ಕೆರೆ ಕಾಮಗಾರಿ ಪ್ರಗತಿಯಲ್ಲಿ: ಅಖೀಲೇಶ್‌

ಬಂಗಾರಮ್ಮನ ಕೆರೆ ಹೂಳು ತೆಗೆಯುವ ಕಾಮಗಾರಿ ಈ ವರ್ಷ ಪೂರ್ಣ

Team Udayavani, Apr 4, 2019, 3:38 PM IST

Udayavani Kannada Newspaper

ಸಾಗರ: ಚಿಪ್ಳಿ ಲಿಂಗದಹಳ್ಳಿಯ ಬಂಗಾರಮ್ಮನ ಕೆರೆಯ ಹೂಳು ತೆಗೆಯುವ ಕಾಮಗಾರಿಯನ್ನು ಈ ಹಂತದಲ್ಲಿ ಸ್ಥಗಿತಗೊಳಿಸುವ ನಿರ್ಧಾರವನ್ನು ಕೈ ಬಿಟ್ಟಿದ್ದೇವೆ. ಈ ವರ್ಷವೇ ಇದರ ಸಂಪೂರ್ಣ ಹೂಳು ತೆಗೆಯುವ ಚಟುವಟಿಕೆ ಪೂರೈಸಲು ಬೇಕಾದ ಪ್ರೋತ್ಸಾಹ ಸಮಾಜದಿಂದ ಲಭ್ಯವಾಗಿದೆ ಎಂದು ಸಾಗರ ತಾಲೂಕು ಜೀವಜಲ ಕಾರ್ಯಪಡೆ ಹಾಗೂ ಸ್ವಾನ್‌ ಆ್ಯಂಡ್‌ ಮ್ಯಾನ್‌ ಸಂಸ್ಥೆಯ ಪ್ರಮುಖ ಅಖೀಲೇಶ್‌ ಚಿಪ್ಳಿ ಘೋಷಿಸಿದರು.

ಮಂಗಳವಾರ ಕಲ್ಮನೆ ಗ್ರಾಪಂ ವ್ಯಾಪ್ತಿಯ ಲಿಂಗದಹಳ್ಳಿಯ ಸುಜಲಶ್ರೀ ಲಕ್ಷ್ಮೀ ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರು ಬಂಗಾರಮ್ಮನ ಕೆರೆ ಹೂಳು ಕಾಮಗಾರಿ ನಿರ್ವಹಣೆಗೆ ನೀಡಿದ 20 ಸಾವಿರ ರೂ.ಗಳ ಚೆಕ್‌ನ್ನು ಕೆರೆ ಆವರಣದಲ್ಲಿ ಸ್ವೀಕರಿಸಿ ಅವರು ಮಾತನಾಡಿದರು.

ಇದುವರೆಗೆ ಕಾಮಗಾರಿಯ ಶೇ. 70ರಷ್ಟು ಮುಕ್ತಾಯವಾಗಿದೆ. ಈ ಹಿಂದಿನ ಅನುಭವಗಳ ಆಧಾರದಲ್ಲಿ ಹಣಕಾಸು ನೆರವು ಸಿಕ್ಕರೆ ಮಾತ್ರ ಕೆಲಸ ಮುಂದುವರಿಸುವ ಮನಃಸ್ಥಿತಿಯನ್ನು ನಾವು ಹೊಂದಿದ್ದೆವು. ಈ ವಿಚಾರಗಳನ್ನು ಸಾಮಾಜಿಕ ಜಾಲತಾಣ ಹಾಗೂ ಪತ್ರಿಕಾ ಮಾಧ್ಯಮಗಳ ಮೂಲಕ ಪ್ರಕಟಿಸಿದ ನಂತರ
ಬಂದಿರುವ ಪ್ರತಿಕ್ರಿಯೆ ಹೊಸ ಧೈರ್ಯ ನೀಡಿದೆ. ಅದರಲ್ಲೂ ಮಹಿಳೆಯರು ತಮ್ಮ ಉಳಿತಾಯದ 20 ಸಾವಿರ ರೂ.ಗಳ ಸಹಾಯ ನೀಡಿರುವಾಗ ನಾವು ಹಿಂಸರಿಯುವ ಮಾತೇ ಇಲ್ಲ ಎಂದರು.

ಹೂಳು ತೆಗೆಯುವ ಕಾಮಗಾರಿಯನ್ನು ಹಂತ ಹಂತವಾಗಿ ತೆಗೆಯುವ ಕಾರ್ಯಕ್ರಮ ಹಾಕಿಕೊಳ್ಳುವುದರಿಂದ ಬಜೆಟ್‌ ಸಾಕಷ್ಟು ಹೆಚ್ಚಾಗುತ್ತದೆ. ಮಾಡಿದ ಕೆಲಸವನ್ನೇ ಮತ್ತೆ ಮತ್ತೆ ಮಾಡಬೇಕಾಗುತ್ತದೆ. ಅದರಲ್ಲೂ ಮಳೆಗಾಲದಲ್ಲಿ ಕೆರೆಯ ನೀರನ್ನು ನಿಲ್ಲಿಸಲು ಸಾಧ್ಯವಾಗುವುದಿಲ್ಲ. ಇದೇ ವೇಳೆ ಹಣಕಾಸು ಹರಿದುಬರದಿದ್ದರೆ ಕೈ ಚೆಲ್ಲುವುದು ಅನಿವಾರ್ಯವಾಗುತ್ತದೆ. ನಮ್ಮ ಸಂಕಷ್ಟಗಳ ಬಗ್ಗೆ ಮಾಧ್ಯಮಗಳು ಬೆಳಕು ಚೆಲ್ಲಿದ ಮೇಲೆ
ಸಹೃದಯರು ಸಕಾರಾತ್ಮಕವಾಗಿ ನಮ್ಮನ್ನು ಬೆಂಬಲಿಸಿದ್ದಾರೆ. ಈ ಹಂತದಲ್ಲಿ ಕಾಮಗಾರಿಯನ್ನು ನಿಲ್ಲಿಸುವುದಿಲ್ಲ ಎಂದು ಪ್ರಕಟಿಸಿದರು.

ಕಲ್ಮನೆ ಗ್ರಾಪಂ ಸದಸ್ಯ ಎಲ್‌.ವಿ. ಅಕ್ಷರ ಮಾತನಾಡಿ, ಸದ್ಯ ನಮ್ಮಲ್ಲಿ ನಾಲ್ಕು ದಿನಗಳ ಕಾಲ ಕಾಮಗಾರಿ ಮುಂದುವರೆಸಲು ಬೇಕಾದ ಹಣಕಾಸು ಸಂಗ್ರಹವಾಗಿದೆ. ಹಲವು ದಾನಿಗಳು ಧನ ಸಹಾಯದ ಬೆಂಬಲ ವ್ಯಕ್ತಪಡಿಸಿದ್ದಾರೆ. ಕಾಮಗಾರಿಯನ್ನು ಒಂದು ಹಂತಕ್ಕೆ ತೆಗೆದುಕೊಂಡು ಹೋಗಲು ಇನ್ನೂ ಒಂದೂವರೆಯಿಂದ ಎರಡು ಲಕ್ಷ ರೂ. ಬೇಕಾಗಬಹುದು. ವೆಚ್ಚದ ಬಗ್ಗೆ ಈ ಹಂತದಲ್ಲಿ
ನಾವು ತಲೆಬಿಸಿ ಮಾಡಿಕೊಳ್ಳುವುದಿಲ್ಲ. ಕಾಮಗಾರಿಯನ್ನು ಪೂರೈಸುತ್ತೇವೆ. ಆಗುವ ವೆಚ್ಚವನ್ನು ದಾನಿಗಳ ಮೂಲಕ ಸರಿದೂಗಿಸುವ ಭರವಸೆ ನಮಗೀಗ ಬಂದಿದೆ ಎಂದರು.

ಸುಜಲಶ್ರೀ ಲಕ್ಷ್ಮೀ ಸ್ವ-ಸಹಾಯ ಸಂಘದ ಅಧ್ಯಕ್ಷೆ ನಳಿನಾ ಪರಮೇಶ್ವರ್‌, ಕಾರ್ಯದರ್ಶಿ ಅಮೃತಾ ವಿನಯ್‌, ಮೇಲ್ವಿಚಾರಕಿ ಗಿರಿಜಾ, ಸದಸ್ಯರಾದ ಸುಜಾತಾ ವರದೇಶ್‌, ನರ್ಮದಾ, ದಿವ್ಯ, ಸರೋಜ, ಶುಭಾ, ಜಯಲಕ್ಷ್ಮೀ, ಕಿರಣ ಸತೀಶ್‌ ಇತರರು ಚೆಕ್‌ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜೀವಜಲ ಕಾರ್ಯಪಡೆಯ ದಿನೇಶ್‌ ಎಲ್‌.ಟಿ., ಎಲ್‌.ವಿ. ಅಶೋಕ್‌, ವ.ಶಂ. ರಾಮಚಂದ್ರ ಭಟ್‌, ಲೋಕೇಶ್‌, ವಿನಯ್‌ ಇದ್ದರು.

ಸಾಗರ: ಚಿಪ್ಳಿ ಲಿಂಗದಹಳ್ಳಿಯ ಬಂಗಾರಮ್ಮನ ಕೆರೆಯ ಹೂಳು ತೆಗೆಯುವ ಕಾಮಗಾರಿಯ ಮುಂದುವರಿಕೆಗಾಗಿ ಲಿಂಗದಹಳ್ಳಿಯ ಸುಜಲಶ್ರೀ ಲಕ್ಷ್ಮೀ ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರು 20 ಸಹಸ್ರ ರೂ.ಗಳ ಚೆಕ್‌ ನೀಡಿದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.