ಜಾಯವಾಡಗಿಯಲ್ಲಿ ಜಾತ್ರಾ ಸಂಭ್ರಮ

ಪವಾಡ ಪುರುಷ ಸೋಮನಾಥೇಶ್ವರ ಶಿವಶರಣ ಶಿವಪ್ಪ ಮುತ್ಯಾ ಜಾತ್ರೋತ್ಸವ

Team Udayavani, Apr 5, 2019, 10:36 AM IST

5-April-2

ಹೂವಿನಹಿಪ್ಪರಗಿ: ಸುಕ್ಷೇತ್ರ ಜಯವಾಡಗಿ ಗ್ರಾಮದ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಹೊರ ನೋಟ.

ಹೂವಿನಹಿಪ್ಪರಗಿ: ಸಮಾಜದಲ್ಲಿದ್ದ ಮೌಡ್ಯದ ಕತ್ತಲನ್ನು ತೊಲಗಿಸಿ ಜಗತ್ತಿಗೆ ಶಾಂತಿ ದಯಪಾಲಿಸುವುದರ ಜತೆಗೆ ಭಕ್ತರಿಗೆ ಸದಾ ಸುಖ, ಸಮೃದ್ಧಿ ಕರಿಣಿಸುತ್ತಾ ಬಂದಿರುವ ಅವತಾರಿ ಪುರುಷರಾದ ಶ್ರೀ ಸೋಮನಾಥೇಶ್ವರ ಹಾಗೂ ಶ್ರೀ ಶಿವಶರಣ ಶಿವಪ್ಪ ಮುತ್ಯಾನವರು ಭಕ್ತರ ಹೃದಯದಲ್ಲಿ ನೆಲೆಸಿದ್ದಾರೆ.

ಬಸವನ ಬಾಗೇವಾಡಿ ತಾಲೂಕಿನ ಮುತ್ಯಾನ ಕಟ್ಟಿ ಎಂದೇ ಪ್ರಸಿದ್ಧಿ ಪಡೆದಿರುವ ಸುಕ್ಷೇತ್ರ ಜಾಯವಾಡಗಿ ಗ್ರಾಮ ಚಿಕ್ಕದಾಗಿದ್ದರೂ ಗುರು-ಶಿಷ್ಯರ ಪ್ರಭಾವದಿಂದ ಪ್ರಸಿದ್ಧಿ ಪಡೆದಿದೆ. ಕೀರ್ತಿ ಚಿಕ್ಕದಾದರೂ ಮೂರ್ತಿ ದೊಡ್ಡದು ಎಂಬ ಮಾತಿನಂತೆ ಜಾಯವಾಡಗಿ ಎಂಬ ಹೆಸರು ಗುರುವಿನ ಪ್ರಭಾವದಿಂದ ತನ್ನದೆಯಾದ ಶಕ್ತಿ ಬೀರಿದೆ. ಪ್ರತಿ ವರ್ಷ ಯುಗಾದಿಯಂದು ಸುತ್ತಲಿನ ಗ್ರಾಮದ ಜನರು ಸೇರಿ ಗುರು-ಶಿಷ್ಯರಾದ ಶ್ರೀ ಸೋಮನಾಥ ಹಾಗೂ ಶ್ರೀ ಶಿವಶರಣ ಶಿವಪ್ಪ ಮುತ್ಯಾನವರ ಜಾತ್ರೆಯನ್ನು ನಡೆಸಿಕೊಂಡು ಬಂದಿದ್ದಾರೆ. ಬೇಡಿದವರಿಗೆ ಬೇಡಿದ್ದನ್ನು ಕರುಣಿಸುವ ಹಾಗೂ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ದೈವ ಇವರು.

ಬಡವರ ಆರೋಗ್ಯದ ಕೇಂದ್ರ: ಆದಿ ಕಾಲದಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಹಲವು ವೈದ್ಯರ ಬಳಿಗೆ ಹೋದರೂ ರೋಗ ವಾಸಿಯಾಗದವರು ಶ್ರೀಕ್ಷೇತ್ರಕ್ಕೆ ಬಂದು ಗುಣಮುಖರಾಗಿದ್ದಾರೆ. ಇಲ್ಲಿ ಶ್ರೀ ಸೋಮನಾಥ ಹಾಗೂ ಶಿವಪ್ಪ ಮುತ್ಯಾ ತಮ್ಮನ್ನು ನಂಬಿ ಬಂದ ಭಕ್ತರಿಗೆ ಅವರ ಜ್ಞಾನದ ಶಕ್ತಿಯಿಂದ ಪ್ರಸಾದ ನೀಡಿ ಕಾಯಿಲೆ ವಾಸಿ ಮಾಡಿ ಬಡವರ ವೈದ್ಯರೆಂದು ಹೆಸರಾದರು.

ಜಾನುವಾರುಗಳ ರೋಗಕ್ಕೂ ಮದ್ದು: ಜಾಯವಾಡಗಿ ಗ್ರಾಮದ ಸುತ್ತಮುತ್ತಲಿನ ಗ್ರಾಮದ ರೈತರು ತಮ್ಮ ಜಾನುವಾರುಗಳಿಗೆ ಕಾಲು, ಬಾಯಿ ಬೆನೆ ಹಾಗೂ ಇತರೆ ರೋಗಗಳು ಬಂದರೆ ಶ್ರೀಕ್ಷೇತ್ರದ ದೇವಾಲಯಕ್ಕೆ ಬಂದು ಮೂರು ಸುತ್ತು ಪ್ರದಕ್ಷಣೆ ಹಾಕಿ, ತುಪ್ಪವನ್ನು ಏರೆದರೆ ಸಾಕು. ಭಕ್ತಿಯಿಂದ ಪ್ರಸಾದ ಹಚ್ಚಿದರೆ ಬಂದಿರುವ ರೋಗ ಕಡಿಮೆಯಾಗುತ್ತದೆ ಪ್ರತೀತಿ ಇಂದಿಗೂ ಇದೆ.

ಭಾವೈಕ್ಯ ತಾಣ: ಗುರು-ಶಿಷ್ಯರ ಸಮ್ಮಿಲನ ಶ್ರೀಕ್ಷೇತ್ರ ಜಾಯವಾಡಗಿಯಲ್ಲಿ ಹಿಂದೂಗಳು ಅಷ್ಟೇ ಅಲ್ಲದೇ ಮುಸ್ಲಿಂ ಬಾಂಧವರು ಬಂದು ಭಕ್ತಿಯಿಂದ ಪೂಜೆ ಸಲ್ಲಿಸುತ್ತಾರೆ. ಮುಸ್ಲಿಂರೂ ಭೇಟಿ ನೀಡಿ ದೇವಾಲಯಕ್ಕೆ ತುಪ್ಪವನ್ನು ಸುರಿದು ತಮ್ಮ ಬೇಡಿಕೆಗಳನ್ನು ಭಗವಂತನಲ್ಲಿ ಬೇಡಿಕೊಳ್ಳುತ್ತಾರೆ. ಅಲ್ಲದೇ ತಮ್ಮ ಮನೆಯಲ್ಲಿ ಯಾರಿಗಾದರೂ ಅನಾರೋಗ್ಯ ಕಾಡುತ್ತಿದ್ದರೆ ದೇವಾಲಯದಿಂದ ತುಪ್ಪವನ್ನು ತೆಗೆದುಕೊಂಡು ಹೋಗಿ ಹಚ್ಚಿದರೆ ಸಾಕು ರೋಗ ಕಡಿಮೆಯಾಗುತ್ತದೆ ಎಂಬ ನಂಬಿಕೆ ಇಂದಿಗೂ ಇದೆ.

ಪಂಚ ಗ್ರಾಮದ ದೇವಸ್ಥಾನ ಕಮಿಟಿ
ಜಾಯವಾಡಗಿ, ಕಾನ್ನಾಳ, ಬ್ಯಾಕೋಡ, ಸೋಲವಾಡಗಿ ಹಾಗೂ ಪಕ್ಕದ ಮುದ್ದೇಬಿಹಾಳ ತಾಲೂಕಿನ ಅಗಸಬಾಳ ಗ್ರಾಮದವರು ದೇವಸ್ಥಾನದ ಕಮಿಟಿಯಲ್ಲಿದ್ದಾರೆ. ಎಲ್ಲರೂ ಒಗ್ಗಟ್ಟಿನಿಂದ ದೇವಸ್ಥಾನದ ಏಳ್ಗೆಗೆ ಶ್ರಮಿಸುತ್ತಿದ್ದಾರೆ. ದೇವಸ್ಥಾನಕ್ಕೆ ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಸೇರಿದಂತೆ ಮಹಾರಾಷ್ಟ್ರದ ಭಕ್ತರು ಜಾತ್ರೆಗೆ ಆಗಮಿಸುತ್ತಾರೆ.

ಜಾತ್ರೆಯಲ್ಲಿಂದು
ಏ.5ರಂದು ಯುಗಾದಿ ಅಮಾವಾಸ್ಯೆ ದಿನ ಕಾನ್ನಾಳ ಗ್ರಾಮದ ಸದ್ಭಕ್ತರಿಂದ ಕಳಸದ ಆಗಮನ. ಜಾಯವಾಡಗಿ ಗ್ರಾಮಸ್ಥರಿಂದ ನಂದಿಕೋಲ ಮೆರವಣಿಗೆಯೊಂದಿಗೆ ಮಧ್ಯಾಹ್ನ 12ಗಂಟೆಗೆ ಕಳಸವು ಶಿಖರಕ್ಕೆರುವುದು. ನಂತರ ಅನ್ನಸಂತರ್ಪಣೆ, ರಾತ್ರಿ 10:30ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಎಂಬ ಸಾಮಾಜಿಕ ನಾಟಕ ಪ್ರದರ್ಶನ ನಡೆಯಲಿದೆ.

ಟಾಪ್ ನ್ಯೂಸ್

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

18

Benjana Padavu: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.