ಚೀನ ವಿರುದ್ಧ ದಿಗ್ಬಂಧನ ಸಾಧ್ಯತೆ ; ಅಮೆರಿಕ ಸಂಸತ್‌ನಲ್ಲಿ ಮಸೂದೆ ಮಂಡನೆ


Team Udayavani, May 14, 2020, 5:53 AM IST

ಚೀನ ವಿರುದ್ಧ ದಿಗ್ಬಂಧನ ಸಾಧ್ಯತೆ ; ಅಮೆರಿಕ ಸಂಸತ್‌ನಲ್ಲಿ ಮಸೂದೆ ಮಂಡನೆ

ಅಮೆರಿಕ ಸಂಸತ್‌ನ ಪ್ರಭಾವಶಾಲಿ ಸಂಸದ ಲಿಂಡ್ಸೆ ಗ್ರಹಾಂ.

ವಾಷಿಂಗ್ಟನ್‌: ಕೋವಿಡ್ ವೈರಸ್ ಉಗಮ ಕಾರಣದ ಅಮೆರಿಕ – ಚೀನ ಜಟಾಪಟಿ ಹೊಸತೊಂದು ಬಿಕ್ಕಟ್ಟಿಗೆ ಕಾರಣವಾಗಲಿದೆಯೇ ಎಂಬ ಭೀತಿ ವ್ಯಕ್ತವಾಗಿದೆ.

ಏಷ್ಯಾದ ಬಲಾಡ್ಯ ರಾಷ್ಟ್ರವಾಗಿರುವ ಚೀನ ವಿರುದ್ಧ ದಿಗ್ಬಂಧನ ಹೇರುವ ಬಗೆಗಿನ ಮಸೂದೆಯನ್ನು ಅಮೆರಿಕದ ಸಂಸತ್‌ನಲ್ಲಿ ಮಂಡಿಸಲಾಗಿದೆ.

ಅಮೆರಿಕ ಸಂಸತ್‌ನ ಪ್ರಭಾವಶಾಲಿ ಸಂಸದ ಲಿಂಡ್ಸೆ ಗ್ರಹಾಂ ಮತ್ತು ಇತರ ಎಂಟು ಮಂದಿ ಸಂಸದರು ‘ಕೋವಿಡ್‌-19 ಉತ್ತರದಾಯಿತ್ವ ಕಾಯ್ದೆ’ ಕುರಿತಾದ ಮಸೂದೆಯನ್ನು ಮಂಡಿಸಿದ್ದಾರೆ. ಅದರ ಪ್ರಕಾರ ತನಿಖೆಗೆ ಚೀನ ಸಹಕಾರ ನೀಡದಿದ್ದರೆ, ಚೀನ ವಿರುದ್ಧ ನಿರ್ಬಂಧ ಹೇರಲು ಅಧ್ಯಕ್ಷ ಟ್ರಂಪ್‌ಗೆ ಅಧಿಕಾರ ಬರುತ್ತದೆ.

ಅಮೆರಿಕ ಹಾಗೂ ಮಿತ್ರ ರಾಷ್ಟ್ರಗಳ ನೇತೃತ್ವದ, ಇಲ್ಲವೇ ವಿಶ್ವ ಆರೋಗ್ಯ ಸಂಸ್ಥೆಯ ನೇತೃತ್ವದ ತನಿಖಾ ತಂಡಕ್ಕೆ ಕೋವಿಡ್ ವೈರಸ್ ಕುರಿತಾಗಿ ಚೀನ ಸಂಪೂರ್ಣ ಮಾಹಿತಿ ನೀಡಬೇಕು. ಜತೆಗೆ, ಮಾನವನ ಆರೋಗ್ಯಕ್ಕೆ ತೊಂದರೆ ನೀಡಬಹುದಾದ ಮಾರುಕಟ್ಟೆಗಳನ್ನು ಮುಚ್ಚಬೇಕು.

ಈ ಬಗ್ಗೆ ಚೀನ ಸಹಕಾರ ನೀಡಿದೆ ಎಂದು 60 ದಿನಗಳೊಳಗಾಗಿ ಸಂಸತ್‌ಗೆ ಅಧ್ಯಕ್ಷರು ಪ್ರಮಾಣ ಪತ್ರ ಸಲ್ಲಿಸಬೇಕು. ಇಲ್ಲದಿದ್ದರೆ, ಚೀನದ ವಿರುದ್ಧ ಆರ್ಥಿಕ ಹಾಗೂ ಇನ್ನಿತರ ಆಡಳಿತಾತ್ಮಕ ನಿರ್ಬಂಧಗಳನ್ನು ಹೇರಲು ಈ ಮಸೂದೆ ಟ್ರಂಪ್‌ಗೆ ಅಧಿಕಾರ ನೀಡುತ್ತದೆ.

ಇದರ ಹೊರತಾಗಿಯೂ ಚೀನ ವಿರುದ್ಧ ವೀಸಾ ನಿಷೇಧ, ಅಲ್ಲಿಗೆ ಪ್ರಯಾಣ ಮಾಡದಂತೆ ತಡೆ, ಚೀನ ಸಂಸ್ಥೆಗಳಲ್ಲಿ ಹೂಡಿಕೆ ಮಾಡದಂತೆ ಅಮೆರಿಕದ ವಿತ್ತ ಸಂಸ್ಥೆಗಳಿಗೆ ಕಟ್ಟಪ್ಪಣೆ, ಅಲ್ಲಿನ ಕಂಪೆನಿಗಳು ಅಮೆರಿಕದ ಸ್ಟಾಕ್ ‌ಎಕ್ಸ್‌ಚೇಂಜ್‌ಗಳಲ್ಲಿ ಲಿಸ್ಟ್‌ ಆಗದಂತೆ ನೋಡಿಕೊಳ್ಳುವ ಬಗ್ಗೆ ಆದೇಶ ಹೊರಡಿಸಲೂ ಅಮೆರಿಕ ಅಧ್ಯಕ್ಷರಿಗೆ ಅಧಿಕಾರವಿದೆ.

ಡಬ್ಲ್ಯುಎಚ್‌ಒ ಮೇಲೆ ಚೀನ ಒತ್ತಡ: ಸಿಐಎ
ಆರಂಭದ ದಿನಗಳಲ್ಲಿ ಕೋವಿಡ್ ವೈರಸ್ ಬಗ್ಗೆ ಸಾರ್ವಜನಿಕವಾಗಿ ಎಚ್ಚರಿಕೆ ನೀಡುವುದನ್ನು ವಿಳಂಬ ಮಾಡಲು ವಿಶ್ವ ಆರೋಗ್ಯ ಸಂಸ್ಥೆಯ (WHO) ಮೇಲೆ ಚೀನ ಒತ್ತಡ ಹೇರಿತ್ತು ಎಂಬ ಸಂಗತಿಯನ್ನು ಸಿಐಎ (ಕೇಂದ್ರೀಯ ಗುಪ್ತಚರ ಸಂಸ್ಥೆ) ವರದಿಯಲ್ಲಿ ಉಲ್ಲೇಖೀಸಲಾಗಿದೆ. ಕೋವಿಡ್ ವೈರಸ್ ಅನ್ನು ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಣೆ ಮಾಡಿದರೆ ಕೊರೊನಾ ಕುರಿತಾದ ತನಿಖೆಗೆ ಸಹಕಾರ ನೀಡುವುದಿಲ್ಲ ಎಂದು ಡಬ್ಲ್ಯು.ಎಚ್.‌ಒ.ಗೆ ಚೀನ ಬೆದರಿಕೆ ಹಾಕಿತು.

ಕೋವಿಡ್ ವೈರಸ್‌ ಇಡೀ ವಿಶ್ವಕ್ಕೆ ಹರಡುತ್ತಿರುವ ಸಂದರ್ಭದಲ್ಲಿ, ಅತ್ಯಂತ ನಿರ್ಣಾಯಕ ಸಮಯವಾದ ಜನವರಿಯಲ್ಲಿಯೇ ಚೀನ ಈ ವಿಳಂಬ ನೀತಿ ಅನುಸರಿಸಿತು. ಅಲ್ಲದೆ, ಕೋವಿಡ್ ವೈರಸ್ ವಿಶ್ವಾದ್ಯಂತ ಹರಡುತ್ತಿದ್ದರೆ, ಚೀನ ಮಾತ್ರ ಅಮೆರಿಕ, ಮತ್ತಿತರ ದೇಶಗಳಿಂದ ಅಗತ್ಯ ವಾದ ವೈದ್ಯಕೀಯ ಸಲಕರಣೆಗಳನ್ನು ಆಮದು ಮಾಡಿಕೊಂಡು ಅವುಗಳನ್ನು ಸಂಗ್ರಹಿಸಿಟ್ಟುಕೊಳ್ಳುವ ಕೆಲಸಕ್ಕೆ ಮುಂದಾಯಿತು ಎಂದು ಸಿಐಎ ವರದಿಯಲ್ಲಿ ಉಲ್ಲೇಖಿ ಸಲಾಗಿದೆ ಎಂದು ‘ನ್ಯೂಸ್‌ವೀಕ್‌’ ವರದಿ ಮಾಡಿದೆ.

ಸಾರ್ಸ್‌, ಹಕ್ಕಿಜ್ವರ, ಹಂದಿ ಜ್ವರ, ಕೋವಿಡ್ ವೈರಸ್ ಸೇರಿದಂತೆ ಕಳೆದ 20 ವರ್ಷಗಳ ಅವಧಿಯಲ್ಲಿ ಚೀನದಿಂದ 5 ಪಿಡುಗುಗಳು ಹೊರಬಂದಿದೆ. ಚೀನದ ಈ ಉಪದ್ರವ ನಿಲ್ಲಲೇಬೇಕು.
– ರಾಬರ್ಟ್‌ ಒ ಬ್ರಿಯೆನ್‌, ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.