ಉತ್ತರಪ್ರದೇಶ ಪಂಚಾಯತ್ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಣೆ, 577 ಶಿಕ್ಷಕರ ಸಾವು!
ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಗಳಿಗೆ ಪತ್ರವನ್ನು ರವಾನಿಸಿದ್ದರು ಎಂದು ವರದಿ ತಿಳಿಸಿದೆ.
Team Udayavani, Apr 29, 2021, 4:43 PM IST
ಲಕ್ನೋ:ಕೋವಿಡ್ ಸೋಂಕಿನ ಸಂದರ್ಭದಲ್ಲಿ ಉತ್ತರಪ್ರದೇಶದ ಪಂಚಾಯತ್ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ 577 ಮಂದಿ ಶಿಕ್ಷಕರು ಸಾವನ್ನಪ್ಪಿರುವುದಾಗಿ ಉತ್ತರಪ್ರದೇಶದ ಶಿಕ್ಷಕರ ಸಂಘ ರಾಜ್ಯ ಚುನಾವಣಾ ಆಯೋಗಕ್ಕೆ ಪಟ್ಟಿಯನ್ನು ಸಲ್ಲಿಸಿದ್ದು, ಮೇ 2ರಂದು ನಡೆಯಲಿರುವ ಮತಎಣಿಕೆಯನ್ನು ಮುಂದೂಡುವಂತೆ ಮನವಿ ಮಾಡಿಕೊಂಡಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಷೇರು ಮಾರಾಟದ ಮೂಲಕ 1.11 ಬಿಲಿಯನ್ ಡಾಲರ್ ಸಂಗ್ರಹಣೆಗೆ ಮುಂದಾದ ಜೊಮ್ಯಾಟೊ
ಉತ್ತರಪ್ರದೇಶದ ಶಿಕ್ಷಕ್ ಮಹಾಸಂಘ(ಯುಪಿಎಸ್ ಎಂ)ದ ಅಧ್ಯಕ್ಷ ದಿನೇಶ್ ಚಂದ್ರ ಶರ್ಮಾ ಈ ಕುರಿತು ಮಾತನಾಡಿದ್ದು, ಕೋವಿಡ್ ಸೋಂಕಿನ ನಡುವೆಯೇ 71 ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸಿದ್ದ 577 ಶಿಕ್ಷಕರು ಸಾವನ್ನಪ್ಪಿದ್ದು ಅವರ ವಿವರಗಳನ್ನು ಆಯೋಗಕ್ಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ್ದ ಸರಕಾರಿ ನೌಕರರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ಅಲಹಾಬಾದ್ ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ಮಂಗಳವಾರ ನೋಟಿಸ್ ಜಾರಿ ಮಾಡಿತ್ತು.
ಈ ವಿಷಯದ ಕುರಿತು ಜಿಲ್ಲೆಗಳಲ್ಲಿ ನಡೆದ ಶಿಕ್ಷಕರ ಸಾವಿನ ಕುರಿತ ವರದಿಯನ್ನು 24ಗಂಟೆಯೊಳಗೆ ಕಳುಹಿಸುಂತೆ ವಿಶೇಷ ಅಧಿಕಾರಿ ಎಸ್ ಕೆ ಸಿಂಗ್ ಅವರು, ಜಿಲ್ಲಾ ಮ್ಯಾಜಿಸ್ಟ್ರೇಟ್, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಗಳಿಗೆ ಪತ್ರವನ್ನು ರವಾನಿಸಿದ್ದರು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!