ಮೊಗವೀರ್ಸ್‌ ಬಹ್ರೈನ್‌ ಸಂಘಟನೆ: ದ್ವೀಪದಲ್ಲಿ ಸಂಭ್ರಮದ ಆಹಾರೋತ್ಸವ “ಅಟಿಲ್’


Team Udayavani, Jan 13, 2024, 1:55 PM IST

ಮೊಗವೀರ್ಸ್‌ ಬಹ್ರೈನ್‌ ಸಂಘಟನೆ: ದ್ವೀಪದಲ್ಲಿ ಸಂಭ್ರಮದ ಆಹಾರೋತ್ಸವ “ಅಟಿಲ್’

ಬಹ್ರೈನ್‌ : ಇಲ್ಲಿನ ಅನಿವಾಸಿ ಮೊಗವೀರ ಸಮುದಾಯದ ಸಂಘಟನೆಯಾದ ಮೊಗವೀರ್ಸ್‌ ಬಹ್ರೈನ್‌ ಸಂಘಟನೆಯು “ಅಟಿಲ್‌ ‘ ಎನ್ನುವಂತಹ ವಿಶಿಷ್ಟ ಆಹಾರಗಳ ಮೇಳವನ್ನು ಇಲ್ಲಿನ ಪ್ಯಾಪಿಲಾನ್‌ ರೆಸ್ಟೋರೆಂಟ್‌ನ ಸಭಾಂಗಣದಲ್ಲಿ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಮೊಗವೀರ್ಸ್‌ ಬಹ್ರೈನ್‌ನ ಸದಸ್ಯರೂ ಹಾಗೂ ಆಹ್ವಾನಿತರೂ ಸೇರಿದಂತೆ ನೂರಾರು ಜನರು ಪಾಲ್ಗೊಂಡು ಇಲ್ಲಿ ಅಪರೂಪವೆನಿಸುವ ಮನೆಯಲ್ಲಿಯೇ ತಯಾರಿಸಿದ ರುಚಿಕರವಾದ ಮಾಂಸಾಹಾರಿ, ಸಸ್ಯಾಹಾರಿ ಹಾಗೂ ಸಿಹಿ ತಿನಿಸುಗಳನ್ನು ತಿಂದು ಖುಷಿಪಟ್ಟರು.

ಮೊಗವೀರ್ಸ್‌ ಬಹ್ರೈನ್‌ ಸಂಘಟನೆಯ ಸ್ಥಾಪಕ ಸದಸ್ಯರೂ, ಸಂಘಟನೆಯ ಉಪಾಧ್ಯಕ್ಷರೂ ಆಗಿ ಕಾರ್ಯನಿರ್ವಹಿಸಿ ಜನಾನುರಾಗಿಯಾಗಿ ಅಪಾರ ಮಿತ್ರ ಗೆಳೆಯರ ಬಳಗವನ್ನು ಹೊಂದಿ ಅಕಾಲಿಕ ನಿಧನ ಹೊಂದಿದ್ದ ದಿ| ತೀರ್ಥ ಸುವರ್ಣರವರ ಸ್ಮರಣಾರ್ಥ ಈ ಅಟಿಲ್‌ ಕಾರ್ಯಕ್ರಮವನ್ನು ಮೊಗವೀರ್ಸ್‌ ಬಹ್ರೈನ್‌ ಸಂಘಟನೆಯು ಆಯೋಜಿಸಿತ್ತು.

ಕಾರ್ಯಕ್ರಮದ ಮೊದಲಿಗೆ ಮೊಗವೀರ್ಸ್‌ ಬಹ್ರೈನ್‌ ಉಪಾಧ್ಯಕ್ಷರಾದ ಶಿಲ್ಪಾ ಶಮಿತ್‌ ಕುಂದರ್‌ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು. ಅನಂತರ ದಿ| ತೀರ್ಥ ಸುವರ್ಣ ಅವರ ಸ್ಮರಣಾರ್ಥ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಮಾಡಿ ಮೃತರ ಆತ್ಮಕ್ಕೆ ಚಿರಶಾಂತಿ ಕೋರಲಾಯಿತು. ದಿ| ತೀರ್ಥ ಸುವರ್ಣರವರ ಪತ್ನಿ ಸುರೇಖಾ ಸುವರ್ಣ ಅವರು ರಿಬ್ಬನ್‌ ಕತ್ತರಿಸಿ ಅಟಿಲ್‌ ಆಹಾರೋತ್ಸವವಕ್ಕೆ ಚಾಲನೆ ನೀಡಿದರು.

ಆಹಾರೋತ್ಸವದಲ್ಲಿ ರುಚಿಯಾದ ಸಾಂಪ್ರದಾಯಿಕ, ಗ್ರಾಮೀಣ ಆಹಾರ ಪದಾರ್ಥಗಳು ಹೆಚ್ಚಾಗಿ ಇದ್ದವು. ನೆರೆದವರೆಲ್ಲರಿಗೂ ರುಚಿಯನ್ನು ಸವಿದು ಖುಷಿಪಟ್ಟರು. ಕಾರ್ಯಕ್ರಮದಲ್ಲಿ ಏರ್ಪಡಿಸಿದ್ದ ವಿವಿಧ ರೀತಿಯ ಮನೋರಂಜನಾತ್ಮಕ ಆಟಗಳು ಆಹಾರೋತ್ಸವಕ್ಕೆ ಹೆಚ್ಚಿನ ಆಕರ್ಷಣೆ ನೀಡಿತ್ತು.

ಈ ಕಾರ್ಯಕ್ರಮದಲ್ಲಿ ಸುರೇಖಾ ಸುವರ್ಣ, ಮಂಗಳೂರು ಅಸೋಸಿಯೇಶನ್‌ ಓಫ್ ಸೌದಿ ಅರೇಬಿಯಾದ ಪ್ರಥಮ ಅಧ್ಯಕ್ಷ ಕರುಣಾಕರ ಸಾಲ್ಯಾನ್‌ ದಂಪತಿ, ಮೊಗವೀರ್ಸ್‌ ಬಹ್ರೈನ್‌ನ ಮಾಜಿ ಅಧ್ಯಕ್ಷ ಗಿರೀಶ್‌ ಇಡ್ಯಾ ದಂಪತಿ, ಗೀತಾ ಜಗನ್ನಾಥ್‌ ಸುವರ್ಣ ಕಾಪು ಇವರುಗಳನ್ನು ಮೊಗವೀರ್ಸ್‌ ಬಹ್ರೈನ್‌ ಸಂಘಟನೆಗಾಗಿ ನೀಡಿರುವ ಗಣನೀಯ ಕೊಡುಗೆಗಾಗಿ ಸ್ಮರಣಿಕೆಗಳನ್ನು ನೀಡಿ ಸಮ್ಮಾನಿಸಲಾಯಿತು. ರುಚಿ ಶುಚಿಯಾದ ಆಹಾರವನ್ನು ತಯಾರಿಸಿ ತಂದಿರುವ ಎಲ್ಲ ಅಭ್ಯರ್ಥಿಗಳನ್ನು ಸ್ಮರಣಿಕೆಯನ್ನಿತ್ತು ಗೌರವಿಸಲಾಯಿತು.

ವೇದಿಕೆಯಲ್ಲಿ ಮೊಗವೀರ್ಸ್‌ ಬಹ್ರೈನ್‌ನ ಅಧ್ಯಕ್ಷರಾದ ಸುಧಾಕರ್‌ ಆನಗಳ್ಳಿ, ಉಪಾಧ್ಯಕ್ಷೆ ಶಿಲ್ಪಾ ಶಮಿತ್‌ ಕುಂದರ್‌, ಪ್ರಧಾನ ಕಾರ್ಯದರ್ಶಿ ಸುಮನ್‌ ಸುವರ್ಣ, ಕ್ರೀಡಾ ಕಾರ್ಯದರ್ಶಿ ರಾಜೇಶ್‌ ಮೆಂಡನ್‌, ಖಜಾಂಚಿ ಕೋದಂಡರಾಮ ಸಾಲ್ಯಾನ್‌, ಗೌರವಾಧ್ಯಕ್ಷ ಚಂದ್ರ ಮೆಂಡನ್‌, ಮೊಗವೀರ್ಸ್‌ ಬಹ್ರೈನ್‌ನ ಹಿರಿಯ ಸದಸ್ಯ ರಂಜನ್‌ ಸಾಲ್ಯಾನ್‌, ಮಾಜಿ ಅಧ್ಯಕ್ಷರಾದಂತಹ ಗಿರೀಶ್‌ ಇಡ್ಯಾ, ಕನ್ನಡ ಸಂಘದ ಅಧ್ಯಕ್ಷರಾದ ಅಮರನಾಥ್‌ ರೈ, ಸೌದಿ ಅರೇಬಿಯಾದ ಮಾಸ ಸಂಘಟನೆಯ ಅಧ್ಯಕ್ಷ ಗೋಪಾಲ್‌ ಶೆಟ್ಟಿ , ಮಾಸಸಂಘಟನೆಯ ಸ್ಥಾಪಕ ಸದಸ್ಯರಾದ ರವಿ ಕರ್ಕೇರ, ಪಟ್ಲ ಫೌಂಡೇಶನ್‌ ಬಹ್ರೈನ್‌ ಸೌದಿ ಘಟಕದ ಅಧ್ಯಕ್ಷರಾದ ನರೇಂದ್ರ ಶೆಟ್ಟಿ , ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ರಾಜೇಶ್‌ ಶೆಟ್ಟಿ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುರೇಖಾ ಸುವರ್ಣರವರು ಮಾತನಾಡಿ ತಮ್ಮ ಪತಿಯ ಸ್ಮರಣಾರ್ಥ ಆಯೋಜಿಸಿರುವ ಈ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ಸೂಚಿಸಿ ಕೃತಜ್ಞತೆಗಳನ್ನು ಸಲ್ಲಿಸಿದರು.

ಕನ್ನಡ ಸಂಘದ ಅಧ್ಯಕ್ಷರಾದ ಅಮರನಾಥ್‌ ರೈ, ರವಿ ಕರ್ಕೇರ ಮುಂತಾದವರು ಮಾತನಾಡಿ ದಿ| ತೀರ್ಥ ಸುವರ್ಣರವರ ಕಾರ್ಯವೈಖರಿಯ ಬಗ್ಗೆ ಮಾತನಾಡಿ, ಈ ಕಾರ್ಯಕ್ರಮವು ಅವರಿಗೆ ಅರ್ಪಿಸುತ್ತಿರುವ ಅರ್ಥಪೂರ್ಣವಾದ ಗೌರವವಾಗಿದೆ. ಮೊಗವೀರ್ಸ್‌ ಬಹ್ರೈನ್‌ನ ಸಂಘಟನೆಯ ಈ ಕಾರ್ಯವೈಖರಿ ಅಭಿನಂದನೀಯ ಎಂದರು. ಮೊಗವೀರ್ಸ್‌ ಬಹ್ರೈನ್‌ನ ಪ್ರಧಾನ ಕಾರ್ಯದರ್ಶಿ ಸುಮನ್‌ ಸುವರ್ಣ ಅವರು ಎಲ್ಲರಿಗೂ ಧನ್ಯವಾದ ಅರ್ಪಿಸಿದರೆ ಕಮಲಾಕ್ಷ ಅಮೀನ್‌ ಅಅವರು ಕಾರ್ಯಕ್ರಮವನ್ನು ನಿರೂಪಿಸಿದರು.

*ವರದಿ- ಕಮಲಾಕ್ಷ ಅಮೀನ್‌

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.