ಥಾಯ್‌ಲ್ಯಾಂಡ್‌, ವಿಯೆಟ್ನಾಂ ,ಲಾವೋಸ್‌, ಕಾಂಬೋಡಿಯ ಮತ್ತು ಇಟಲಿಯ ಸಂಶೋಧಕರು ಪಾಲ್ಗೊಂಡಿದ್ದಾರೆ.

ವ್ಯಾಪಕವಾಗಿ ಲಭ್ಯವಿರುವ ಸುರಕ್ಷಿತ ಹಾಗೂ ಪರಿಣಾಮಕಾರಿ ಲಸಿಕೆ ಸಿದ್ಧಗೊಳ್ಳಲು ಬಹಳಷ್ಟು ಸಮಯ ಕಾಯಬೇಕಾಗಬಹುದು. ಕ್ಲೋರೊಕ್ವಿನ್‌ ಮತ್ತು ಹೈಡ್ರೋಕ್ಸಿಕ್ಲೋರೋಕ್ವಿನ್‌ನಂಥ ಮಾತ್ರೆ ಕೋವಿಡ್‌-19 ಸೋಂಕನ್ನು ತಡೆಗಟ್ಟಬಲ್ಲುದಾದರೆ ಅದು ಅತ್ಯಮೂಲ್ಯವೆನಿಸಲಿದೆ ಎಂದು ಬ್ರೈಟನ್‌ ಆ್ಯಂಡ್‌ ಸಸೆಕ್ಸ್‌ ಮೆಡಿಕಲ್‌ ಸ್ಕೂಲ್‌ನ ಪ್ರೊ| ಮಾರ್ಟಿನ್‌ ಲ್ಯೂವ್‌ಲಿನ್‌ ಹೇಳುತ್ತಾರೆ.

ಈ ಔಷಧಿಗಳು ಜ್ವರ ಮತ್ತು ಉರಿಯೂತವನ್ನು ಕಡಿಮೆಗೊಳಿಬಲ್ಲುವು ಮತ್ತು ಮಲೇರಿಯ ತಡೆಗಟ್ಟುವಲ್ಲಿ ಹಾಗೂ ಚಿಕಿತ್ಸೆಯಲ್ಲಿ ಬಳಸಲ್ಪಡುತ್ತಿವೆ.
ಕೋವಿಡ್‌ ಚಿಕಿತ್ಸೆಯಲ್ಲಿ ಹೈಡ್ರೋಕ್ಸಿಕ್ಲೋರೋಕ್ವಿನ್‌ ಲಾಭದಾಯಕವಾಗಬಲ್ಲುದೆಂದು ಟ್ರಂಪ್‌ ಹೇಳಿದ ಬಳಿಕ ವಿಶ್ವದ ಗಮನ ಅದರತ್ತ ಸೆಳೆದಿತ್ತು. ಆದರೆ ವಿಶ್ವ ಆರೋಗ್ಯ ಸಂಸ್ಥೆ ಕೋವಿಡ್‌ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗೆ ಹೈಡ್ರೋಕ್ಸಿಕ್ಲೋರೋಕ್ವಿನ್‌ ಸುರಕ್ಷಿತ ಮತ್ತು ಪರಿಣಾಮಕಾರಿಯೆಂದು ಸಾಬೀತಾಗಿಲ್ಲ ಮತ್ತು ಅದರ ಸೇವನೆಯಿಂದ ಹೃದಯಕ್ಕೆ ಅಪಾಯವುಂಟಾಗಬಹುದೆಂದು ಎಚ್ಚರಿಸಿತ್ತು.

ಟಾಪ್ ನ್ಯೂಸ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.