ವೆನ್ಲಾಕ್  ಹೊಸ ಬ್ಲಾಕ್‌ ಕೋವಿಡ್‌ 19 ಚಿಕಿತ್ಸೆಗೆ ಸಜ್ಜು


Team Udayavani, Apr 7, 2020, 6:56 AM IST

ವೆನ್ಲಾಕ್  ಹೊಸ ಬ್ಲಾಕ್‌ ಕೋವಿಡ್‌ 19 ಚಿಕಿತ್ಸೆಗೆ ಸಜ್ಜು

ಮಂಗಳೂರು: ವೆನ್ಲಾಕ್ ಆಸ್ಪತ್ರೆಯ ಸೂಪರ್‌ ಸ್ಪೆಷಾಲಿಟಿ ಬ್ಲಾಕ್‌ ಕೋವಿಡ್‌ 19 ಶಂಕಿತ ಹಾಗೂ ಸೋಂಕಿತರ ತಪಾಸಣೆಗಾಗಿ ಸಜ್ಜುಗೊಂಡಿದೆ. ಹಿರಿಯ ವೈದ್ಯಾಧಿಕಾರಿಗಳ ಉಪಸ್ಥಿತಿಯಲ್ಲಿ ಆಸ್ಪತ್ರೆಗೆ ಬರುವ ಶಂಕಿತ ಅಥವಾ ಸೋಂಕಿತ ರೋಗಿಗಳನ್ನು ಯಾವ ರೀತಿಯಲ್ಲಿ ಉಪಚರಿಸಲಾಗುತ್ತದೆ ಎಂಬ ಬಗ್ಗೆ ಸೋಮವಾರ ಪ್ರಾತ್ಯಕ್ಷಿಕೆ ನಡೆಸಲಾಯಿತು.

ವೆನ್ಲಾಕ್ ಕೃತಕ ಅವಯವ ಕೇಂದ್ರ ಬಳಿಯ ಸೂಪರ್‌ ಸ್ಪೆಷಾಲಿಟಿ ಬ್ಲಾಕ್‌ ಅನ್ನು ಸಂಪೂರ್ಣವಾಗಿ ಕೋವಿಡ್‌ ಬ್ಲಾಕ್‌ ಆಗಿ ಪರಿವರ್ತಿಸಲಾಗಿದೆ. ಸದ್ಯ ಸೋಂಕಿತರು ಹಾಗೂ ಶಂಕಿತ ರೋಗಿಗಳು ಆಸ್ಪತ್ರೆಯ ಆಯುಷ್‌ ಬ್ಲಾಕ್‌ನ ನಿಗಾದಲ್ಲಿದ್ದಾರೆ.

ಸೂಪರ್‌ ಸ್ಪೆಷಾಲಿಟಿ ಬ್ಲಾಕ್‌ನ ನೂತನ ಕೋವಿಡ್‌ ಬ್ಲಾಕ್‌ನ 3ನೇ ಮಹಡಿಯನ್ನು ಸಂಪೂರ್ಣವಾಗಿ ಕೋವಿಡ್‌ 19 ಶಂಕಿತ ರೋಗಿಗಳಿಗೆ ಮೀಸಲಿಡಲಾಗಿದೆ. ಇಲ್ಲಿ ನಾಲ್ಕು ವಿಭಾಗಗಳಲ್ಲಿ ಒಟ್ಟು 79 ಹಾಸಿಗೆ ಗಳಿವೆ. ಪ್ರತಿ ವಿಭಾಗದಲ್ಲೂ ರೋಗಿಗಳಿಗೆ ಚಿಕಿತ್ಸೆ ನೀಡುವ ವೈದ್ಯರು ಹಾಗೂ ಸಿಬಂದಿಗೆ ಡಾನ್ನಿಂಗ್‌ ಹಾಗೂ ಡಾಪ್ಪಿಂಗ್‌ ರೂಂ (ರೋಗಿಯ ಬಳಿ ತೆರಳುವಾಗ ಹಾಕಬೇಕಾದ ಉಡುಪುಗಳನ್ನು ಹಾಕಿಕೊಳ್ಳಲು ಹಾಗೂ ತೆಗೆಯಲು ಪ್ರತ್ಯೇಕವಾದ ಕೊಠಡಿ)ಗಳಿವೆ. ಶಂಕಿತ ರೋಗಿಯ ಗಂಟಲ ದ್ರವ ಸಂಗ್ರಹಕ್ಕೂ ಪ್ರತ್ಯೇಕ ಸುಸಜ್ಜಿತ ಕೊಠಡಿ ಇದೆ. ಶಂಕಿತ ರೋಗಿಗಳ ವರದಿ ಪಾಸಿಟಿವ್‌ ಬಂದಲ್ಲಿ ಅವರನ್ನು 2ನೇ ಮಹಡಿ ಯಲ್ಲಿರುವ ಪಾಸಿಟಿವ್‌ ರೋಗಿಗಳ ವಿಭಾಗಕ್ಕೆ ಸ್ಥಳಾಂತರಿಸಲಾಗುತ್ತದೆ. ಅಲ್ಲಿ ಒಟ್ಟು 99 ಹಾಸಿಗೆಗಳಿವೆ.

ಸೋಂಕಿತರಲ್ಲಿ ಚಿಂತಾಜನಕ ಸ್ಥಿತಿಯಲ್ಲಿರುವ ರೋಗಿಗಳನ್ನು 1ನೇ ಮಹಡಿಗೆ ಸ್ಥಳಾಂತರಿಸಲಾಗುತ್ತದೆ. ಅಲ್ಲಿ 49 ಹಾಸಿಗೆಗಳನ್ನು ವ್ಯವಸ್ಥೆ ಮಾಡಲಾಗಿದೆ. ದ್ವಿತೀಯ ಮತ್ತು ತೃತೀಯ ಮಹಡಿ (ಶಂಕಿತರು ಹಾಗೂ ಪಾಸಿಟಿವ್‌ ರೋಗಿಗಳನ್ನು ಇರಿಸಲಾಗಿರುವ ವಿಭಾಗ)ಗಳಿಗೆ ತೆರಳಬೇಕಾದರೆ ಪ್ರತ್ಯೇಕ ಲಿಫ್ಟ್ಗಳನ್ನು ಮೀಸಲಿಡಲಾಗಿದೆ. ವೆನ್ಲಾಕ್ಆಸ್ಪತ್ರೆಯಲ್ಲಿ ಕೆಎಂಸಿಯ 50 ಮಂದಿ, ಎನ್‌ಎಚ್‌ಎಂನ 44 ಹಾಗೂ 136 ಸರಕಾರಿ ದಾದಿಯರು ಕರ್ತವ್ಯದಲ್ಲಿದ್ದು, ಅವರೆಲ್ಲರ ಸೇವೆಯನ್ನು ಕೋವಿಡ್‌ 19 ಚಿಕಿತ್ಸೆಗೆ ಪಡೆಯಲಾಗುತ್ತಿದೆ.

ಕೋವಿಡ್‌ 19 ಪರೀಕ್ಷಾ ಕೇಂದ್ರಕ್ಕೆ ಅನುಮತಿ
ಕೋವಿಡ್‌ 19 ವೈರಸ್‌ ಪತ್ತೆಗೆ ಗಂಟಲ ದ್ರವ ಮಾದರಿ ಪರೀಕ್ಷೆ ನಡೆಸಲು ನಗರದ ವೆನ್ಲಾಕ್ ಆಸ್ಪತ್ರೆಗೆ ಮಂಜೂರಾಗಿರುವ ಪ್ರಯೋಗಾಲಯಕ್ಕೆ ಐಸಿಎಂಆರ್‌ನ ಅನುಮತಿ ಲಭಿಸಿದೆ.ಪ್ರಯೋಗಾಲಯವು 3 ದಿನ ಗಳ ಹಿಂದೆ ಆರಂಭವಾಗಿದ್ದು, ಪ್ರಾಯೋ ಗಿಕವಾಗಿ ಕಾರ್ಯ ನಿರ್ವಹಿಸುತ್ತಿತ್ತು. ಈಗ ಅಧಿಕೃತವಾಗಿ ಆರಂಭವಾಗುವುದರೊಂದಿಗೆ ರೋಗಿಯ ಗಂಟಲ ದ್ರವದ ಮಾದರಿಯ ಪರೀಕ್ಷಾ ವರದಿಯನ್ನು ಅಂದಂದೇ ಪಡೆಯಬಹುದಾಗಿದೆ. ಈವರೆಗೆ ಮಾದರಿಯನ್ನು ಹಾಸನ ಅಥವಾ ಬೆಂಗಳೂರಿಗೆ ಕಳುಹಿಸಲಾಗುತ್ತಿತ್ತು

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.