ವಿದೇಶಗಳಲ್ಲಿರುವ ಜಿಲ್ಲೆಯವರ ನೆರವಿಗೆ Help Line; ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌

ಉದಯವಾಣಿ ಫೋನ್‌ ಇನ್ : ಎಲ್ಲಿದ್ದೀರೋ ಅಲ್ಲೇ ಇರಿ, ಸುರಕ್ಷಿತವಾಗಿರಿ, ಕ್ಷೇಮವಾಗಿರಿ

Team Udayavani, Apr 22, 2020, 5:28 AM IST

ವಿದೇಶಗಳಲ್ಲಿರುವ ಜಿಲ್ಲೆಯವರ ನೆರವಿಗೆ Help Line; ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌

ಉದಯವಾಣಿ ನಡೆಸಿದ ಫೋನ್ ಇನ್ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ಅವರು ಭಾಗವಹಿಸಿ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದರು.

ದಕ್ಷಿಣ ಕನ್ನಡ ಮತ್ತು ಉಡುಪಿಯ ಜನತೆಯೂ ಲಾಕ್‌ಡೌನ್‌ ನಿಯಮ ಪಾಲಿಸುತ್ತಿದ್ದಾರೆ. ಇಂದು, ಎಪ್ರಿಲ್‌ 21ರಂದು ಕೊನೆಗೊಳ್ಳಬೇಕಿದ್ದ ನಿರ್ಬಂಧ ಮೇ 3ರ ವರೆಗೂ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಇರಬಹುದಾದ ಸಂಶಯ ಮತ್ತು ಸಮಸ್ಯೆಗಳ ಕುರಿತು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದಲೇ ವಿವರಣೆ ಪಡೆಯಲು ನಾಗರಿಕರಿಗೆ ಅವಕಾಶ ಕಲ್ಪಿಸಲಾಯಿತು. ಈ ಸಂಬಂಧ ಏರ್ಪಡಿಸಲಾಗಿದ್ದ ನೇರ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಎರಡೂ ಜಿಲ್ಲೆಗಳಿಂದ ಬಂದ ಹಲವಾರು ಪ್ರಶ್ನೆಗಳಿಗೆ ಅನುಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸಿಂಧೂ ಬಿ. ರೂಪೇಶ್‌ ಮತ್ತು ಉಡುಪಿಯ ಜಿ. ಜಗದೀಶ್‌ ಉತ್ತರಿಸಿದರು.

ಮಂಗಳೂರು: ಕೊಲ್ಲಿ ಸಹಿತ ಹೊರದೇಶಗಳಲ್ಲಿ ಕೋವಿಡ್ 19 ವೈರಸ್ ನಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ದಕ್ಷಿಣ ಕನ್ನಡದ ನಿವಾಸಿಗಳಲ್ಲಿ ಆತ್ಮಸ್ಥೈರ್ಯ ತುಂಬಲು ಹೆಲ್ಪ್ ಲೈನ್‌ ಸ್ಥಾಪಿಸುವ ಬಗ್ಗೆ ಜಿಲ್ಲಾಡಳಿತ ಚಿಂತನೆ ನಡೆಸುತ್ತಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಹೇಳಿದ್ದಾರೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಉದಯವಾಣಿ ಮಂಗಳೂರು ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಫೋನ್‌-ಇನ್‌ ಸಂದರ್ಭ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.

ಲಾಕ್‌ಡೌನ್‌ ತೆರವಿನ ಬಳಿಕದ ಸವಾಲು
ಲಾಕ್ ‌ಡೌನ್‌ ಮುಗಿದು ವಿಮಾನಯಾನ ಸೇವೆ ಆರಂಭಗೊಂಡರೆ ವಿದೇಶಗಳಲ್ಲಿ ಇರುವ ದಕ್ಷಿಣ ಕನ್ನಡಿಗರು ವಾಪಸಾಗುವ ಸಾಧ್ಯತೆಗಳಿದ್ದು, ಈ ಪರಿಸ್ಥಿತಿ ಎದುರಿಸುವುದು ಜಿಲ್ಲಾಡಳಿತಕ್ಕೆ ಸವಾಲು ಎಂದರು.

ಹೊರ ದೇಶಗಳಿಂದ ಎಷ್ಟು ಜನ, ಯಾವಾಗ ಬರಬಹುದು ಎಂಬ ಬಗ್ಗೆ ಅಂದಾಜು ನಡೆಸಬೇಕಿದೆ. ಆದರೆ ಇದು ರಾಷ್ಟ್ರಮಟ್ಟದ ವಿಷಯವಾಗಿದ್ದು, ಕೇಂದ್ರ ಸರಕಾರವೇ ತೀರ್ಮಾನಿಸಬೇಕು. ಮುಂದೆಯೂ ವಿದೇಶಗಳಿಂದ ಬರುವವರನ್ನು ನಿರ್ದಿಷ್ಟ ದಿನಗಳವರೆಗೆ ಕ್ವಾರಂಟೈನ್‌ನಲ್ಲಿ ಇರಿಸುವುದು ಅನಿವಾರ್ಯವಾಗಬಹುದು ಎಂದು ಜಿಲ್ಲಾಧಿಕಾರಿ ಹೇಳಿದರು.

ವಲಸೆ ಕಾರ್ಮಿಕರ ಸಮಸ್ಯೆಗಳ ವಿಚಾರವಾಗಿ, ಜಿಲ್ಲೆಯಲ್ಲಿರುವ ಹೊರ ಜಿಲ್ಲೆ, ರಾಜ್ಯಗಳ ಕಾರ್ಮಿಕರು ಇಲ್ಲಿಂದ ತೆರಳಲು ಮತ್ತು ಅಲ್ಲಿಂದ ಇಲ್ಲಿಗೆ ಬರಲು ಕೋರುತ್ತಿದ್ದಾರೆ. ಆದರೆ ಸದ್ಯ ಇದು ಅಸಾಧ್ಯ. ಅವರು ಸ್ವಲ್ಪ ದಿನ ಕಾಯಬೇಕು.

ಇಲ್ಲಿರುವ ಹೊರ ರಾಜ್ಯ, ಜಿಲ್ಲೆಗಳ ಕಾರ್ಮಿಕರಿಗೆ ಜಿಲ್ಲಾಡಳಿತ ಎಲ್ಲ ರೀತಿಯ ನೆರವು – ವ್ಯವಸ್ಥೆ ಕಲ್ಪಿಸಿದೆ. ಅವರ ಅಹವಾಲುಗಳಿಗೆ ಸ್ಪಂದಿಸಲು ಆಪ್ತ ಸಮಾಲೋಚಕರನ್ನು ನೇಮಿಸಿದೆ ಎಂದರು.

ಪರೀಕ್ಷಾ ಕೇಂದ್ರದ ಬಗ್ಗೆ ಸಂಶಯ ಬೇಡ
ವೆನ್ಲಾಕ್‌ನ ಕೋವಿಡ್ ಪರೀಕ್ಷಾ ಕೇಂದ್ರದ ಬಗ್ಗೆ ಸಂಶಯದ ಅಗತ್ಯವಿಲ್ಲ. ಸದ್ಯದ ಆರೋಗ್ಯ ತುರ್ತು ಸ್ಥಿತಿಯಲ್ಲಿ ಈ ಬಗ್ಗೆ ನೇತ್ಯಾತ್ಮಕ ಪ್ರಚಾರ ಸಲ್ಲದು. ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಿದೆ.

ಪರೀಕ್ಷಾ ಕೇಂದ್ರವು ಐಸಿಎಂಆರ್‌ ಮಾನದಂಡದ ಪ್ರಕಾರ ಸ್ಥಾಪನೆಯಾಗಿದೆ. ಪ್ರಯೋಗಾಲಯವು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಯಾರೂ ಆ ಕುರಿತು ಯಾವುದೇ ರೀತಿಯ ಅನುಮಾನ ಪಡಬೇಕಿಲ್ಲ ಎಂದು ಅವರು ಹೇಳಿದರು.

ಸ್ವಯಂ ಕ್ವಾರಂಟೈನ್‌ ಉತ್ತಮ ಬೆಳವಣಿಗೆ
ಕೋವಿಡ್ 19 ವೈರಸ್ ಬಗ್ಗೆ ಜನರಲ್ಲಿ ಜಾಗೃತಿ ಮೂಡುತ್ತಿದೆ. ಸೋಂಕು ಪೀಡಿತರ ಜತೆ ಸಂಪರ್ಕಕ್ಕೆ ಬಂದವರು ಸ್ವಯಂಪ್ರೇರಿತರಾಗಿ ಕ್ವಾರಂಟೈನ್‌ಗೆ ಒಳಗಾಗಲು ಮುಂದೆ ಬರುತ್ತಿರುವುದು ಉತ್ತಮ ಬೆಳವಣಿಗೆ. ಜನರ ಸಹಕಾರವಿದ್ದರೆ ಮಾತ್ರ ಕೋವಿಡ್ 19 ವೈರಸ್ ನಿಯಂತ್ರಣ ಸಾಧ್ಯ ಎಂದರು.

ಕೋವಿಡ್ 19 ವೈರಸ್ ಸೋಂಕಿನ ಲಕ್ಷಣ ಅಥವಾ ಸ್ವರೂಪದ ಬಗ್ಗೆ ಇನ್ನೂ ವೈದ್ಯರಿಗೆ ಖಚಿತವಾಗಿ ಪತ್ತೆ ಮಾಡಲು ಸಾಧ್ಯವಾಗದಿರುವುದೇ ದೊಡ್ಡ ಸವಾಲು. ಈ ಕಾರಣಕ್ಕೆ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸುವತ್ತ ಹೆಚ್ಚು ಗಮನ ಕೊಡಬೇಕು ಎಂದು ಅವರು ಹೇಳಿದರು.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.