ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರ: ಮೇ 23ಕ್ಕೆ ಬಹಿರಂಗ
Team Udayavani, Apr 20, 2019, 4:16 PM IST
ಚಿತ್ರದುರ್ಗ: ಲೋಕಸಭಾ ಚುನಾವಣೆ ಮತದಾನ
ಪ್ರಕ್ರಿಯೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು,
ಚಿತ್ರದುರ್ಗ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ
ಕ್ಷೇತ್ರಗಳ ಮತಯಂತ್ರಗಳು ಸ್ಟ್ರಾಂಗ್ ರೂಂನಲ್ಲಿ
ಭದ್ರವಾಗಿವೆ. ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಮತಯಂತ್ರಗಳನ್ನು ಭದ್ರವಾಗಿ ಇಡಲಾಗಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್. ವಿನೋತ್ ಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಡಾ| ಕೆ. ಅರುಣ್, ಕೇಂದ್ರ ಚುನಾವಣಾ ವೀಕ್ಷಕರು ಸ್ಥಳ ಪರಿಶೀಲನೆ ಮಾಡಿದರು. ಸರ್ಕಾರಿ
ವಿಜ್ಞಾನ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಿರುವ
11 ಸ್ಟ್ರಾಂಗ್ ರೂಂಗಳು ಮತ್ತು ಪೋಸ್ಟಲ್ ಮತಗಳನ್ನು ಮತ್ತೂಂದು ಸ್ಟ್ರಾಂಗ್ ರೂಂನಲ್ಲಿ ಇಡಲಾಗಿದೆ.
ಪ್ರತಿಯೊಂದು ಸ್ಟ್ರಾಂಗ್ ರೂಂನಲ್ಲೂ ಆಯಾ
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ
ಬರೆಯಲಾಗಿದೆ. ಮೊಳಕಾಲ್ಮೂರು ಕ್ಷೇತ್ರದ 284, ಚಳ್ಳಕೆರೆಯ 259, ಚಿತ್ರದುರ್ಗದ 283, ಹಿರಿಯೂರು 285, ಹೊಸದುರ್ಗ 240, ಹೊಳಲ್ಕೆರೆ 297, ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ 267, ಪಾವಗಡ ಕ್ಷೇತ್ರದ 246 ಮತಗಟ್ಟೆಗಳ ಒಟ್ಟು 2161 ಮತಯಂತ್ರಗಳನ್ನು ಇಟ್ಟಿರುವ ಕೊಠಡಿಗಳಿಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಇದೇ ಕಟ್ಟಡದಲ್ಲಿ ಮತ
ಎಣಿಕೆಗಾಗಿ 8 ಕೊಠಡಿಗಳನ್ನು ವ್ಯವಸ್ಥೆ ಮಾಡಲಾಗಿದೆ.
ಸೊಳ್ಳೆ, ನೊಣಗಳು ಹೋಗದಂತೆ ಕಿಟಕಿ, ಬಾಗಿಲು,
ಶೌಚಾಲಯ, ವೆಂಟಿಲೇಟರ್ ಜಾಗಗಳ
ಇಟ್ಟಿಗೆಯಿಂದ ಮುಚ್ಚಿ ಅದರ ಮೇಲೆ ಪ್ಲೈವುಡ್
ಶೀಟ್ ಹಾಕಿ ಭದ್ರಪಡಿಸಲಾಗಿದೆ.
ತಡವಾಗಿ ಬಂದ ಮತಯಂತ್ರಗಳು: ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರದ ಮತಯಂತ್ರಗಳನ್ನು ಗುರುವಾರ ತಡರಾತ್ರಿ ತರಲಾಗಿತ್ತು. ಆದರೆ ತುಮಕೂರು ಜಿಲ್ಲೆಯ ಪಾವಗಡ ಮತ್ತು ಶಿರಾ ಕ್ಷೇತ್ರದ ಮತಯಂತ್ರಗಳು ಶುಕ್ರವಾರ ಬೆಳಿಗ್ಗೆ ಆಗಮಿಸಿವೆ. ಶುಕ್ರವಾರ ಇಡೀ ದಿನ ಮತಯಂತ್ರಗಳನ್ನು ಸ್ಟ್ರಾಂಗ್ ರೂಂಗೆ ಸ್ಥಳಾಂತರ ಮಾಡುವ ಕೆಲಸ ನಡೆಯಿತು.
ಮತಯಂತ್ರಗಳನ್ನು ಸಿಸಿ ಕ್ಯಾಮೆರಾಗಳ ಕಣ್ಗಾವಲಿನಲ್ಲಿ ರಕ್ಷಣೆ ಮಾಡಲಾಗುತ್ತದೆ. ಒಟ್ಟು 90
ಸಿಸಿ ಕ್ಯಾಮೆರಾಗಳನ್ನು ಕಟ್ಟಡಕ್ಕೆ ಅಳವಡಿಸಲಾಗಿದೆ.
ಸಿಸಿ ಕ್ಯಾಮೆರಾಗಳ ಜೊತೆಗೆ ಪೊಲೀಸ್ ಸರ್ಪಗಾವಲು
ಹಾಕಲಾಗಿದೆ. ಸ್ಟ್ರಾಂಗ್ ರೂಂ ಸುತ್ತ ಮುತ್ತ ಸೇರಿದಂತೆ ಮೂರು ಹಂತದಲ್ಲಿ ಭದ್ರತೆ ಮಾಡಲಾಗಿದೆ. ಸ್ಟ್ರಾಂಗ್ ರೂಂ ಬಳಿ ಸಿಆರ್ಪಿಎಫ್ ಯೋಧರ ಪಡೆ, ಅದರಲ್ಲೂ ಮಹಿಳಾ ಯೋಧರು, ಎರಡನೇ ಹಂತದಲ್ಲಿ ಕೆಆರ್ ಪಿಎಫ್ ಪಡೆ, ಮೂರನೇ ಹಂತದಲ್ಲಿ ಕರ್ನಾಟಕ ಪೊಲೀಸರ
ಪಡೆಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಒಟ್ಟು ನೂರು ಮಂದಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA