Desi Swara: ಬಹ್ರೈನ್‌ ಕನ್ನಡ ಸಂಘ: ಇಫ್ತಾರ್‌ ಕೂಟ


Team Udayavani, Mar 30, 2024, 10:51 AM IST

Desi Swara: ಬಹ್ರೈನ್‌ ಕನ್ನಡ ಸಂಘ: ಇಫ್ತಾರ್‌ ಕೂಟ

ಬಹ್ರೈನ್‌: ಇಲ್ಲಿನ ಕನ್ನಡ ಸಂಘವು ತನ್ನ ಸದಸ್ಯರುಗಳು ಹಾಗೂ ಇನ್ನಿತರ ಆಹ್ವಾನಿತ ಅತಿಥಿಗಳಿಗಾಗಿ ಪವಿತ್ರ ರಮ್ಜಾನ್‌ ತಿಂಗಳ ಶುಕ್ರವಾರದ ಸಂಜೆ ಮನಾಮದಲ್ಲಿರುವ ಕನ್ನಡ ಭವನದ ಸಭಾಂಗಣದಲ್ಲಿ ಇಫ್ತಾರ್‌ ಕೂಟವೊಂದನ್ನು ಏರ್ಪಡಿಸಿದ್ದು ಸಂಘದ ಸದಸ್ಯರು, ಆಹ್ವಾನಿತರೂ ಸೇರಿದಂತೆ ನೂರಾರು ಜನರು ಈ ಇಫ್ತಾರ್‌ ಕೂಟದಲ್ಲಿ ಭಾಗವಹಿಸಿದ್ದರು.

ಕನ್ನಡ ಸಂಘದ ಅಧ್ಯಕ್ಷರಾದ ಅಮರನಾಥ್‌ ರೈ ಹಾಗೂ ಆಡಳಿತ ಮಂಡಳಿಯ ಇತರ ಪಧಾದಿಕಾರಿಗಳು ಇಫ್ತಾರ್‌ ಕೂಟಕ್ಕೆ ಆಗಮಿಸಿದಂತಹ ಅತಿಥಿಗಳನ್ನು ಆದರದಿಂದ ಬರಮಾಡಿಕೊಂಡರು.

ಇಲ್ಲಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಇತರ ಭಾರತೀಯ ಸಮುದಾಯದ ಗಣ್ಯರುಗಳು ಈ ಇಫ್ತಾರ ಕೂಟದಲ್ಲಿ ಭಾಗಿಯಾಗಿ ಸರ್ವಧರ್ಮ ಸಮಾನವೆಂಬ ಸಾಮರಸ್ಯವನ್ನು ತೋರಿದರು.

ಕನ್ನಡ ಸಂಘದ ಪ್ರಧಾನ ಕಾರ್ಯದರ್ಶಿಗಳಾದಂತಹ ರಾಂಪ್ರಸಾದ್‌ ಅಮ್ಮೆನಡ್ಕ ಅವರು ನೆರೆದವರನ್ನು ಇಫ್ತಾರ್‌ ಕೂಟಕ್ಕೆ ಸ್ವಾಗತಿಸಿ ರಮ್ಜಾನ್‌ನ ಶುಭ ಹಾರೈಸಿದರು. ಸಂಘದ ಅಧ್ಯಕ್ಷರಾದ ಅಮರನಾಥ್‌ ರೈ ಅವರು ಮಾತನಾಡಿ ತಮ್ಮ ಕರೆಗೆ ಓಗೊಟ್ಟು ಇಷ್ಟೊಂದು ಸಂಖ್ಯೆಯಲ್ಲಿ ಇಫ್ತಾರ್‌ ಕೂಟದಲ್ಲಿ ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಅರ್ಪಿಸಿದರು.

ಈ ಇಫ್ತಾರ್‌ ಕೂಟದ ಮುಖ್ಯ ಅತಿಥಿಗಳಾಗಿ ಇಲ್ಲಿನ ಭಾರತೀಯ ದೂತಾವಾಸದ ಎರಡನೇ ಕಾರ್ಯದರ್ಶಿಗಳಾದ ಗಿರೀಶ್‌ ಚಂದ್ರ ಪೂಜಾರಿ, ಕ್ಯಾಪಿಟಲ್‌ ಗವರ್ನರೇಟ್‌ನ ನಿರ್ದೇಶಕರಾದ ಯೂಸಫ್ ಲೋರಿಯವರು ಉಪಸ್ಥಿತರಿದ್ದು ಶುಭ ಹಾರೈಸಿದರು. ವಾಗ್ಮಿಗಳಾದಂತಹ ಜನಾಬ್‌ ಮೊಹಮ್ಮದ್‌ ಮುಜಾಹಿದ್‌ ಹಾಗೂ ಜನಾಬ್‌ ಶಹೀದ್‌ ಚೌಧರಿಯವರು ರಮ್ಜಾನ್‌ ತಿಂಗಳಲ್ಲಿ ಉಪವಾಸದ ಮಹತ್ವದ ಬಗ್ಗೆ ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಬಹ್ರೈನ್‌ ಕ್ರಿಕೆಟ್‌ ಫೆಡರೇಶನ್‌ನ ಸಲಹಾ ಮಂಡಳಿಯ ಅಧ್ಯಕ್ಷರಾದ ಮೊಹಮ್ಮದ್‌ ಮನ್ಸೂರ್‌, ಸೆಂಟ್ರಲ್‌ ಕೆಫೆ ಹೊಟೇಲ್‌ ಸಂಸ್ಥೆಯ ಆಡಳಿತ ನಿರ್ದೇಶಕ ಪ್ರಕಾಶ್‌ ಶೆಟ್ಟಿ, ಕನ್ನಡ ಸಂಘದ ಉಪಾಧ್ಯಕ್ಷರಾದ ಮಹೇಶ್‌ ಕುಮಾರ್‌ ಮುಂತಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಅತಿಥಿ ಗಣ್ಯರುಗಳಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು.

ಉಪವಾಸ ಬಿಡುವ ಸಮಯದ ಪ್ರಾರ್ಥನೆಯಾಗುತ್ತಿದ್ದಂತೆಯೇ ನೆರೆದವರೆಲ್ಲರೂ ಹಣ್ಣು, ಹಂಪಲು ಹಾಗೂ ನೀರಿನ ಸೇವನೆಯೊಂದಿಗೆ ಇಫ್ತಾರ್‌ ಕೂಟಕ್ಕೆ ಚಾಲನೆ ನೀಡಿದರು. ಅನಂತರ ವಿಶೇಷವಾದ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು. ಸರ್ವಧರ್ಮ ಸಮನ್ವಯ ಎಂಬ ಕನ್ನಡ ಸಂಘದ ಮೂಲ ಮಂತ್ರದಂತೆಯೇ ಸದಸ್ಯರುಗಳು ಒಂದಾಗಿ ಈ ಇಫ್ತಾರ್‌ ಕೂಟದಲ್ಲಿ ಭಾಗಿಯಾಗಿ ಸೌಹಾರ್ದತೆಯನ್ನು ಮೆರೆದರು.

ವರದಿ – ಕಮಲಾಕ್ಷ ಅಮೀನ್‌

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…..

Desi Swara: ಇಮೋಜಿ… ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.