ಉಜಳಂಬದಲ್ಲಿಂದು ಸಿಎಂ ಗ್ರಾಮ ವಾಸ

ಸರ್ಕಾರಿ ಶಾಲೆಯಲ್ಲಿ ಹೊಸ ಕೋಣೆ ನಿರ್ಮಾಣ•ಮನೆ-ಮನೆಗೆ ವಿದ್ಯುತ್‌ ಸಂಪರ್ಕ

Team Udayavani, Jun 27, 2019, 10:22 AM IST

27-June-5

ಬಸವಕಲ್ಯಾಣ: ಸಿಎಂ ಎಚ್.ಡಿ ಕುಮಾರಸ್ವಾಮಿ ಅವರ ವಾಸ್ತವ್ಯಕ್ಕೆ ಶಾಲಾ ಕೋಣೆಯಲ್ಲಿ ಹೊಸ ಹಾಸಿಗೆ ವ್ಯವಸ್ಥೆ ಮಾಡಲಾಗಿದೆ.

ವೀರಾರೆಡ್ಡಿ ಆರ್‌.ಎಸ್‌.
ಬಸವಕಲ್ಯಾಣ:
ಸಿಎಂ ಎಚ್.ಡಿ. ಕುಮಾರಸ್ವಾಮಿ ಗುರುವಾರ ಗ್ರಾಮ ವಾಸ್ತವ್ಯ ಮಾಡಲಿರುವ ಗಡಿ ತಾಲೂಕಿನ ಕುಗ್ರಾಮ ಉಜಳಂಬ ಗ್ರಾಮ ಮದುಮಗಳಂತೆ ಸಿಂಗಾರವಾಗಿದೆ. ಪ್ರಥಮ ಬಾರಿಗೆ ಆಗಮಿಸುತ್ತಿರುವ ಸಿಎಂ ಸ್ವಾಗತಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಹಾರಾಷ್ಟ್ರ ಗಡಿಗೆ ಅಂಟಿಕೊಂಡಿರುವ ಮತ್ತು ಕನ್ನಡವೇ ಗೊತ್ತಿಲ್ಲದ ಉಜಳಂಬ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿರುವುದು ವಿಶೇಷವಾಗಿದೆ.

ಗ್ರಾಮ ರಚನೆ ಆದಾಗಿನಿಂದಲು ಉಜಳಂಬ ಅಭಿವೃದ್ಧಿ ಕಂಡಿಲ್ಲ. ಹಲವು ವರ್ಷಗಳಿಂದ ಈಡೇರದ ಗ್ರಾಮಸ್ಥರ ಬೇಡಿಕೆಗಳು ಸಿಎಂ ವಾಸ್ತವ್ಯ ಮೂಲಕ ಕೆಲವು ದಿನದೊಳಗೆ ಅಭಿವೃದ್ಧಿಯಾಗಿರುವುದು ಎಲ್ಲಿಲ್ಲದ ಖುಷಿ ಮೂಡಿಸಿದೆ.

ಸಿಎಂ ವಾಸ್ತವ್ಯ ಮಾಡುವ ಸರ್ಕಾರಿ ಶಾಲೆ ಆವರಣದಲ್ಲಿ ಶಿಥಿಲಾವಸ್ಥೆಯಲ್ಲಿದ್ದ 12 ಕೋಣೆಗಳನ್ನು ನೆಲಸಮ ಮಾಡಿ ಅವಶ್ಯಕತೆಗೆ ತಕ್ಕಂತೆ ಹೊಸ ಕೋಣೆ ನಿರ್ಮಿಸಲಾಗುತ್ತಿದೆ. ಕೆಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ನಿರಂತರ ಜ್ಯೋತಿ ಯೋಜನೆಯಡಿ ಮನೆ-ಮನೆಗೆ ವಿದ್ಯುತ್‌ ಸಂಪರ್ಕ ಕಲ್ಪಿಸುವ ಕಾಮಗಾರಿ ಭರದಿಂದ ನಡೆದಿದೆ ಹಾಗೂ ಕುಡಿಯುವ ನೀರಿನ ಮತ್ತು ಚರಂಡಿ ಸಮಸ್ಯೆ ಸಹ ಬಗೆಹರಿಸಲಾಗಿದೆ. ಗ್ರಾಪಂ, ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳನ್ನು ಅಚ್ಚುಕಟ್ಟಾಗಿ ಸ್ವಚ್ಛಗೊಳಿಸಿ ಬಣ್ಣ ಹಚ್ಚಿ ವಿದ್ಯುತ್‌ ದೀಪಗಳಿಂದ ಅಲಂಕಾರ ಮಾಡಲಾಗಿದೆ.

ಬೃಹತ್‌ ಪೆಂಡಾಲ್ ನಿರ್ಮಾಣ: ಮಳೆ ಬಂದರೂ ಸಾರ್ವಜನಿಕರಿಗೆ ಹಾಗೂ ಕಾರ್ಯಕ್ರಮಕ್ಕೆ ಯಾವುದೇ ತೊಂದರೆಯಾಗದಂತೆ ಬೃಹತ್‌ ಪೆಂಡಾಲ್ ನಿರ್ಮಿಸಲಾಗಿದೆ. ಅಹವಾಲು ಸ್ವೀಕರಿಸುವ ಜತೆಗೆ ಸಭೆ ನಡೆಯಲಿದೆ. ಸುಮಾರು 5 ಸಾವಿರಕ್ಕೂ ಅಧಿಕ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಹಾಗೂ ಅಂಗವಿಕಲರಿಗೆ ಮನವಿ ಸಲ್ಲಿಸಲು ಪ್ರತ್ಯೇಕ 10 ಕೌಂಟರ್‌ ವ್ಯವಸ್ಥೆ ಮಾಡಲಾಗಿದೆ. ಸರ್ಕಾರಿ ಶಾಲೆ ಪ್ರವೇಶದ ಬಾಗಿಲು ಎದುರು ಗಣ್ಯರು, ಅಧಿಕಾರಿಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

ಗ್ರಾಮಸ್ಥರ ಬೇಡಿಕೆ ಘೋಷಣೆ: ಸಹಕಾರ ಸಚಿವ ಬಂಡೆಪ್ಪ ಖಾಶೆಂಪುರ ಸಿಎಂ ಬರುವ ಮುನ್ನವೇ ಗ್ರಾಮೀಣ ಸಂತೆಗಾಗಿ 1 ಕೋಟಿ ರೂ. ಮಂಜೂರು ಮಾಡಿದ್ದಾರೆ ಹಾಗೂ ಸಿಎಂ ಎಚ್‌ಡಿಕೆ ಅವರಿಂದಲೇ ಪಿಕೆಪಿಎಸ್‌ ಉದ್ಘಾಟನೆ ಮಾಡಿಸಲಾಗುವುದು ಎಂದು ಈಗಾಗಲೇ ಭರವಸೆ ನೀಡಿದ್ದಾರೆ.

ಊಟದ ವ್ಯವಸ್ಥೆ: ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಬಂದವರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಮುಖ್ಯ ವೇದಿಕೆ ಪಕ್ಕದಲ್ಲಿ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಅದಕ್ಕಾಗಿಯೇ ಪ್ರತ್ಯೇಕ ಪೆಂಡಾಲ್ ಹಾಕಲಾಗಿದೆ. ಉಜಳಂಬ ಗ್ರಾಮದಲ್ಲಿ 413 ಜನ ರೈತರಿದ್ದಾರೆ. ರೈತರ ಖಾತೆಯಲ್ಲಿ ಈಗಾಗಲೇ 1.36 ಕೋಟಿ ರೂ. ಬೆಳೆ ಸಾಲ ಜಮಾ ಮಾಡಲಾಗಿದೆ. ಉಳಿದ 167 ರೈತರ 55 ಲಕ್ಷ ರೂ. ಸಾಲ ಮನ್ನಾ ಮಾಡುತ್ತಾರೆ ಎಂಬ ನಿರೀಕ್ಷೆಯಲ್ಲಿ ಇದ್ದಾರೆ.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.