ಉಡುಪಿ: ಗುರುವಾರ 300 ಕೋವಿಡ್ ಸೋಂಕು ದೃಢ
Team Udayavani, Sep 18, 2020, 1:41 AM IST
ಸಾಂದರ್ಭಿಕ ಚಿತ್ರ
ಉಡುಪಿ: ಸರಕಾರಿ ವೈದ್ಯಾಧಿಕಾರಿಗಳು ಮುಷ್ಕರ ನಿರತರಾದ ಕಾರಣ ಸ್ಪಷ್ಟ ಅಂಕಿ-ಅಂಶಗಳು ಗುರುವಾರವೂ ಬಿಡುಗಡೆಗೊಂಡಿಲ್ಲ. ಆದರೆ ಮೂಲಗಳ ಪ್ರಕಾರ ಸೆ. 15ರಿಂದ 17ರ ವರೆಗೆ ಒಟ್ಟು ಸುಮಾರು 300 ಪಾಸಿಟಿವ್ ಪ್ರಕರಣಗಳಿವೆ.
ಕುರ್ಲೊಟ್ಟು: 31 ಪಾಸಿಟಿವ್ ಪ್ರಕರಣ
ವೇಣೂರು: ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯ ಕುರ್ಲೊಟ್ಟು ವ್ಯಾಪ್ತಿಯಲ್ಲಿ ಒಂದೇ ದಿನ 31 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಜ್ವರ ಕಾಣಿಸಿಕೊಂಡಿದ್ದ ಮಹಿಳೆ ಮತ್ತು ಒಬ್ಬ ಪುರುಷ ಆಸ್ಪತ್ರೆ ಯಲ್ಲಿ ಮೃತಪಟ್ಟಿದ್ದು, ಅವರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಇದರಿಂದ ಭಯಗೊಂಡ ಜನ ಸ್ವ ಇಚ್ಛೆಯಿಂದ ಸಾಮೂಹಿಕವಾಗಿ ಕೊರೊನಾ ಪರೀಕ್ಷೆಯನ್ನು ಮಾಡಿಸಿದ್ದು, ಮಹಿಳೆ, ಪುರುಷ ಹಾಗೂ ಮಕ್ಕಳು ಸೇರಿದಂತೆ ಈ ಪ್ರದೇಶದ 31 ಮಂದಿಗೆ ಕೋವಿಡ್ ಪಾಸಿಟಿವ್ ಪತ್ತೆಯಾಗಿದೆ.
ಅವರಲ್ಲಿ ಹೆಚ್ಚಿನವರಿಗೆ ಜ್ವರ ಕಾಣಿಸಿಕೊಂ ಡಿದೆ. ಬೆಳ್ತಂಗಡಿ ತಾಲೂಕು ವೈದ್ಯಾಧಿಕಾರಿಗಳು ಹಾಗೂ ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬಂದಿ ಭೇಟಿ ನೀಡಿ ಸೂಕ್ತ ಮಾರ್ಗ ದರ್ಶನ ನೀಡಿದ್ದಾರೆ. ಪ್ರತೀ ದಿನ ಮನೆಗಳಿಗೆ ಆರೋಗ್ಯ ಮತ್ತು ಆಶಾ ಕಾರ್ಯಕರ್ತೆಯರು ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ.
ಮೂಡುಬಿದಿರೆ ಶಾಸಕರಿಗೆ ಪಾಸಿಟಿವ್
ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಕೊರೊನಾ ಬಾಧಿತರಾಗಿ ದ್ದಾರೆ. ಇದನ್ನು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ