ನಾಲ್ಕು ದಿನಗಳಲ್ಲಿ 10 ಸಾವಿರ ಮಂದಿಗೆ ಸೋಂಕು!: 3 ದಿನಗಳಲ್ಲಿ 214 ಸೋಂಕಿತರ ಸಾವು


Team Udayavani, Jul 14, 2020, 7:15 AM IST

ನಾಲ್ಕು ದಿನಗಳಲ್ಲಿ 10 ಸಾವಿರ ಮಂದಿಗೆ ಸೋಂಕು!: 3 ದಿನಗಳಲ್ಲಿ 214 ಸೋಂಕಿತರ ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಲ್ಲಿಯೇ 10 ಸಾವಿರಕ್ಕೂ ಹೆಚ್ಚು ಮಂದಿಗೆ ಕೋವಿಡ್ 19 ವೈರಸ್‌ ಸೋಂಕು ದೃಢಪಟ್ಟಿದೆ.

ಅಲ್ಲದೆ ಕಳೆದ ಮೂರು ದಿನಗಳಲ್ಲಿ 214 ಸೋಂಕಿತರು ಬಲಿಯಾಗಿದ್ದಾರೆ. ಈ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯ 40 ಸಾವಿರದ ಗಡಿ ದಾಟಿದ್ದು, ರಾಜಧಾನಿ ಬೆಂಗಳೂರು 20 ಸಾವಿರ ಹೊಸ್ತಿಲಲ್ಲಿ ಬಂದು ನಿಂತಿದೆ.

ಸೋಮವಾರ ಒಂದೇ ದಿನ ಹೊಸದಾಗಿ 2,738 ಮಂದಿಗೆ ಸೋಂಕು ತಗುಲಿರುವುದು, 73 ಸೋಂಕಿತರು ಮೃತಪಟ್ಟಿರುವುದು, 839 ಮಂದಿ ಗುಣಮುಖರಾಗಿರುವುದು ವರದಿಯಾಗಿದೆ.

ಈ ಮೂಲಕ ರಾಜ್ಯದ ಒಟ್ಟಾರೆ ಸೋಂಕಿತರ ಸಂಖ್ಯೆ 41,581ಕ್ಕೆ, ಸಾವಿಗೀಡಾದವರ ಸಂಖ್ಯೆ 757ಕ್ಕೆ, ಗುಣಮುಖರಾದವರ ಸಂಖ್ಯೆ 16,248ಕ್ಕೆ ಏರಿಕೆಯಾಗಿದೆ. ಸದ್ಯ 24,572 ಸೋಂಕಿತರು ಆಸ್ಪತ್ರೆ ಮತ್ತು ಕೋವಿಡ್ 19 ಕೇರ್‌ ಸೆಂಟರ್‌ಗಳಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. ಈ ಪೈಕಿ 545 ಸೋಂಕಿತರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತುರ್ತು ನಿಗಾ ಘಟಕದಲ್ಲಿದ್ದಾರೆ.

ಕಳೆದ ಗುರುವಾರ (ಜೂ.)ರಾಜ್ಯದ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 31,105 ಇತ್ತು. ಆ ನಂತರ ಶುಕ್ರವಾರ – 1,313, ಶನಿವಾರ – 2,797, ರವಿವಾರ 2,627, ಸೋಮವಾರ 2,738 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ನಾಲ್ಕು ದಿನಗಳಲ್ಲಿಯೇ 10,476 ಮಂದಿ ಸೋಂಕಿತರಾಗಿ 40 ಸಾವಿರ ಗಡಿ ದಾಟಿದೆ. ಅಲ್ಲದೆ ಸೋಂಕಿತರ ಸಾವು ಕೂಡ ಏರಿಕೆ ಹಾದಿಯಲ್ಲಿಯೇ ಸಾಗಿದ್ದು, ಶನಿವಾರ 70, ರವಿವಾರ 71, ಸೋಮವಾರ 73 ಸೋಂಕಿತರ ಸಾವು ವರದಿಯಾಗಿವೆ.

14 ಮಂದಿಗೆ ಸೋಂಕಿನ ಲಕ್ಷಣ ಇಲ್ಲ!
ರಾಜ್ಯದಲ್ಲಿ ಸೋಮವಾರ ವರದಿಯಾಗಿರುವ 73 ಮೃತಪಟ್ಟವರಲ್ಲಿ 14 ಮಂದಿಗೆ ಸೋಂಕಿನ ಲಕ್ಷಣವೇ ಇಲ್ಲ. ಇನ್ನು 2,738 ಸೋಂಕಿತರಲ್ಲಿ 1,315 ಮಂದಿ ಬೆಂಗಳೂರಿನವರು. ಈ ಮೂಲಕ ನಗರದ ಪ್ರಕರಣಗಳ ಸಂಖ್ಯೆ 19,702ಕ್ಕೆ ತಲುಪಿದ್ದು, ಈ ಪೈಕಿ 4,325 ಮಂದಿ ಗುಣ ಮುಖರಾಗಿದ್ದು, 321 ಮಂದಿ ಸಾವಿಗೀಡಾಗಿದ್ದಾರೆ.

ಕಡಿಮೆ ಪರೀಕ್ಷೆ – ಹೆಚ್ಚು ಸೋಂಕು!
ಸೋಮವಾರ ರಾಜ್ಯದಲ್ಲಿ ಸೋಂಕು ಪರೀಕ್ಷೆಗಳು 17 ಸಾವಿರಕ್ಕೆ ಇಳಿಕೆಯಾಗಿವೆ. ರವಿವಾರದವರೆಗೂ ಸರಾಸರಿ 20 ಸಾವಿರ ಪರೀಕ್ಷೆಗಳಾಗುತ್ತಿದ್ದವು. ಇನ್ನು ಪರೀಕ್ಷೆ ಪ್ರಮಾಣ ಇಳಿಕೆಯಾದರೂ ಸೋಂಕು ಮಾತ್ರ ಇಳಿಕೆಯಾಗಿಲ್ಲ. ಇದರಿಂದ ಪಾಸಿಟಿವ್‌ ದರ ಶೇ.13 ರಿಂದ 16ಕ್ಕೆ ಹೆಚ್ಚಳವಾಗಿದೆ.

ಅಂದರೆ, 100 ಮಂದಿ ಪರೀಕ್ಷೆ ಮಾಡಿದರೆ 16 ಮಂದಿಗೆ ಸೋಂಕು ದೃಢಪಡುತ್ತಿದೆ. ಇನ್ನು ಮಂಗಳವಾರದಿಂದ ರ್ಯಾಪಿಡ್‌ ಆ್ಯಂಟಿಜನ್‌ ಪರೀಕ್ಷೆಗಳ ವರದಿ ಬರಲಿದ್ದು, ಸೋಂಕು ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.