ಜೈವಿಕ ಇಂಧನ ಪರಿಸರ ಸ್ನೇಹಿ

ಗ್ರಾಪಂ ಮಟ್ಟದಲ್ಲಿಯೂ ಜಾಗೃತಿ ಕಾರ್ಯಕ್ರಮ ಏರ್ಪಡಿಸಲು ಸೂಚನೆ

Team Udayavani, Aug 22, 2019, 10:24 AM IST

22-Agust-5

ಬೀದರ: ವಿಶ್ವ ಜೈವಿಕ ಇಂಧನ ದಿನಾಚರಣೆ ಕಾರ್ಯಕ್ರಮನ್ನು ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ ಉದ್ಘಾಟಿಸಿದರು.

ಬೀದರ: ಜೈವಿಕ ಇಂಧನ ಪರಿಸರ ಸ್ನೇಹಿಯಾಗಿದೆ. ನವೀಕರಿಸಬಹುದಾದ ಇಂಧನ ಮತ್ತು ಬಳಕೆಯಲ್ಲಿರುವ ಸಾಂಪ್ರದಾಯಿಕ ಇಂಧನಕ್ಕೆ ಪರ್ಯಾಯವಾಗಿದೆ. ರೈತರು ಜೈವಿಕ ಇಂಧನಕ್ಕೆ ಅನುಕೂಲವಾಗುವ ಕೃಷಿಯತ್ತ ಒಲವು ತೋರಿಸಬೇಕು ಎಂದು ಜಿಪಂ ಅಧ್ಯಕ್ಷೆ ಗೀತಾ ಪಂಡಿರತಾವ್‌ ಚಿದ್ರಿ ಹೇಳಿದರು.

ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಜಿಪಂ, ಸಾಮಾಜಿಕ ಅರಣ್ಯ ವಿಭಾಗ ಮತ್ತು ಬೀದರ ಕೃಷಿ ವಿಜ್ಞಾನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಬುಧವಾರ ವಿಶ್ವ ಜೈವಿಕ ಇಂಧನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜೈವಿಕ ಇಂಧನ ನೀಡುವ ಪ್ರಭೇದಗಳಾದ ಬೇವು, ಹೊಂಗೆ, ಹಿಪ್ಪೆ, ಸೀಮಾರೂಬಾ, ಕಾಡು ಔಡಲ ಸಸಿಗಳನ್ನು ರೈತರು ತಮ್ಮ ಜಮೀನುಗಳ ಬದುಗಳ ಮೇಲೆ, ಮಿಶ್ರಬೆಳೆಯಾಗಿ ಹೆಚ್ಚೆಚ್ಚು ಸಂಖ್ಯೆಯಲ್ಲಿ ನೆಟ್ಟು ಬೆಳೆಸಿ ಬೀಜಗಳನ್ನು ಮಾರಾಟ ಮಾಡುವ ಮೂಲಕ ಹೆಚ್ಚುವರಿ ಆದಾಯ ಪಡೆಯಬಹುದು. ಈ ಪ್ರಭೇದಗಳ ಬೀಜದಿಂದ ಜೈವಿಕ ಇಂಧನ ತಯಾರಿಸಲಾಗುತ್ತ್ತದೆ. ಹೆಚ್ಚು ಜೈವಿಕ ಇಂಧನ ಬಳಸುವುದರಿಂದ ದೇಶದ ಆರ್ಥಿಕ ಪ್ರಗತಿ ಮತ್ತು ಸುಸ್ಥಿರ ಅಭಿವೃದ್ಧಿಗೆ ಬಹಳಷ್ಟು ಸಹಕಾರಿಯಾಗುತ್ತದೆ. ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಗ್ರಾಪಂ ಮಟ್ಟದಲ್ಲಿಯೂ ಏರ್ಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಂ. ಗಾಮನಗಟ್ಟಿ ಮಾತನಾಡಿ, ಜೈವಿಕ ಇಂಧನ ದಿನಾಚರಣೆ ಮಹತ್ವ, ಉದ್ದೇಶಗಳ ಕುರಿತು ವಿವರಣೆ ನೀಡಿದರು. ಅರಣ್ಯ ಇಲಾಖೆ ಬೆಳೆಸಿರುವ ಹೊಂಗೆ, ಹಿಪ್ಪೆ, ಸೀಮಾರೂಬಾ ಝಟ್ರೂಫಾ ನೆಡುತೋಪುಗಳು ಮತ್ತು ಸಸ್ಯಕ್ಷೇತ್ರ ಚಟುವಟಿಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.

ಬರಡುಭೂಮಿಯಲ್ಲಿ ಜೈವಿಕ ಇಂಧನ ಗಿಡಗಳನ್ನು ಬೆಳೆಸುವ ಬರಡು ಬಂಗಾರ ಮತ್ತು ರೈತರು ತಮ್ಮ ಕೃಷಿ ಜಮೀನುಗಳಲ್ಲಿ ಜೈವಿಕ ಇಂಧನ ಗಿಡಗಳನ್ನು ಬೆಳೆಸುವ ಹಸಿರು ಹೂನ್ನು ಕಾರ್ಯಕ್ರಮಗಳನ್ನು ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಮೂಲಕ ಜಾರಿಗೂಳಿಸಲಾಗುತ್ತಿದೆ. ರೈತರು ಇದರ ಸದುಪಯೋಗ ಪಡೆಯಬೇಕು ಎಂದು ಕೋರಿದರು.

ಬೀದರ ಕೃಷಿ-ವಿಜ್ಞಾನ ಕೇಂದ್ರದ ವೈಜ್ಞಾನಿಕ ಸಹಾಯಕ ರೋಹಿತ ಬಿರಾದಾರ ಮಾತನಾಡಿದರು. ಜಿಪಂ ಉಪ ಕಾರ್ಯದರ್ಶಿ ಎಸ್‌. ಸೂರ್ಯಕಾಂತ, ಜಿಪಂ ಯೋಜನಾ ನಿರ್ದೇಶಕ ವಿಜಯಕುಮಾರ ಮಡ್ಡೆ, ಸಹಾಯಕ ಯೋಜನಾಧಿಕಾರಿ ಬಸವರಾಜ ಬಬಚೇಡಿ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ರವಿ ದೇಶಮುಖ, ಮಕರಂದ ಕುಲಕರ್ಣಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿ.ಡಿ. ರಾಜೇಂದ್ರ, ಸಾಮಾಜಿಕ ಅರಣ್ಯ ವಿಭಾಗದ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.