ಕೋವಿಡ್‌ಗಿಂತ ನಿರುದ್ಯೋಗವೇ ದೊಡ್ಡ ಸಮಸ್ಯೆ


Team Udayavani, Jun 1, 2020, 2:31 PM IST

ಕೋವಿಡ್‌ಗಿಂತ ನಿರುದ್ಯೋಗವೇ ದೊಡ್ಡ ಸಮಸ್ಯೆ

ಸಾಂದರ್ಭಿಕ ಚಿತ್ರ

ವಾಷಿಂಗ್ಟನ್‌ : ಕೋವಿಡ್‌ ಸೋಂಕಿನಿಂದ ಜರ್ಜರಿತಗೊಂಡಿರುವ ಅಮೆರಿಕಕ್ಕೆ ಈಗ ನಿರುದ್ಯೋಗ ಕೋವಿಡ್‌ಗಿಂತಲೂ ದೊಡ್ಡ ಸಂಕಟವಾಗಿ ಪರಿಣಮಿಸಿದೆ. 1930ರ ಮಹಾ ಆರ್ಥಿಕ ಕುಸಿತದ ಬಳಿಕದ ಅತಿದೊಡ್ಡ ಹೊಡೆತವನ್ನು ಕೋವಿಡ್‌ ನೀಡಿದೆ. ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಹಾಗೂ ನಿರುದ್ಯೋಗ ಅರ್ಜಿಗಳ ವಿಲೇವಾರಿ ಮಾಡಲು ರಾಜಕೀಯ ನಾಯಕರ ಮೇಲೆ ತೀವ್ರ ಒತ್ತಡ ಬಿದ್ದಿದೆ. ನಿರುದ್ಯೋಗ ಭತ್ಯೆ ಪಡೆಯ ಬಯಸಿ ದಾಖಲೆ ಪ್ರಮಾಣದಲ್ಲಿ ಅಮೆರಿಕನ್ನರು ಅರ್ಜಿ ಸಲ್ಲಿಸುತ್ತಿದ್ದಾರೆ.

ಕಳೆದ ಒಂದೇ ವಾರ 21 ಲಕ್ಷ ಜನರು ನಿರುದ್ಯೋಗ ಭತ್ಯೆಗೆ ಅರ್ಜಿ ಸಲ್ಲಿಸಿದ್ದಾರೆ. ಆ ಮೂಲಕ ಕೋವಿಡ್‌ನಿಂದಾಗಿ 10 ವಾರಗಳಲ್ಲಿ ಸುಮಾರು 4 ಕೋಟಿಯಷ್ಟು ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಕಳೆದ ತಿಂಗಳ ಕೊನೆಯಲ್ಲಿ 20 ದಶಲಕ್ಷಕ್ಕೂ ಹೆಚ್ಚು ಅಮೆರಿಕನ್ನರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದ್ದು, ರಾಷ್ಟ್ರದ ನಿರುದ್ಯೋಗ ದರ ಶೇ.14.7 ರಷ್ಟಕ್ಕೆ ಏರಿತ್ತು. ಇದರ ಪ್ರಮಾಣ ಮಾರ್ಚ್‌ನಲ್ಲಿ ಶೇ.4.4ರಷ್ಟಿತ್ತು. ಮೇ ಮೊದಲ 2 ವಾರದಲ್ಲಿ ಸುಮಾರು 21 ಲಕ್ಷ ಜನರು ಹೊಸದಾಗಿ ನಿರುದ್ಯೋಗ ಭತ್ಯೆ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಒಟ್ಟಾರೆ ನಿರುದ್ಯೋಗಿಗಳ ಸಂಖ್ಯೆ 4 ಕೋಟಿಯ ಗಡಿ ದಾಟಿದೆ.

ಐಟಿ-ಬಿಟಿ, ಆತಿಥೊದ್ಯಮ, ಪ್ರವಾಸೋದ್ಯಮ ಸೇರಿದಂತೆ ಬೀದಿ ಬದಿ ಸಣ್ಣ ಪುಟ್ಟ ವ್ಯಾಪಾರ ಮಾಡುವ ಪ್ರತಿಯೋರ್ವ ಉದ್ಯೋಗಿ, ಕಾರ್ಮಿಕ, ವ್ಯಾಪಾರಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಪ್ರತಿಯೊಂದು ಉದ್ಯಮವು ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ.ಕಾರ್ಮಿಕ ಇಲಾಖೆ ಹಂಚಿಕೊಂಡಿರುವ ಅಂಕಿಅಂಶಗಳ ಪ್ರಕಾರ ಆತಿಥ್ಯ ಉದ್ಯಮವು ಅತ್ಯಂತ ದುಃಸ್ಥಿತಿಯನ್ನು ಎದುರಿಸುತ್ತಿದ್ದು, 48 ಲಕ್ಷ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಪ್ರವಾಸೋದ್ಯಮದಲ್ಲಿಯೂ ಉದ್ಯೋಗ ಕಡಿತ ಸಮಸ್ಯೆ ತಲೆದೂರುವುದರೊಂದಿಗೆ ಶೇ.40ರಷ್ಟು ನಿರುದ್ಯೋಗ ದರ ದಾಖಲಾಗಿದೆ.

ಶಿಕ್ಷಣ, ಆರೋಗ್ಯ ಸೇವಾ ಸಂಸ್ಥೆ, ಚಿಲ್ಲರೆ ವ್ಯಾಪಾರ ಮತ್ತು ಉತ್ಪಾದನಾ ಘಟಕಗಳು ಸ್ಥಗಿತಗೊಂಡಿದ್ದು, ಈ ಕ್ಷೇತ್ರದಲ್ಲಿಯೂ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಅನೇಕ ರಾಜ್ಯಗಳು ನಿರುದ್ಯೋಗ ಅರ್ಜಿಗಳನ್ನು ವಿಲೇವಾರಿ ಮಾಡಲು ಹೆಣಗಾಡುತ್ತಿವೆ. ಅಗಾಧ ಸಂಖ್ಯೆಯಲ್ಲಿ ಆನ್‌ಲೈನ್‌ ಅರ್ಜಿಗಳು ಬಂದು ಬೀಳುತ್ತಿವೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.