ಪ್ರತಿದಿನ ಯೋಗ, ಧ್ಯಾನ ಮಾಡಿ: ಕೋವಿಡ್ ನಿಂದ ಚೇತರಿಸಿಕೊಂಡವರಿಗೆ ಮಾರ್ಗಸೂಚಿ ಬಿಡುಗಡೆ !
Team Udayavani, Sep 13, 2020, 7:31 PM IST
ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 47 ಲಕ್ಷಕ್ಕೆ ಏರಿಕೆಯಾಗಿದೆ. ಮಾತ್ರವಲ್ಲದೆ ಪ್ರತಿದಿನ 70 ಸಾವಿರಕ್ಕಿಂತ ಹೆಚ್ಚು ಜನರು ಸೊಂಕಿನಿಂದ ಗುಣಮುಖರಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಕೋವಿಡ್ ನಿಂದ ಗುಣಮುಖರಾದವರಿಗೆಂದು ಆರೋಗ್ಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಕೋವಿಡ್ ನಿಂದ ಚೇತರಿಸಿಕೊಂಡವರ ಯೋಗಕ್ಷೇಮಕ್ಕಾಗಿ ಸಮಗ್ರ ಆರೋಗ್ಯ ವಿಧಾನದ ಅಗತ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಮಾತ್ರವಲ್ಲದೆ ಪ್ರತಿದಿನ ಯೋಗಾಸನ, ಪ್ರಾಣಾಯಾಮ, ಧ್ಯಾನ, ಉಸಿರಾಟದ ವ್ಯಾಯಾಮ, ಬೆಳಗ್ಗೆ ಮತ್ತು ಸಂಜೆ ವಾಕಿಂಗ್ ಮುಂತಾದ ಕ್ರಮಗಳನ್ನು ಅನುಸರಸುವಂತೆ ತನ್ನ ಮಾರ್ಗ ಸೂಚಿಯಲ್ಲಿ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 78,399 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಆ ಮೂಲಕ ಒಟ್ಟಾರೆ ಚೇತರಿಸಿಕೊಂಡವರ ಪ್ರಮಾಣ 37,02,595ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಸೋಂಕಿನಿಂದ ಚೇತರಿಕೆ ಪ್ರಮಾಣ 77.88% ರಷ್ಟಿದೆ.
ಆರೊಗ್ಯ ಅಧಿಕಾರಿಗಳ ಪ್ರಕಾರ ಕೋವಿಡ್ ಸೋಂಕಿನಿಂದ ಗುಣಮುಖರಾದ ನಂತರ ಜನರು ಹೆಚ್ಚು ಸುರಕ್ಷಿತಾ ವಿಧಾನ ಅಳವಿಡಿಕೊಳ್ಳಬೇಕು. ಪೂರ್ಣ ಪ್ರಮಾಣದ ಚೇತರಿಕೆ ಈ ದಿನಗಳಲ್ಲಿ ಸಾಕಷ್ಟು ಸವಾಲಾಗಲಿದೆ ಎಂದು ತಿಳಿಸಿದ್ದಾರೆ.
ಚೇತರಿಸಿಕೊಂಡ ರೋಗಿಗಳಿಗೆ ಸಾಮಾನ್ಯವಾಗಿ ಆಯಾಸ ಹೆಚ್ಚಾಗಿ ಕಂಡುಬರುತ್ತಿದೆ. ಸಾಮಾನ್ಯ ಜೀವನಕ್ಕೆ ಮರಳಲು ಹಲವರಿಗೆ ಇಂದಿಗೂ ಸಮಸ್ಯೆಯಾಗುತ್ತಿದೆ. ಈ ಕಾರಣದಿಂದ ಕೆಲವೊಂದು ಮಾರ್ಗಸೂಚಿಗಳನ್ನು ಅನುಸರಿಸುವಂತೆ ಸರ್ಕಾರ ತಿಳಿಸಿದೆ.
ಚೇತರಿಸಿಕೊಂಡ ರೋಗಿಗಳು ಕೂಡ ನಂತರದ ದಿನಗಳಲ್ಲಿ ತಲೆನೋವು, ಸುಸ್ತು, ದೇಹದಲ್ಲಿ ಸಣ್ಣ ಮಟ್ಟಿಗಿನ ನೋವು, ಕಡಿಮೆ ಪ್ರಮಾಣದ ಜ್ವರ ಎಂದು ಬರುವುದನ್ನು ಗಮನಿಸಿದ್ದೇವೆ. ಈ ಕಾರಣದಿಂದ ಕೆಲವೊಂದು ಆರೋಗ್ಯ ಕ್ರಮಗಳನ್ನು ತಿಳಿಸಲಾಗಿದೆ ಎಂದು ಸಫ್ದರ್ ಜಂಗ್ ಹಾಸ್ಪತ್ರೆಯ ವೈದ್ಯ ಡಾ. ಅನೂಪ್ ಕುಮಾರ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ