ಉದಯವಾಣಿ ಫೋನ್‌ ಇನ್ – ಮೇ 3ರ ಬಳಿಕ ಸಾರ್ವಜನಿಕ ಸಾರಿಗೆ ಅನಿಶ್ಚಿತ: ಉಡುಪಿ ಡಿಸಿ ಜಗದೀಶ್

ಎಲ್ಲಿದ್ದೀರೋ ಅಲ್ಲೇ ಇರಿ, ಸುರಕ್ಷಿತವಾಗಿರಿ, ಕ್ಷೇಮವಾಗಿರಿ

Team Udayavani, Apr 22, 2020, 5:23 AM IST

Jagadish-Phone-In

ಉದಯವಾಣಿ ನಡೆಸಿದ ಫೋನ್ ಇನ್ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಭಾಗವಹಿಸಿ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದರು.

ದಕ್ಷಿಣ ಕನ್ನಡ ಮತ್ತು ಉಡುಪಿಯ ಜನತೆಯೂ ಲಾಕ್‌ಡೌನ್‌ ನಿಯಮ ಪಾಲಿಸುತ್ತಿದ್ದಾರೆ. ಇಂದು, ಎಪ್ರಿಲ್‌ 21ರಂದು ಕೊನೆಗೊಳ್ಳಬೇಕಿದ್ದ ನಿರ್ಬಂಧ ಮೇ 3ರ ವರೆಗೂ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಇರಬಹುದಾದ ಸಂಶಯ ಮತ್ತು ಸಮಸ್ಯೆಗಳ ಕುರಿತು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದಲೇ ವಿವರಣೆ ಪಡೆಯಲು ನಾಗರಿಕರಿಗೆ ಅವಕಾಶ ಕಲ್ಪಿಸಲಾಯಿತು. ಈ ಸಂಬಂಧ ಏರ್ಪಡಿಸಲಾಗಿದ್ದ ನೇರ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಎರಡೂ ಜಿಲ್ಲೆಗಳಿಂದ ಬಂದ ಹಲವಾರು ಪ್ರಶ್ನೆಗಳಿಗೆ ಅನುಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸಿಂಧೂ ಬಿ. ರೂಪೇಶ್‌ ಮತ್ತು ಉಡುಪಿಯ ಜಿ. ಜಗದೀಶ್‌ ಉತ್ತರಿಸಿದರು.

ಉಡುಪಿ: ಕೋವಿಡ್ 19 ವೈರಸ್ ತೀವ್ರತೆ ಇನ್ನೂ ತಗ್ಗದ ಕಾರಣ ಮೇ 3ರ ಬಳಿಕವೂ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಆರಂಭ ಕಷ್ಟ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ‘ಉದಯವಾಣಿ’ ಮಣಿಪಾಲ ಕೇಂದ್ರ ಕಚೇರಿಯಲ್ಲಿ ಜಿಲ್ಲೆಯ ನಾಗರಿಕರ ಕರೆಗಳಿಗೆ ಉತ್ತರ ನೀಡುವಾಗ ವಿವರಿಸಿ, ಬಸ್‌, ರೈಲು, ವಿಮಾನಯಾನ ಕೂಡಲೇ ಆರಂಭವಾಗದು. ಬಸ್‌ಗಳಲ್ಲಿ ಪ್ರತಿ ಆಸನದಲ್ಲಿ ಒಬ್ಬೊಬ್ಬರನ್ನು ಕುಳ್ಳಿರಿಸಿದರೂ ಸಾಮಾಜಿಕ ಅಂತರ ಕಾಪಾಡಲಾಗದು ಎಂದರು.

ಆಯಾ ಜಿಲ್ಲೆಯೊಳಗೆ ಕಾರ್ಮಿಕರು ಕೆಲಸ ಮಾಡಲು ಸರಕಾರ ಅನುಮತಿಸಬಹುದು. ನಗರಗಳಿಗಿಂತ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚು ವಿನಾಯಿತಿ ಸಿಗಬಹುದು. ನಗರಗಳಲ್ಲಿ ಎಲ್ಲ ಒಮ್ಮೆಲೆ ಆರಂಭಿಸಲಾಗದು ಎಂದರು.

ಕೃಷಿ ಚಟುವಟಿಕೆಗೆ ನಿರ್ಬಂಧವಿಲ್ಲ
ಕೃಷಿ ಸಂಬಂಧಿತ ಕೆಲಸಗಳಿಗೆ ಯಾವುದೇ ನಿರ್ಬಂಧ ವಿಲ್ಲ ಮತ್ತು ಇದಕ್ಕೆ ಸಂಬಂಧಿಸಿ ಅಂತರ್ಜಿಲ್ಲಾ ಸಂಚಾರ ನಿರ್ಬಂಧವಿಲ್ಲ ಎಂದು ತಿಳಿಸಿದರು.

ಎಸೆಸೆಲ್ಸಿ, ಪಿಯುಸಿ ಪರೀಕ್ಷೆ ಕುರಿತ ಪ್ರಶ್ನೆಗೆ ಉತ್ತರಿಸಿ, ಎಸೆಸೆಲ್ಸಿ, ಪಿಯುಸಿ ಪರೀಕ್ಷೆ ನಡೆಯಲೇಬೇಕಲ್ಲ? ಯಾವಾಗ, ಹೇಗೆ ಎಂದು ಹೇಳುವುದು ಕಷ್ಟ ಎಂದರು.

ಎಲೆಕ್ಟ್ರಾನಿಕ್ಸ್‌ ಮಳಿಗೆ – ಸೇವಾ ವಿಭಾಗ ಎಲೆಕ್ಟ್ರಾನಿಕ್ಸ್‌ ಮಳಿಗೆಗಳು ಮತ್ತು ಸೇವಾ ವಿಭಾಗಗಳ ಸೇವೆಯನ್ನು ಬೆಳಗಿನ ಸೀಮಿತ ಅವಧಿಯಲ್ಲೇ ಕಾರ್ಯಾಚರಿಸಲು ಅನುಮತಿಸಲು ಸಾಧ್ಯವೇ ಎಂಬ ಪ್ರಶ್ನೆಗೆ, ಇಲೆಕ್ಟ್ರಾನಿಕ್‌ ಉತ್ಪನ್ನಗಳ, ಮೊಬೈಲ್‌ ಶಾಪ್‌ ಗಳು ಮತ್ತು ಸೇವಾ ವಿಭಾಗದ ಅಗತ್ಯ ತಿಳಿದಿದೆ. ಆದರೆ ರಾಜ್ಯ ಸರಕಾರದ ಆದೇಶ ಒಂದೆರಡು ದಿನಗಳಲ್ಲಿ ಬರಲಿದ್ದು, ಬಳಿಕ ತೀರ್ಮಾನಿಸಲಾಗುವುದು ಎಂದರು.

ನೀವು ಅಲ್ಲೇ ಇರಿ, ಕ್ಷೇಮವಾಗಿರಿ
ಬೆಳಗಾವಿ, ವಿಜಯಪುರ ಜಿಲ್ಲೆಗಳ ಸ್ಥಿತಿ ನೋಡಿ. ಮಹಾರಾಷ್ಟ್ರಕ್ಕೂ ಇಲ್ಲಿನವರಿಗೂ ಬಹಳ ನಿಕಟ ಸಂಬಂಧವಿದೆ. ಹಾಗಾಗಿ ಒಂದು ಜಿಲ್ಲೆಯಿಂದ ಮತ್ತೂಂದು ಜಿಲ್ಲೆಗೆ ಹೋಗದಂತೆ ತಡೆಯುತ್ತಿದ್ದೇವೆ. ಅದೊಂದೇ ಸುರಕ್ಷಿತ ಮಾರ್ಗ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದರು.

ಮುಂಬಯಿ – ಪುಣೆಯಲ್ಲಿರುವ ಕರಾವಳಿಗರನ್ನು ಕರೆ ತರುವ ಕುರಿತು ಕೇಳಿದಾಗ, ಪ್ರಸ್ತುತ ಅಂತಾರಾಜ್ಯ ಸಂಚಾರ ನಿರ್ಬಂಧವಿದ್ದು, ಸದ್ಯದ ಸ್ಥಿತಿಯಲ್ಲಿ ಅಸಾಧ್ಯ. ಅವರು ಅಲ್ಲೇ ಇರುವುದು ಅವರ ದೃಷ್ಟಿಯಲ್ಲೂ ಕ್ಷೇಮ, ನಮ್ಮ ದೃಷ್ಟಿಯಲ್ಲೂ ಕ್ಷೇಮ ಎಂದರು.

ಅನೇಕ ಜಿಲ್ಲೆಗಳಲ್ಲಿ ಕೋವಿಡ್ 19 ವೈರಸ್ ಇಲ್ಲ. ಅವುಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕಲ್ಲವೆ? ಒಂದೊಮ್ಮೆ ಸಾರ್ವಜನಿಕ ಸಾರಿಗೆ ಆರಂಭಿಸಿದರೆ ಇವರನ್ನೂ ಸಂಕಷ್ಟಕ್ಕೆ ದೂಡಿದಂತಾಗುತ್ತದೆ.

ಜನರು ಒಂದೆಡೆ ಯಿಂದ ಮತ್ತೂಂದೆಡೆಗೆ ಸಂಚರಿಸಿದಾಗ ಸಮಸ್ಯೆ ತಲೆದೋರುತ್ತದೆ. ನಾವು ಗಡಿಯನ್ನು ಸಂಪೂರ್ಣ ಸೀಲ್‌ ಮಾಡಿರುವುದು ಇದೇ ಕಾರಣಕ್ಕೆ. ಹೀಗಾಗಿ ನಾನು ಕೆಟ್ಟವನಾಗಿದ್ದೇನೆ ಎಂದರು ಜಿಲ್ಲಾಧಿಕಾರಿಯವರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.