Desi Swara: ಕರ್ನಾಟಕ ಸಂಘ ಶಾರ್ಜಾ- ಮಯೂರ ವಿಶ್ವ ಮಾನ್ಯ ಕನ್ನಡಿಗ ಪ್ರಶಸ್ತಿ ಪ್ರದಾನ

"ಮಯೂರ ಸ್ಮರಣ ಸಂಚಿಕೆ'ಯನ್ನು ಬಿಡುಗಡೆಗೊಳಿಸಲಾಯಿತು

Team Udayavani, Dec 2, 2023, 1:40 PM IST

Desi Swara: ಕರ್ನಾಟಕ ಸಂಘ ಶಾರ್ಜಾ- ಮಯೂರ ವಿಶ್ವ ಮಾನ್ಯ ಕನ್ನಡಿಗ ಪ್ರಶಸ್ತಿ ಪ್ರದಾನ

ದುಬೈ: ಕರ್ನಾಟಕ ಸಂಘ ಶಾರ್ಜಾದ ಆಶ್ರಯದಲ್ಲಿ ನ.18ರಂದು ಶಾರ್ಜಾ ಈವಾನ್‌ ಹೊಟೇಲ್‌ನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ, 21ನೇ ವಾರ್ಷಿಕೋತ್ಸವ ಮತ್ತು ಮಯೂರ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭ ಅದ್ದೂರಿಯಾಗಿ ನಡೆಯಿತು.

ಕಾರಯಕಾರಿ ಸಮಿತಿಯ ಸರ್ವ ಸದಸ್ಯರು ಕನ್ನಡ ಧ್ವಜಾರೋಹಣ ಮಾಡಿ, ಜ್ಯೋತಿ ಬೆಳಗಿಸಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಯುಎಇಯ ವಿವಿಧ ತಂಡಗಳಾದ ಸಿಂಫೋನಿ ಮ್ಯೂಸಿಕ್‌ ಸ್ಕೂಲ್‌, ಬಿಲ್ಲವಾಸ್‌ ಫ್ಯಾಮಿಲಿ, ರಸ್‌ ಅಲ್‌ ಖೈಮಾ ಕರ್ನಾಟಕ ಸಂಘ, ನೃತ್ಯ ಕಣ್ಮಣಿಗಳು, ರಮಣ ಲಾಸ್ಯ, ಪದ್ಮಶಾಲಿ ಸಮುದಾಯ, ಸ್ಮೈಲ್‌ ಕ್ರಿಯೇಶನ್ಸ್‌, ಗೋಲ್ಡನ್‌ ಸ್ಟಾರ್‌ ಮ್ಯೂಸಿಕ್‌ ಶಾರ್ಜಾ ತಂಡಗಳಿಂದ ಆಕರ್ಷಕ ಜಾನಪದ ನೃತ್ಯ, ಮಂಗಳೂರಿನಿಂದ ಆಗಮಿಸಿದ ಗಾಯಕ ಮಹ್ಮದ್‌ ಇಕ್ಬಾಲ್‌, ಹರೀಶ್‌ ಶೇರಿಗಾರ್‌ ಮತ್ತು ಸನ್ನಿಧಿ ವಿಶ್ವನಾಥ್‌ ಅವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಿತು.

ಸ್ಮರಣ ಸಂಚಿಕೆ ಬಿಡುಗಡೆ
ಶಾರ್ಜಾ ಕರ್ನಾಟಕ ಸಂಘದ ದ್ವೀದಶಮಾನೋತ್ಸವದ ಸವಿ ನೆನೆಪಿಗಾಗಿ ಗಣೇಶ್‌ ರೈ ಪ್ರಧಾನ ಸಂಪಾದಕತ್ವದಲ್ಲಿ, ಸ್ಮರಣ ಸಂಚಿಕೆ ಸಮಿತಿಯ ಆಶ್ರಯದಲ್ಲಿ ಮುದ್ರಣವಾಗಿದ್ದ “ಮಯೂರ ಸ್ಮರಣ ಸಂಚಿಕೆ’ಯನ್ನು ಬಿಡುಗಡೆಗೊಳಿಸಲಾಯಿತು.

ಮಯೂರ ವಿಶ್ವ ಮಾನ್ಯ ಕನ್ನಡಿಗ ಪ್ರಶಸ್ತಿ
ಕರ್ನಾಟಕ ಸಂಘ ಶಾರ್ಜಾದ ಪ್ರತಿಷ್ಠಿತ “ಮಯೂರ ವಿಶ್ವ ಮಾನ್ಯ ಕನ್ನಡಿಗ ಪ್ರಶಸ್ತಿ’ ಯನ್ನು ಸಮಾಜ ಸೇವೆಗಾಗಿ ಮೋಹನ್‌ ನರಸಿಂಹಮೂರ್ತಿ ಅವರಿಗೆ ಪ್ರದಾನ ಮಾಡಲಾಯಿತು.

ಅನಂತರ ಸುಗಂಧರಾಜ್‌ ಬೇಕಲ್‌, ಆರತಿ ಆಡಿಗ, ಜಸ್ಮಿತಾ ವಿವೇಕ್‌ ಅವರಿಗೆ “ವಿಶೇಷ ಗೌರವ ಪುರಸ್ಕಾರ’ದಿಂದ ಸಮ್ಮಾನಿಸಿ ಗೌರವಿಸಲಾಯಿತು. ಕರ್ನಾಟಕ ಸಂಘ ಶಾರ್ಜಾದ ಸಲಹೆಗಾರರಾದ ಪ್ರವೀಣ್‌ ಕುಮಾರ್‌ ಶೆಟ್ಟಿ, ಹರೀಶ್‌ ಶೇರಿಗಾರ್‌, ಜೊಸೇಫ್ ಮಥಾಯಸ್‌, ರಾಮಚಂದ್ರ ಹೆಗ್ಡೆ, ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರು ಸರ್ವೋತ್ತಮ್‌ ಶೆಟ್ಟಿ, ದುಬೈ ಕರ್ನಾಟಕ ಸಂಘದ ಅಧ್ಯಕ್ಷ ಶಶಿಧರ್‌ ನಾಗರಾಜಪ್ಪ, ರಸ್‌ ಅಲ್‌ ಖೈಮಾ ಕರ್ನಾಟಕ ಸಂಘದ ಅಧ್ಯಕ್ಷರು ಸಂತೋಷ್‌ ಹೆಗ್ಡೆ, ಕರ್ನಾಟಕ ಸಂಘ ಶಾರ್ಜಾ ಅಧ್ಯಕ್ಷರು ಸತೀಶ್‌ ಪೂಜಾರಿ, ಉಪಾಧ್ಯಕ್ಷರು ವಿಶ್ವನಾಥ್‌ ಶೆಟ್ಟಿ, ಪೋಷಕರು ಮಾಕರ್‌ ಡೆನಿಸ್‌ ಈ ವೇಳೆ ವೇದಿಕೆಯಲ್ಲಿದ್ದರು. ಗಣೇಶ್‌ ರೈ ಸಭಾ ಕಾರ್ಯಕ್ರಮದ ನಿರೂಪಕರಾಗಿದ್ದರು.

ಮುಖ್ಯ ಅತಿಥಿಗಳಾಗಿದ್ದ ಇಂಡಿಯನ್‌ ಅಸೊಸಿಯೇಶನ್‌ ಶಾರ್ಜಾ ಅಧ್ಯಕ್ಷರಾದ ಅಡ್ವಕೇಟ್‌ ವೈ.ಎ.ರಹಿಂ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಎಲ್ಲ ಪ್ರಾಯೋಜಕರನ್ನು ಈ ವೇಳೆ ಗೌರವಿಸಲಾಯಿತು.

ಅನಿವಾಸಿ ಭಾರತೀಯರಿಗೆ ಆಯೊಜಿಸಲಾದ ರಾಷ್ಟ್ರ ಮಟ್ಟದ ದೇಹದಾಡ್ಯì ಸ್ಪರ್ಧೆಗೆ ಮುಖ್ಯ ತೀರ್ಪುಗಾರರಾಗಿ, ವಿಶೇಷ ಅಹ್ವಾನಿತ ಅತಿಥಿಯಾಗಿ ಮಂಗಳೂರಿನಿಂದ ಮಿಸ್ಟರ್‌ ಇಂಡಿಯಾ ಜಗದೀಶ್‌ ಪೂಜಾರಿಯವರು ಮತ್ತು ವಿನೋದ್‌ ಗೌಡ ರವರನ್ನು ಆಹ್ವಾನಿಸಲಾಗಿತ್ತು. ಜಗದೀಶ್‌ ಪೂಜಾರಿಯವರ ಸಾಧನೆಗೆ ಕರ್ನಾಟಕ ಸಂಘ ಶಾರ್ಜಾ ವತಿಯಿಂದ “ಮಯೂರ ಶ್ರೀ’ ಬಿರುದನ್ನು ನೀಡಿ ಸಮ್ಮಾನಿಸಿ ಗೌರವಿಸಲಾಯಿತು. ವಿನೋದ್‌ ಗೌಡ ಮತ್ತು ಮಹ್ಮದ್‌ ಇಕ್ಬಾಲ್‌ ಅವನ್ನು ಸಮ್ಮಾನಿಸಲಾಯಿತು.

ಯುಎಇ ರಾಷ್ಟ್ರ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯ “ಮಯೂರ ಶ್ರೀ 2023′ ಪ್ರಶಸ್ತಿಯನ್ನು ದೇಹದಾರ್ಢ್ಯ ಪಟು ರವಿಕುಮಾರ್‌ ಪೂಜಾರಿ ಪಡೆದರು, ದ್ವಿತೀಯ ಸುಮಂತ್‌ ಆಚಾರ್ಯ, ತೃತಿಯ ಸುದೀಶ್‌ ವಿಟ್ಲ ಮತ್ತು ಬೆಸ್ಟ್‌ ಪೋಸರ್‌ ರಕ್ಷಿತ್‌ ಕುಮಾರ್‌ ಪಡೆದುಕೊಂಡರು. ಆರತಿ ಆಡಿಗ, ದೀಪಾ ರೈ, ಆರ್‌.ಜೆ. ಎರೋಲ್‌ ಅವರು ಕಾರ್ಯಕ್ರಮ ನಿರೂಪಕರಾಗಿದ್ದರು.

*ವರದಿ: ಬಿ. ಕೆ. ಗಣೇಶ್‌ ರೈ, ದುಬೈ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.