Desi Swara: ಬಂಟ್ಸ್‌ ಬಹ್ರೈನ್‌ ಸಂಘ:ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಸಂಪನ್ನ

ಪೂಜಾ ವಿಧಿ ವಿಧಾನಗಳಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು

Team Udayavani, Mar 16, 2024, 11:50 AM IST

Desi Swara: ಬಂಟ್ಸ್‌ ಬಹ್ರೈನ್‌ ಸಂಘ:ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಸಂಪನ್ನ

ಬಹ್ರೈನ್‌:ಇಲ್ಲಿನ ಅನಿವಾಸಿ ಬಂಟ ಸಮುದಾಯದ ಒಕ್ಕೂಟವಾದ ಬಂಟ್ಸ್‌ ಬಹ್ರೈನ್‌ ಇತ್ತೀಚೆಗೆ ಇಲ್ಲಿನ ಮನಾಮದಲ್ಲಿರುವ ಕನ್ನಡ ಭವನದ ಸಭಾಂಗಣದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ಆಯೋಜಿಸಿದ್ದು ಸುಮಾರು 800ಕ್ಕೂ ಹೆಚ್ಚು ಭಕ್ತರು ತನ್ಮಯತೆಯಿಂದ ಭಕ್ತಿಪರವಶರಾಗಿ ಪೂಜಾ ವಿಧಿ ವಿಧಾನಗಳಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.

ನಿತಿನ್‌ ಶೆಟ್ಟಿಯವರ ನೇತೃತ್ವದಲ್ಲಿ ಹೊಸ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದ ನಿಟ್ಟಿನಲ್ಲಿ ಸಂಘಟನೆಯ ಪ್ರಥಮ ಕಾರ್ಯಕ್ರಮವಾಗಿ ಈ ಸತ್ಯನಾರಾಯಣ ಪೂಜೆಯನ್ನು ಆಯೋಜಿಸಿದ್ದರು. ಈ ಪೂಜಾ ಕೈಂಕರ್ಯವನ್ನು ನಡೆಸಿಕೊಡಲು ದ್ವೀಪಕ್ಕೆ ವಿಶೇಷವಾಗಿ ನಾಡಿನಿಂದ ಆಗಮಿಸಿದ್ದ ವೈದಿಕರಾದ ವೇ|ಮೂ| ಚಕ್ರಪಾಣಿ ಉಡುಪರು ಪೂಜಾ ವಿಧಿ, ವಿಧಾನಗಳನ್ನು ಸಾಂಗವಾಗಿ ನೆರವೇರಿಸಿಕೊಟ್ಟರು . ಪೂಜೆಯುದ್ದಕ್ಕೂ ಭಜನ ಮಂಡಳಿಯಿಂದ ಭಜನ ಕಾರ್ಯಕ್ರಮವನ್ನು ಏರ್ಪಡಿಸಿದ್ದು ವಾದ್ಯವ್ರಂದದೊಂದಿಗೆ ಸುಶ್ರಾವ್ಯವಾದ ಭಜನೆಗಳು ನೆರೆದ ಭಕ್ತಾದಿಗಳನ್ನು ಭಕ್ತಿಪರವಶರಾಗುವಂತೆ ಮಾಡಿತು.

ಬಂಟ್ಸ್‌ ಬಹ್ರೈನ್‌ನ ಅಧ್ಯಕ್ಷರಾದ ನಿತಿನ್‌ ಶೆಟ್ಟಿ ಹಾಗೂ ಆಡಳಿತ ಮಂಡಳಿಯ ಇತರ ಪಧಾಧಿಕಾರಿಗಳು, ಬಂಟ ಬಾಂಧವರು ಮತ್ತು ಅಹ್ವಾನಿತ ಅತಿಥಿಗಳನ್ನು ಸ್ವಾಗತಿಸಿ ಸರ್ವರ ಪರವಾಗಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಅನಂತರ ಸಂಕಲ್ಪದೊಂದಿಗೆ ಪೂಜಾ ವಿಧಿವಿಧಾನಗಳು ಪ್ರಾರಂಭವಾಯಿತು. ಗಣಪತಿ ಪೂಜೆ, ಕಳಸ ಪೂಜೆ, ನವಗ್ರಹ ಪೂಜೆ, ಸತ್ಯನಾರಾಯಣ ದೇವರ ವೃತ ಕಲ್ಪೋಕ್ತಿ ಪೂಜೆ, ಭಜನೆ ಸಂಕೀರ್ತನೆ, ಸತ್ಯನಾರಾಯಣ ದೇವರ ಕಥೆಯ ಅನಂತರ ಮಹಾಮಂಗಳಾರತಿ ನಡೆಯಿತು. ಬಂಟ್ಸ್‌ ಬಹ್ರೈನ್‌ನ ನೂತನ ಅಧ್ಯಕ್ಷರಾದ ನಿತಿನ್‌ ಶೆಟ್ಟಿ ಅವರು ನೆರೆದ ಭಕ್ತರನ್ನು ಉದ್ದೇಶಿಸಿ ಮಾತನಾಡಿ ಎಲ್ಲರಿಗೂ ಕೃತಜ್ಞತೆಗಳನ್ನು ಅರ್ಪಿಸಿ, ಸಮುದಾಯದ ಸಂಘಟನೆಯನ್ನು ಮುನ್ನಡೆಸಿಕೊಂಡು ಹೋಗಲು ಎಲ್ಲರ ಸಹಕಾರ ಅತ್ಯಗತ್ಯ ಎಂದರು.

ಇದೇ ಸಂದರ್ಭದಲ್ಲಿ ವೈದಿಕರಾದ ಚಕ್ರಪಾಣಿ ಉಡುಪರನ್ನು ಶಾಲು ಹೊದಿಸಿ, ಸ್ಮರಣಿಕೆಯನ್ನಿತ್ತು ಗೌರವಿಸಲಾಯಿತು. ಬಂಟ್ಸ್‌ ಬಹ್ರೈನ್‌ನ ಮಾಜಿ ಅಧ್ಯಕ್ಷರು, ಅಮ್ಮ ಕಲಾವಿದರು ಸಂಘಟನೆಯ ರೂವಾರಿಗಳೂ ಆಗಿದ್ದು ಕಳೆದ ಸುಮಾರು ಎರಡು ದಶಕಗಳಿಂದ ದ್ವೀಪದಲ್ಲಿ ಸಾಂಸ್ಕೃತಿಕ ರಂಗದಲ್ಲಿ ಮುಂಚೂಣಿಯಲ್ಲಿದ್ದ ಮೋಹನ್‌ ದಾಸ್‌ ರೈ ಎರಂಬು ಅವರು ದ್ವೀಪವನ್ನು ಶಾಶ್ವತವಾಗಿ ತೊರೆದು ತಾಯ್ನಾಡಿನಲ್ಲಿ ನೆಲೆಸುವ ನಿಟ್ಟಿನಲ್ಲಿ ಅವರಿಗೆ ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಶುಭ ಹಾರೈಸಲಾಯಿತು.

ಬಂಟ್ಸ್‌ ಬಹ್ರೈನ್‌ನ ಸಾಮೂಹಿಕ ಸತ್ಯನಾರಾಯಣ ಪೂಜೆಗೆ ದ್ವೀಪದ ಎಲ್ಲ ಸಮುದಾಯ ಮತ್ತು ಸಂಘಟನೆಯ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರುಗಳು ಭಾಗವಹಿಸಿದ್ದರು.

ವರದಿ -ಕಮಲಾಕ್ಷ ಅಮೀನ್‌, ವಿಜಯ ಆಚಾರ್ಯ ಉಚ್ಚಿಲ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…..

Desi Swara: ಇಮೋಜಿ… ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.