Desi Swara: ಕೆಂಪೇಗೌಡರ 514ನೇ ಜಯಂತಿ ಆಚರಣೆ ಒಕ್ಕಲಿಗರ ಬಳಗ ಒಮಾನ್‌ ಉದ್ಘಾಟನೆ

ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿತ್ತು.

Team Udayavani, Sep 30, 2023, 10:36 AM IST

Desi Swara: ಕೆಂಪೇಗೌಡರ 514ನೇ ಜಯಂತಿ ಆಚರಣೆ ಒಕ್ಕಲಿಗರ ಬಳಗ ಒಮಾನ್‌ ಉದ್ಘಾಟನೆ

ಮಕ್ಕಳಿಂದ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ

ಒಮಾನ್‌:ಕರ್ನಾಟಕದ ರಾಜಧಾನಿ ಬೆಂಗಳೂರು ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಲು ಕಾರಣ ಬೆಂಗಳೂರನ್ನು ಕಟ್ಟಿದ ನಾಡಪ್ರಭು ಕೆಂಪೇಗೌಡರು. ಇವರ ಸ್ಮರಣಾರ್ಥ ಇದೇ ಮೊದಲ ಬಾರಿಗೆ ಇತ್ತೀಚೆಗೆ ಒಮಾನ್‌ನ ರಾಷ್ಟ್ರ ರಾಜಧಾನಿ ಮಸ್ಕತ್‌ನಲ್ಲಿ ಕೆಂಪೇಗೌಡ ಜಯಂತಿಯನ್ನು ಆಚರಿಸಲಾಯಿತು.

ಒಕ್ಕಲಿಗರ ಬಳಗ ಒಮಾನ್‌ ಉದ್ಘಾಟನೆ

ಒಮಾನ್‌ ರಾಷ್ಟ್ರದಲ್ಲಿ ನೆಲೆಸಿ, ಉದ್ಯೋಗ ಮಾಡುತ್ತಿರುವ ಒಕ್ಕಲಿಗ ಸಮುದಾಯದ ಸಮಾನ ಮನಸ್ಕರೆಲ್ಲರು ಸೇರಿ ರಚಿಸಿಕೊಂಡಿರುವ ಒಕ್ಕಲಿಗರ ಬಳಗ ಒಮಾನ್‌ ಎನ್ನುವ ಸಂಘಟನೆಯನ್ನು ಇದೇ ವೇಳೆ ಉದ್ಘಾಟಿಸಲಾಯಿತು. ಸಂಘದ ವತಿಯಿಂದ ಉದ್ಘಾಟನ ಕಾರ್ಯಕ್ರಮವಾಗಿ ಕೆಂಪೇಗೌಡ ಜಯಂತಿಯನ್ನು ವಿಶೇಷವಾಗಿ ಆಚರಿಸಲಾಯಿತು. ಜತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿತ್ತು.

ದೀಪ ಬೆಳೆಗುವುದರ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಸಂಘಟಕರಾದ ಅನೂಪ್‌ ಕುಮಾರ್‌ ಅವರು ಸ್ವಾಗತ ಭಾಷಣ ಮಾಡಿ, ಸಂಘಟನೆಯ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು. ಕಾರ್ಯಕ್ರಮದ ಮೊದಲಿಗೆ ಕೆಂಪೇಗೌಡರ ಬಗ್ಗೆ ಕಿರು ಚಿತ್ರವನ್ನು ಪ್ರದರ್ಶಿಸಿದ ಅನಂತರ, ಆದಿಚುಂಚನಗಿರಿ ಮಠದ ಬಗೆಗಿನ ಕಿರು ಚಿತ್ರ, ಮಠಾಧಿಪತಿಗಳಾದ ಜಗದ್ಗುರು ಪರಮ ಪೂಜ್ಯ ಶ್ರೀ ನಿರ್ಮಲಾನಂದ ಸ್ವಾಮೀಜಿಗಳಿಂದ ಆಶೀರ್ವಚನ ಮತ್ತು ಒಕ್ಕಲಿಗರ ಬಳಗ ಒಮಾನ್‌ ಕುರಿತಾಗಿ ಹಿತವಚನದ ವೀಡಿಯೋ ಸಂದೇಶ ಜತೆಗೆ, ಕನ್ನಡನಾಡಿನ ಹೆಮ್ಮೆಯ ವಾಗ್ಮಿಗಳಾದ ಪ್ರೊ| ಡಾ| ಕೃಷ್ಣೇಗೌಡರ ವೀಡಿಯೋ ಸಂದೇಶವನ್ನು ಪ್ರದರ್ಶಿಸಲಾಯಿತು.

ಮಕ್ಕಳಿಂದ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ
ಕಾರ್ತಿಕ್‌ ಭಾಸ್ಕರ್‌ ಅವರು ಗಿಟಾರ್‌ ವಾದ್ಯ ಸಂಗೀತ, ವಿಭಾ ರಾಮಚಂದ್ರಪ್ಪ ಅವರು ಸಂಗೀತ, ಸನ್ನಿಧಿ ಕಾರ್ತಿಕ್‌, ಆರ್ನ ಸಂತೋಷ್‌, ಧಕ್ಷ ಗೌರಿ, ಜ್ಞಾನ ಕುಮಾರ್‌, ಮೋಕ್ಷ ಅಶ್ವತ್ಥ್, ಜಾಗೃತಿ ಪ್ರವೀಣ್‌, ಪ್ರತೀಕ್ಷಾ ಅನೂಪ್‌ ಅವರಿಂದ ನೃತ್ಯ ಪ್ರದರ್ಶನ, ಶ್ರಾವ್ಯಾ ಶಶಿಧರ್‌, ಕೀರ್ತಿ ನಾಗರಾಜ್‌ ಅವರು ಏಕಪಾತ್ರ ಅಭಿನಯವನ್ನು ಪ್ರದರ್ಶಿಸಿದರು.

ಒಮಾನಿನ ವಿವಿಧ ಸಾಂಸ್ಕೃತಿಕ ಸಂಘಟನೆಗಳಲ್ಲಿ ಸತತವಾಗಿ ಪ್ರದರ್ಶನ ನೀಡಿರುವ ಮಾಲತಿ ಭಾಸ್ಕರ್‌ ಅವರಿಂದ ಜಾನಪದ ಗೀತೆ, ವಿಶೇಷ ಆಹ್ವಾನಿತರಾದ ಶ್ವೇತಾ ಡೆನ್ನಿ ಮತ್ತು ಕಾರ್ತಿಕ್‌ ಗೌಡರವರು ಹಾಡುಗಳನ್ನ ಹಾಡಿ ಸಭಿಕರನ್ನು ರಂಜಿಸಿದರು. ಜತೆಗೆ ಸದಸ್ಯರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಮಕ್ಕಳಿಗಾಗಿ ಹೂಲಾ ಹೂಪ್‌ ಹಾಗೂ ವಿಭಿನ್ನ ಸ್ಪರ್ಧೆಗಳಿದ್ದವು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಸಾಂಪ್ರದಾಯಿಕ ಉಡುಗೆ
ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರತಿಯೊಬ್ಬರು ಸಾಂಪ್ರದಾಯಿಕ ಉಡುಗೆ ಧರಿಸಿದ್ದಿದ್ದು ವಿಶೇಷವಾಗಿತ್ತು. ಮಹಿಳೆಯರು ಬಣ್ಣಬಣ್ಣದ ರೇಷ್ಮೆ ಸೀರೆಗಳು, ಚಿಕ್ಕ ಹೆಣ್ಣು ಮಕ್ಕಳು ಲಂಗ ದಾವಣಿ ಮತ್ತು ಪುರುಷರು ಅಂಗಿ, ಪಂಚೆ ಮತ್ತು ಶಲ್ಯ ಧರಿಸಿದ್ದರು. ಈ ಸಾಂಪ್ರದಾಯಿಕ ಉಡುಗೆಯಿಂದ ಸಭಾಂಗಣ ಕಳೆಗಟ್ಟಿತ್ತು.ಕಾರ್ತಿಕ್‌ ಗೌಡ ಹಾಗೂ ಕಾವ್ಯ ಅನೂಪ್‌ ಕಾರ್ಯಕ್ರಮ ನಿರ್ವಹಿಸಿದರು. ಗುರುಪ್ರಸಾದ್‌ ವಂದಿಸಿದರು.

*ವರದಿ: ಪಿ.ಎಸ್‌.ರಂಗನಾಥ, ಮಸ್ಕತ್‌

ಟಾಪ್ ನ್ಯೂಸ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.