ಪತ್ರಗಳನ್ನು ಬಟವಾಡೆ ಮಾಡುವ ಅಂಚೆಯಣ್ಣ ಕೋವಿಡ್ ಆಪತ್ಕಾಲದಲ್ಲಿ ಜೀವರಕ್ಷಕ!

ಆಪತ್ತಿನ ಕಾಲದಲ್ಲಿ ಅಂಚೆಯಣ್ಣನ ಅಮೋಘ ಸೇವೆ ; ಬಿಬಿಸಿಯಿಂದಲೇ ಶಹಬ್ಬಾಸ್ ಗಿರಿ!

Team Udayavani, Apr 16, 2020, 5:58 AM IST

ಪತ್ರಗಳನ್ನು ಬಟವಾಡೆ ಮಾಡುವ ಅಂಚೆಯಣ್ಣ ಕೋವಿಡ್ ಆಪತ್ಕಾಲದಲ್ಲಿ ಜೀವರಕ್ಷಕ!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ತಮಿಳುನಾಡಿನಿಂದ ಉತ್ತರ ಪ್ರದೇಶಕ್ಕೆ ಡೆಫ್ರಿಲ್ಲೇಟರ್ಸ್‌ ಸಾಗಿಸುವ ಸಮಸ್ಯೆ ಎದುರಾದಾಗ ಅದಕ್ಕೂ ಸೈ ಎಂದಿತು ಅಂಚೆ ಇಲಾಖೆ. ಓರ್ವ ಉತ್ಪಾದಕರ ಔಷಧವನ್ನು ಶೀತಲೀಕರಣ ವ್ಯವಸ್ಥೆಯಲ್ಲೇ ಸಾಗಿಸಬೇಕಿತ್ತು. ಇದಕ್ಕೂ ಹಿಂದೇಟು ಹಾಕಲಿಲ್ಲ ಅಂಚೆಯವರು.

ಹೊಸದಿಲ್ಲಿ: ಕೋವಿಡ್‌ ವೈರಾಣುವಿನ ಆಟಾಟೋಪದಿಂದ ಇಡೀ ದೇಶ ಸಂಪೂರ್ಣ ಸ್ತಬ್ಧಗೊಂಡಿರುವಾಗ ಆಪತ್ಪಾಂಧವನಾದದ್ದು ಬೇರೆ ಯಾರೂ ಅಲ್ಲ ನಮ್ಮ ಅಂಚೆಯಣ್ಣ. ಭಾರತ ಜಗತ್ತಿನಲ್ಲೇ ಅತಿ ದೊಡ್ಡ ಅಂಚೆ ಜಾಲವನ್ನು ಹೊಂದಿದೆ. ಅಂಚೆಯೆಂದರೆ ಈಗ ಬರೀ ಪತ್ರಗಳನ್ನು ಬಟವಾಡೆ ಮಾಡುವ ಇಲಾಖೆಯಲ್ಲ.

ಅದು ತನ್ನದೇ ಆದ ಬ್ಯಾಂಕ್‌ ಸೇವೆ ನೀಡುತ್ತಿದೆ, ಪಿಂಚಣಿ ನಿಧಿಯನ್ನು ನಡೆಸುತ್ತಿದೆ, ಉಳಿತಾಯ ಸ್ಕೀಂಗಳನ್ನು ಹೊಂದಿದೆ. ಹೀಗೆ ಜನಜೀವನದ ಅವಿಭಾಜ್ಯ ಅಂಗವಾಗಿರುವ ಅಂಚೆ ಇಲಾಖೆ ಕೋವಿಡ್‌ ಸಮಯದಲ್ಲಿ ಗಮನ ಸೆಳೆದದ್ದು ಜೀವ ರಕ್ಷಕ ಔಷಧಗಳ ಸಾಗಾಟವನ್ನು ಮಾಡುವ ಮೂಲಕ. ಬಿಬಿಸಿಯೇ ಅಂಚೆ ಇಲಾಖೆಯ ಈ ಅಮೋಘ ಸೇವೆಯನ್ನು ಗುರುತಿಸಿ ವಿಶೇಷ ಲೇಖನ ಪ್ರಕಟಿಸಿದೆ.

ಎಲ್ಲ ರೀತಿಯ ಸಾರಿಗೆ ಸೇವೆ ಸಂಪೂರ್ಣ ಸ್ಥಗಿತಿಗೊಂಡಿದ್ದರೂ ಅಂಚೆ ಇಲಾಖೆಯ ಕೆಂಪು ವ್ಯಾನ್‌ಗಳು ದೇಶವಿಡೀ ಸಂಚರಿಸುತ್ತಿವೆ. ಇವುಗಳು ಈಗ ಸಾಗಿಸುತ್ತಿರುವುದು ಪತ್ರಗಳನ್ನಲ್ಲ ವೈದ್ಯಕೀಯ ಕ್ಷೇತ್ರಕ್ಕೆ ಅತ್ಯಗತ್ಯವಿರುವ ಔಷಧಿ, ಲಸಿಕೆ, ಮಾಸ್ಕ್, ಸುರಕ್ಷಾ ಪೋಷಾಕು ಇತ್ಯಾದಿಗಳನ್ನು.

ಮಾ. 24ರಂದು ರಾತ್ರಿ ಲಾಕ್‌ಡೌನ್‌ ಘೋಷಣೆಯಾಗಿದಾಗ ಅತಿ ದೊಡ್ಡ ಆಘಾತ ಎದುರಿಸಿದವರು ಔಷಧ ತಯಾರಕರು. ಏಕೆಂದರೆ ಲಾಕ್‌ಡೌನ್‌ ಜಾರಿಯಾಗಲು ಬಾಕಿ ಇದ್ದದ್ದು ಬರೀ 4 ತಾಸುಗಳು ಮಾತ್ರ. ಸಾಮಾನ್ಯವಾಗಿ ಔಷಧಗಳ ರವಾನೆಯಾಗುವುದು ಕೊರಿಯರ್‌ಗಳ ಮೂಲಕ. ಆದರೆ ಲಾಕ್‌ಡೌನ್‌ನಿಂದಾಗಿ ಯಾವ ಕೊರಿಯರ್‌ ಸಂಸ್ಥೆಯೂ ಸೇವೆ ನೀಡುವ ಸ್ಥಿತಿಯಲ್ಲಿರಲಿಲ್ಲ. ಅನೇಕ ಔಷಧ ಕಂಪೆನಿಗಳು ಅದಾಗಲೇ ಡೆಲಿವರಿ ಆರ್ಡರ್‌ ಸ್ವೀಕರಿಸಿಯಾಗಿತ್ತು. ಅಲ್ಲದೆ ಕೋವಿಡ್‌ ವಿರುದ್ಧ ಸುರಕ್ಷಾ ಸಾಧನಗಳು ದೇಶದ ಒಂದು ಮೂಲೆಯಿಂದ ಇನ್ನೊಂದು ಮೂಲೆಗೆ ತಲುಪುದು ಅಗತ್ಯವಾಗಿತ್ತು. ಈ ಸಂದರ್ಭದಲ್ಲಿ ನೆರವಿಗೆ ಬಂದದ್ದು ಅಂಚೆ ಇಲಾಖೆ.

ಅಂಚೆ ಇಲಾಖೆಯ ತುರ್ತು ಸೇವೆ ಒಂದು ಮಾದರಿಯನ್ನು ಭಾರತೀಯ ಔಷಧ ತಯಾರಕರ ಅಸೋಸಿಯೇಶನ್‌ನ ನಿರ್ದೇಶಕ ಅಶೋಕ್‌ ಕುಮಾರ್‌ ಮದನ್‌ ವಿವರಿಸುತ್ತಾರೆ: ಉತ್ತರ ಪ್ರದೇಶದ ಹಿರಿಯ ಅಂಚೆ ಅಧಿಕಾರಿ ಅಲೋಕ್‌ ಓಝಾ ಅವರಿಂದ ಮದನ್‌ಗೆ ಫೋನ್‌ ಕರೆಯೊಂದು ಬರುತ್ತದೆ. ನಮ್ಮಿಂದ ನಿಮಗೆ ಏನಾದರೂ ಸಹಾಯಬೇಕಾಗಬಹುದೇ ಎಂದು ಕೇಳಿದರು ಓಝಾ. ಗುಜರಾತಿನಲ್ಲಿ ಅದಾಗಲೇ ಅಂಚೆ ಇಲಾಖೆ ಔಷಧ ಸಾಗಾಟ ಪ್ರಾರಂಭಿಸಿತ್ತು. ಇಂಥ ಒಂದು ಪರಿಹಾರವನ್ನು ನಿರೀಕ್ಷಿಸುತ್ತಿದ್ದ ಮದನ್‌ ಕೂಡಲೇ ಈ ಕೊಡುಗೆಯನ್ನು ಒಪ್ಪಿಕೊಂಡರು.

ಅನಂತರ ಅನೇಕ ಔಷಧ ಕಂಪೆನಿಗಳು ಅಂಚೆ ಇಲಾಖೆಯ ಸೇವೆಯನ್ನು ಬಳಸಿಕೊಂಡಿವೆ. ಲಕ್ನೊದ ಡಾ| ಉಜ್ವಲಾ ಘೋಷಾಲ್‌ಗೆ 550 ಕಿ.ಮೀ ದೂರವಿರುವ ದಿಲ್ಲಿಯಿಂದ ಕೋವಿಡ್‌ ಟೆಸ್ಟಿಂಗ್‌ ಕಿಟ್‌ಗಳನ್ನು ತಲುಪಿಸಿದ್ದು ಇವುಗಳಲ್ಲಿ ಒಂದು. ಸಾಮಾನ್ಯವಾಗಿ ಅಂಚೆ ಇಲಾಖೆಯ ಪಾರ್ಸೆಲ್‌ಗ‌ಳು ಅಂಚೆ ಕಚೇರಿಗೆ ತಲುಪುತ್ತವೆ. ಅಲ್ಲಿಂದ ನಾವು ಹೋಗಿ ತರಬೇಕು. ಆದರೆ ಈ ಸಂದರ್ಭದಲ್ಲಿ ಅಂಚೆ ಇಲಾಖೆಯವರು ವೈದ್ಯಕೀಯ ಸಾಮಾಗ್ರಿಗಳನ್ನು ಮನೆ ಬಾಗಿಲಿಗೆ ತಲುಪಿಸಿದರು.

ತಮಿಳುನಾಡಿನಿಂದ ಉತ್ತರ ಪ್ರದೇಶಕ್ಕೆ ಡೆಫ್ರಿಲ್ಲೇಟರ್ಸ್‌ ಸಾಗಿಸುವ ಸಮಸ್ಯೆ ಎದುರಾದಾಗ ಅದಕ್ಕೂ ಸೈ ಎಂದಿತು ಅಂಚೆ ಇಲಾಖೆ. ಓರ್ವ ಉತ್ಪಾದಕರ ಔಷಧವನ್ನು ಶೀತಲೀಕರಣ ವ್ಯವಸ್ಥೆಯಲ್ಲೇ ಸಾಗಿಸಬೇಕಿತ್ತು. ಇದಕ್ಕೂ ಹಿಂದೇಟು ಹಾಕಲಿಲ್ಲ ಅಂಚೆಯವರು.

ನಿಜವಾಗಿ ನೋಡಿದರೆ ವೈದ್ಯರು, ನರ್ಸ್‌ಗಳು, ಆರೋಗ್ಯ ಕಾರ್ಯಕರ್ತರು, ಪೊಲೀಸರು ನೀಡಿದಷ್ಟೇ ಮಹತ್ವದ ಸೇವೆಯನ್ನು ಅಂಚೆ ಇಲಾಖೆಯವರು ನೀಡಿದ್ದಾರೆ. ಕೋವಿಡ್‌ ವಿರುದ್ಧದ ಯುದ್ಧದಲ್ಲಿ ಮುಂಚೂಣಿಯಲ್ಲಿ ನಿಂತು ಹೋರಾಡಿದ ಯೋಧರಲ್ಲಿ ಅಂಚೆಯವರೂ ಬರುತ್ತಾರೆ. ಆದರೆ ಅವರ ಸೇವೆ ಜಗತ್ತಿನ ಕಣ್ಣಿಗೆ ಬಿದ್ದಿಲ್ಲ ಅಷ್ಟೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.