ಕಲಬುರಗಿಯಲ್ಲಿ ಮತ್ತಿಬ್ಬರು ಕೋವಿಡ್-19 ಸೋಂಕಿತರು ಗುಣಮುಖ; ಆಸ್ಪತ್ರೆಯಿಂದ ಬಿಡುಗಡೆ
Team Udayavani, May 1, 2020, 11:49 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿರುವ ನಡುವೆಯೂ ಮಹಾಮಾರಿ ಸೋಂಕಿನಿಂದ ರೋಗಿಗಳು ಗುಣಮುಖರಾಗುತ್ತಿದ್ದು, ನಾಗರಿಕರು ತುಸು ಸಮಾಧಾನ ಪಡುವಂತೆ ಆಗಿದೆ.
ಹೌದು, ದೇಶದಲ್ಲೇ ಮೊದಲ ಕೋವಿಡ್ ಸಾವಿನ ಆಘಾತ ಅನುಭವಿಸಿದ್ದೇ ಕಲಬುರಗಿ ಜನತೆ. ನಂತರದಲ್ಲಿ ಹೆಮ್ಮಾರಿ ಸೋಂಕು ಸ್ವಲ್ಪ ನಿಯಂತ್ರಣಕ್ಕೂ ಬಂದಿತ್ತು.
ಆದರೆ, ಕಳೆದ 20 ದಿನಗಳಲ್ಲಿ 45 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಭೀತಿ ಹೆಚ್ಚಾಗುವಂತೆ ಮಾಡಿದೆ. ಇದೇ ವೇಳೆ ಗುಣಮುಖರಾಗಿ 12 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಶುಕ್ರವಾರ ಕಲಬುರಗಿ ನಗರದ ಇಬ್ಬರು ಕೋವಿಡ್ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಮೋಮಿನಪುರ ಪ್ರದೇಶದ 51 ವರ್ಷದ ಪುರುಷ (ಪಿ-255) ಮತ್ತು ಸಂತ್ರಾಸವಾಡಿ ಪ್ರದೇಶದ 35 ವರ್ಷದ ಮಹಿಳೆ (ಪಿ-256) ಸೋಂಕು ಮುಕ್ತರಾಗಿದ್ದಾರೆ. ಇವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ ತಿಳಿಸಿದ್ದಾರೆ.
51 ವರ್ಷದ ವ್ಯಕ್ತಿ ಮೃತ 55 ವರ್ಷದ ಬಟ್ಟೆ ವ್ಯಾಪಾರಿ ಸಹೋದರನಾಗಿದ್ದು, ಏ.14ರಂದು ಸೋಂಕು ದೃಢವಾಗಿತ್ತು. ಅದೇ ರೀತಿ ಮಹಿಳೆಗೆ ಮೃತ 65 ವರ್ಷದ ಹಣ್ಣಿನ ವ್ಯಾಪಾರಿಯಿಂದ ಸೋಂಕು ಹರಡಿತ್ತು. ಈಕೆಗೂ ಏ.14ರಂದು ಸೋಂಕು ಖಚಿತವಾಗಿತ್ತು.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 55 ಜನರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಇದರಲ್ಲಿ 14 ಜನ ರೋಗಿಗಳು ಸೋಂಕಿನಿಂದ ಗುಣಮುಖರಾದಂತೆ ಆಗಿದೆ. ಉಳಿದಂತೆ ಐವರು ಸೋಂಕಿಗೆ ಬಲಿಯಾಗಿದ್ದು, ಇನ್ನೂ 36 ಜನ ಸೋಂಕಿತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ