ಕೋವಿಡ್ ಹೆಚ್ಚಳ: ಭಾರತ ಪ್ರವಾಸ ಮುಂದೂಡಿ: ಪ್ರಜೆಗಳಿಗೆ ಅಮೆರಿಕ ಎಚ್ಚರಿಕೆ
ಸ್ವಯಂ ಕ್ವಾರಂಟೈನ್ ಗೂ ಒಳಗಾಗಬೇಕಾಗಿಲ್ಲ ಎಂದು ಸಿಡಿಸಿ ಪ್ರಯಾಣಿಕರಿಗೆ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.
Team Udayavani, Apr 20, 2021, 11:16 AM IST
ವಾಷಿಂಗ್ಟನ್: ಕೋವಿಡ್ 19 ಸೋಂಕು ಪ್ರಕರಣ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತಕ್ಕೆ ಪ್ರವಾಸ ಕೈಗೊಳ್ಳುವುದನ್ನು ಮುಂದೂಡಬೇಕೆಂದು ಅಮೆರಿಕ ತನ್ನ ದೇಶದ ಪ್ರಜೆಗಳಿಗೆ ಸಲಹೆ ನೀಡಿರುವುದಾಗಿ ವರದಿ ತಿಳಿಸಿದೆ.
ಅಮೆರಿಕದ ಪ್ರಜೆಗಳು ಭಾರತ ಪ್ರವಾಸವನ್ನು ರದ್ದುಪಡಿಸುವಂತೆ ಡೀಸಿಸ್ ಕಂಟ್ರೋಲ್ ಆ್ಯಂಡ್ ಪ್ರಿವೆನ್ಶನ್ (ಸಿಡಿಸಿ) ಸಲಹೆ ನೀಡಿರುವುದಾಗಿ ಹೇಳಿದೆ. ಭಾರತದಲ್ಲಿ ಸಸ್ಯದ ಪರಿಸ್ಥಿತಿ ಕೋವಿಡ್ ಎರಡನೇ ಅಲೆ ತೀವ್ರವಾಗಿ ಹೆಚ್ಚಳವಾಗುತ್ತಿದೆ. ಅಲ್ಲದೇ ಲಸಿಕೆ ಪಡೆದವರು ಕೂಡಾ ಭಾರತಕ್ಕೆ ಪ್ರವಾಸ ಕೈಗೊಳ್ಳುವುದು ಅಪಾಯಕಾರಿಯಾಗಿದೆ ಎಂದು ಸಿಡಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಒಂದು ವೇಳೆ ಭಾರತಕ್ಕೆ ಭೇಟಿ ನೀಡಲೇಬೇಕು ಎಂದಾದರೆ ಪ್ರವಾಸಕ್ಕೂ ಮುನ್ನ ಲಸಿಕೆಯನ್ನು ಪಡೆದುಕೊಂಡ ನಂತರವೇ ತೆರಳಬೇಕು. ಅಲ್ಲದೇ ಪ್ರಯಾಣಿಕರು ಮಾಸ್ಕ್ ಕಡ್ಡಾಯ ಧರಿಸಿಬೇಕು, ಕನಿಷ್ಠ ಆರು ಅಡಿ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದೆ.
Amid a surge in COVID cases (in India), travellers should avoid all travel to India. Even fully vaccinated travellers may be at risk for getting & spreading variants and should avoid all travel to India. If you must travel to India, get fully vaccinated before travel: CDC, USA pic.twitter.com/VrLK4hpZRA
— ANI (@ANI) April 20, 2021
“ನೀವು ಸಂಪೂರ್ಣವಾಗಿ ಲಸಿಕೆಯನ್ನು ಪಡೆದುಕೊಂಡಿದ್ದರೆ, ಅಮೆರಿಕದಿಂದ ಭಾರತಕ್ಕೆ ತೆರಳುವ ಮುನ್ನ ಯಾವುದೇ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ. ಅಲ್ಲದೇ ನೀವು ವಿದೇಶದಿಂದ ಪ್ರಯಾಣ ಮುಗಿಸಿ ಅಮೆರಿಕಕ್ಕೆ ವಾಪಸ್ ಆದ ನಂತರ ಸ್ವಯಂ ಕ್ವಾರಂಟೈನ್ ಗೂ ಒಳಗಾಗಬೇಕಾಗಿಲ್ಲ ಎಂದು ಸಿಡಿಸಿ ಪ್ರಯಾಣಿಕರಿಗೆ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ