ಕೋವಿಡ್ 19 ಕಾನೂನು ಉಲ್ಲಂಘಿಸಿದ್ರೆ 2 ವರ್ಷ ಜೈಲು, ಭಾರೀ ಮೊತ್ತದ ದಂಡ ತೆರಬೇಕು; ಜಾರ್ಖಂಡ್
ಸಾರ್ವಜನಿಕ ಸ್ಥಳದಲ್ಲಿ ಉಗುಳುವುದು ಕಂಡು ಬಂದಲ್ಲಿ ಹೊಸ ಕಾಯ್ದೆ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು
Team Udayavani, Jul 23, 2020, 11:16 PM IST
ನವದೆಹಲಿ: ದೇಶಾದ್ಯಂತ ಕೋವಿಡ್ 19 ಸೋಂಕಿನ ಹಾವಳಿ ಕ್ಷಿಪ್ರವಾಗಿ ಹರಡುತ್ತಿದ್ದು, ಒಂದು ವೇಳೆ ಲಾಕ್ ಡೌನ್ ಕಾನೂನುನನ್ನು ಉಲ್ಲಂಘಿಸಿದವರಿಗೆ ಭಾರೀ ಮೊತ್ತದ ದಂಡ ವಿಧಿಸುವುದಾಗಿ ಜಾರ್ಖಂಡ್ ಸರ್ಕಾರ ಘೋಷಿಸಿದೆ.
ಈ ನಿಟ್ಟಿನಲ್ಲಿ ಜಾರ್ಖಂಡ್ ಸಚಿವ ಸಂಪುಟದಲ್ಲಿ ಕೋವಿಡ್ 19 ಸೋಂಕು ಸುಗ್ರಿವಾಜ್ಞೆ 2020ಗೆ ಹಸಿರು ನಿಶಾನೆ ತೋರಿದ್ದು, ಯಾರು ಕೋವಿಡ್ 19 ಸೋಂಕು ಹರಡುವುದನ್ನು ತಡೆಯುವ ಕಾನೂನನ್ನು ಉಲ್ಲಂಘಿಸುತ್ತಾರೋ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿವರೆಗೆ ದಂಡ ವಿಧಿಸಲಾಗುವುದು ಎಂದು ತಿಳಿಸಿದೆ.
ಯಾರೇ ಆಗಲಿ ಸಾಮಾಜಿಕ ಅಂತರವನ್ನು ಉಲ್ಲಂಘಿಸಲಿ, ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದೇ ಇದ್ದರೆ ಅಂತಹವರಿಗೆ ದಂಡ, ಶಿಕ್ಷೆ ಖಚಿತ ಎಂದು ಹೇಳಿದೆ. ಕಚೇರಿ, ಅನಾವಶ್ಯಕವಾಗಿ ಗುಂಪುಗೂಡುವುದು, ಸಾರ್ವಜನಿಕ ಸ್ಥಳದಲ್ಲಿ ಉಗುಳುವುದು ಕಂಡು ಬಂದಲ್ಲಿ ಹೊಸ ಕಾಯ್ದೆ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವರದಿ ವಿವರಿಸಿದೆ.
ಈ ಸುಗ್ರಿವಾಜ್ಞೆ ತಂದಿರುವುದು ಯಾಕೆಂದರೆ ಕೆಲವೊಮ್ಮೆ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾದ ಅಗತ್ಯವಿದೆ. ಆ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…