Toronto ಕನ್ನಡ ಸಂಘ ಸುವರ್ಣ ವರ್ಷದ ಸಂಭ್ರಮದ ಆಚರಣೆ


Team Udayavani, Aug 12, 2023, 3:34 PM IST

Toronto ಕನ್ನಡ ಸಂಘ ಸುವರ್ಣ ವರ್ಷದ ಸಂಭ್ರಮದ ಆಚರಣೆ

ಇಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರ ಕನ್ನಡ ಸಂಘ ಟೊರಂಟೋದ ಸದಸ್ಯರು ಬರ್ಲಿಂಗ್ಟನ್‌ ನಗರದ ಹಿಡನ್‌ ವ್ಯಾಲಿಯ ಉದ್ಯಾನವನದಲ್ಲಿ ವನ ವಿಹಾರದೊಂದಿಗೆ ಸಂಘದ ಸುವರ್ಣ ವರ್ಷದ ಆಚರಣೆಯನ್ನು ಜು.22ರಂದು ಆಚರಿಸಿದರು. 1973ರಲ್ಲಿ ಇದೇ ತಾರೀಕಿನಂದು ಕನ್ನಡ ಸಂಘ ಟೊರಂಟೋ ತನ್ನ ಮೊಟ್ಟ ಮೊದಲ ವಾರ್ಷಿಕ ಸಭೆಯನ್ನು ಪಿಕ್‌ನಿಕ್‌ನೊಂದಿಗೆ ಏರ್ಪಡಿಸಿತ್ತು. ಇದೇ ಸಂದರ್ಭದಲ್ಲಿ ಸಂಘವು ತನ್ನ ಸಂವಿಧಾನವನ್ನು ಅಳವಡಿಸಿಕೊಂಡಿತು.

ಅಂದು 50-60 ಅದಮ್ಯ ಉತ್ಸಾಹಿ ಕನ್ನಡಿಗರು ಸೇರಿ ಸ್ಥಾಪಿಸಿದ ಕನ್ನಡ ಸಂಘ ಇಂದು 600ಕ್ಕೂ ಹೆಚ್ಚು ಕನ್ನಡ ಕುಟುಂಬಗಳಿಂದ ಕೂಡಿ ಕೆನಡಾದ ಬೇರೆ ಬೇರೆ ಪ್ರಾಂತಗಳ ಕನ್ನಡಿಗರಿಗೂ ಸಹ ಹಿರಿಮನೆಯಂತೆ ಇದೆ. ಈ ದಿನ ವಿಶೇಷವಾಗಿ, ಮೊತ್ತ ಮೊದಲ ಪಿಕ್ನಿಕ್‌ ಆಯೋಜಿಸಿದ ಅನೇಕ ಹಿರಿಯರು ಬಹಳ ಸಂಭ್ರಮದಿಂದ ಭಾಗವಹಿಸಿದ್ದರು. ಅವರಲ್ಲಿ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರು ಎಸ್‌. ರಾಮ್‌ಮೂರ್ತಿ ಮತ್ತು ಅವರ ಪತ್ನಿ ನಿರ್ಮಲಾ ಮೂರ್ತಿಯವರು ಉಪಸ್ಥಿತರಿದ್ದು, ಈ ಐತಿಹಾಸಿಕ ದಿನಕ್ಕೆ ಇನ್ನೂ ಹೆಚ್ಚಿನ ಮೆರುಗು ತಂದರು.

ಪ್ರತೀ ವರ್ಷದ ಆಚರಣೆಯಂತೆ ಈ ಬಾರಿಯೂ ಗಣೇಶನ ಮೂರ್ತಿಯ ಪೂಜೆಯೊಂದಿಗೆ ಆಚರಿಸಲಾಯಿತು. ಸಂಸ್ಥಾಪಕ ಸದಸ್ಯ ರಾಮಮೂರ್ತಿ ಹಾಗೂ ಈ ಸಾಲಿನ ಅಧ್ಯಕ್ಷರಾದ ಬೃಂದಾ ಮರಳೀಧರ ದೀಪ ಬೆಳಗುವ ಮೂಲಕ ಸುವರ್ಣ ವರ್ಷದ ಶುಭಾರಂಭಕ್ಕೆ ಚಾಲನೆ ನೀಡಿದರು. ಹಿರಿಯ ಸದಸ್ಯರಾದ ಶ್ರೀಕಾಂತ್‌ ಇನಾಂದರ್‌ ಅವರು ಅಥರ್ವ ಶೀರ್ಷ ಹಾಗೂ ವಿನಾಯಕ್‌ ಹೆಗಡೆಯವರು ಗಣಪ ಭಜನೆಯನ್ನು ಹಾಡಿದರು.

ಸಂಘದ ಐದು ದಶಕಗಳ ಸಂಭ್ರಮವನ್ನು ಐದು ಕೇಕ್‌ಗಳನ್ನು ಕತ್ತರಿಸಿ ಆಚರಿಸಲಾಯಿತು. ಸಂಘದ ಐದು ವಿಶೇಷ ಗುಂಪುಗಳಾದ ಹಿರಿಯರು, ಹಿಂದಿನ ಕಾರ್ಯಕಾರಿ ಸಮಿತಿಯ ಮಹಿಳಾ ಸದಸ್ಯರು, ಪುರುಷ ಸದಸ್ಯರು, ಮಕ್ಕಳು ಹಾಗೂ 50ನೇ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಸಂಭ್ರಮದಲ್ಲಿ ಭಾಗಿಯಾದರು.

ಇದೇ ವೇಳೆ ಸಂಘದ ಯುವ ಸದಸ್ಯರು ಸುಂದರವಾದ ಕಲಾತ್ಮಕ ಮುಖ ಚಿತ್ತಾರಗಳನ್ನು, ಕನ್ನಡದ ಬಾವುಟ, ಕೆನಡ ಬಾವುಟವನ್ನು ರಚಿಸಿದ್ದರು. ವಿವಿಧ ಆಟೋಟ ಸ್ಪರ್ಧೆಗಳನ್ನು ಈ ವೇಳೆ ಆಯೋಜಿಸಲಾಗಿತ್ತು. ಕೆರೆ-ದಡ, ಕುಂಟಾಬಿಲ್ಲೆ, ನಿಂಬೆ-ಚಮಚ ಹೀಗೆ ಬಾಲ್ಯವನ್ನು ಮರೆಕಳಿಸುವ ಅನೇಕ ಆಟಗಳನ್ನು ಚಿಣ್ಣರಿಂದ-ಅಜ್ಜ-ಅಜ್ಜಿಯವರೆಗೆ ಆಡಿ ಬಹುಮಾನ ಪಡೆದುಕೊಂಡರು. ಇದರೊಂದಿಗೆ ಹೂವಿನ ಚಿತ್ತಾರದ ಡ್ರೆಸ್‌ಕೋಡ್‌ ಸ್ಪರ್ಧೆಯಲ್ಲಿ ಗೆದ್ದವರಿಗೆ ” ಪುಷ್ಪರಾಣಿ-ವನರಾಜ ‘ ಎಂಬ ಬಹುಮಾನ ಕೊಡಲಾಯಿತು.

ವಿಶೇಷವಾಗಿ ಈ ಕಾರ್ಯಕ್ರಮದಲ್ಲಿ ತೊಂಬತ್ತರ ಹರೆಯದ ಸಂಘದ ಮಾಜಿ ಅಧ್ಯಕ್ಷ ಸಿಂಮೂರ್ತಿ ಅವರು ಬಹಳ ಲವಲವಿಕೆಯಿಂದ ಭಾಗವಹಿಸಿ, ಯುವ ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ ಮಾಡಿದರು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲ ಪೋಷಕರಿಗೆ, ಪ್ರಾಯೋಜಕರಿಗೆ, ಸದಸ್ಯರಿಗೆ ಧನ್ಯವಾದಗಳನ್ನು ಸಮರ್ಪಿಸಲಾಯಿತು.

ವರದಿ: ಬೃಂದಾ ಮುರಳೀಧರ್‌

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.