ಪಾದರಾಯನಪುರ ಗಲಭೆ ಆರೋಪಿಗಳಿಬ್ಬರಿಗೆ ಸೋಂಕು ; ರಾಮನಗರ ಜೈಲಿನಲ್ಲಿ ಹೈ ಅಲರ್ಟ್
Team Udayavani, Apr 23, 2020, 11:14 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ರಾಮನಗರ: ಬೆಂಗಳೂರಿನ ಪಾದರಾಯನಪುರದಲ್ಲಿ ಮೊನ್ನೆ ನಡೆದಿದ್ದ ಗಲಭೆ ಸಂಬಂಧ ಬಂಧಿತರಾಗಿ ರಾಮನಗರ ಕಾರಾಗೃಹದಲ್ಲಿರಿಸಲಾಗಿರುವ 121 ಆರೋಪಿಗಳ ಪೈಕಿ ಇಂದು ಇಬ್ಬರಲ್ಲಿ ಕೋವಿಡ್ 19 ವೈರಸ್ ಸೋಂಕು ಪಾಸಿಟಿವ್ ವರದಿಯಾಗಿದೆ. ಇದು ಜೈಲಿನಲ್ಲಿರುವ ಖೈದಿಗಳ ಆತಂಕಕ್ಕೆ ಕಾರಣವಾಗಿದೆ.
ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿದ್ದ ಪಾದರಾಯನಪುರದ ಗಲಭೆಕೋರರ ಪೈಕಿ ಇಬ್ಬರಿಗೆ ಕೋವಿಡ್ 19 ವೈರಸ್ ತಗುಲಿರುವ ಪಾಸಿಟಿವ್ ವರದಿ ಬಂದಿದೆ. ಈ ಕಾರಣದಿಂದ ತಕ್ಷಣವೇ ಜೈಲಿನಲ್ಲಿರುವ ಇತರೇ ಗಲಭೆ ಆರೋಪಿಗಳನ್ನು ಸ್ಥಳಾಂತರಿಸದಿದ್ದರೆ ಶುಕ್ರವಾರದಿಂದ ಉಗ್ರ ಪ್ರತಿಭಟನೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ‘ಈ ಹಿಂದೆಯೇ ನಾನು ಇದೇ ವಿಷಯವಾಗಿ ಸರ್ಕಾರದ ಗಮನ ಸೆಳೆದರೂ ನಿರ್ಲಕ್ಷಿಸಿದರ ಫಲವಾಗಿ ಇಂದು ರಾಮನಗರಕ್ಕೂ ಕೋವಿಡ್ 19 ವೈರಸ್ ಸೋಂಕು ವಕ್ಕರಿಸಿದೆ. ಪಾಸಿಟಿವ್ ಬಂದ ಇಬ್ಬರ ಜತೆಯಲ್ಲಿದ್ದ ಏಳೆಂಟು ಮಂದಿಯನ್ನು ಕ್ವಾರಂಟೈನ್ ಗೆ ಕರೆದೊಯ್ಯಲಾಗಿದೆ ಎಂದು ಹೇಳಿದ್ದಾರೆ.
ಸರ್ಕಾರ ತಡಮಾಡದೆ ರಾಮನಗರ ಜೈಲಿನಲ್ಲಿರುವ ಕೈದಿಗಳನ್ನು ಕೂಡಲೇ ಸ್ಥಳಾಂತರ ಮಾಡಬೇಕು. ರಾಮನಗರ ಕಾರಾಗೃಹವನ್ನು ಕ್ವಾರಂಟೈನಲ್ಲಿ ಇಡಬೇಕು. ಇಲ್ಲದಿದ್ದರೆ ಶುಕ್ರವಾರದಿಂದಲೇ ಪ್ರತಿಭಟನೆ ನಡೆಸಲಾಗುವುದು ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ