ದಾವಣಗೆರೆ ಕ್ಷೇತ್ರದಿಂದ ಎಸ್ಸೆಸ್‌-ಎಸ್ಸೆಸ್ಸೆಎಂ ಸ್ಪರ್ಧಿಸಲಿ: ಶಿವಶಂಕರ್‌


Team Udayavani, Apr 3, 2019, 5:04 PM IST

3-April-23

ದಾವಣಗೆರೆ: ಹರಿಹರ ಕ್ಷೇತ್ರದ ಮಾಜಿ ಶಾಸಕ ಎಚ್‌.ಎಸ್‌. ಶಿವಶಂಕರ್‌, ಜೆಡಿಎಸ್‌ ಮುಖಂಡರ ಸುದ್ದಿಗೋಷ್ಠಿ.

ದಾವಣಗೆರೆ: ದಾವಣಗಬೆರೆ ಲೋಕಸಭಾ ಕ್ಷೇತ್ರದಿಂದ ಶಾಸಕ ಶಾಮನೂರು ಶಿವಶಂಕರಪ್ಪ ಇಲ್ಲವೇ ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರೇ ಸ್ಪರ್ಧಿಸಬೇಕು ಹರಿಹರ ಕ್ಷೇತ್ರದ ಮಾಜಿ ಶಾಸಕ ಎಚ್‌. ಎಸ್‌. ಶಿವಶಂಕರ್‌ ಒತ್ತಾಯಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆಯಲ್ಲಿ ಕಾಂಗ್ರೆಸ್‌ಗೆ ಗೆಲ್ಲುವ ಅವಕಾಶ ಇದೆ. ಮಲ್ಲಿಕಾರ್ಜನ್‌ ಮೂರು ಬಾರಿ ಸೋತಿರುವ ಬಗ್ಗೆ ಅನುಕಂಪ ಇದೆ. ಜಿ.ಎಂ. ಸಿದ್ದೇಶ್ವರ್‌ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ. ಆದರೂ, ಮಲ್ಲಿಕಾರ್ಜುನ್‌ ಸ್ಪರ್ಧಿಸಲು ಅದೂ ನಾಮಪತ್ರ
ಸಲ್ಲಿಸಲು 48 ಗಂಟೆ ಇರುವಾಗ ಹಿಂದೇಟು ಹಾಕುತ್ತಿರುವುದು ವಿಪರ್ಯಾಸ ಎಂದರು.

ಶಾಮನೂರು ಶಿವಶಂಕರಪ್ಪ, ಎಸ್‌.ಎಸ್‌. ಮಲ್ಲಿಕಾರ್ಜುನ್‌ ನಿಲ್ಲದೇ ಹೋದರೆ ಜಿಲ್ಲೆಯಲ್ಲಿ ಕಾಂಗ್ರೆಸ್‌ ಅವಸಾನ ಹೊಂದಲಿದೆ. ಬೇರೆ ಯಾರೇ ನಿಂತರೂ ಚುನಾವಣೆ ನಡೆಯೋದಿಲ್ಲ ಅಂದರೆ
ಕಾಟಾಚಾರಕ್ಕೆ ನಿಲ್ಲಬೇಕಾಗುತ್ತದೆ. ಈಗಲೂ ಕಾಲಾವಕಾಶ ಇದೆ. ಕಾಂಗ್ರೆಸ್‌ ರಾಜ್ಯ ಅಧ್ಯಕ್ಷ ದಿನೇಶ್‌ ಕೆ. ಗುಂಡುರಾವ್‌ ಹಾಗೂ ಮುಖಂಡರು ಅವರಿಬ್ಬರ ಬೇಡಿಕೆ ಈಡೇರಿಸಿ, ಮನ ಸಂತೋಷ ಪಡಿಸಿ, ಯಾರಾದರೂ ಒಬ್ಬರನ್ನ ಚುನಾವಣೆಯಲ್ಲಿ ಸ್ಪರ್ಧಿಸಲು ಮನವೊಲಿಸಬೇಕು ಎಂದು ಆಗ್ರಹಿಸಿದರು.

ಚುನಾವಣೆ ಘೋಷಣೆ ಆಗುವ ಮುನ್ನ ಬೇರೆ ಕಡೆಯಿಂದ ಬಂದವರು ಬಿಜೆಪಿಯಿಂದ ಸಂಸದರಾಗುತ್ತಾರೆ. ಜಿಲ್ಲೆಯಲ್ಲಿ ಯಾರೂ ಗಂಡಸರು ಇಲ್ಲವೇ ಎಂದು ಪ್ರಶ್ನಿಸಿದ್ದಂತಹ ಮಲ್ಲಿಕಾರ್ಜುನ್‌ ಅವರೇ ಈಗ ನಾಮಪತ್ರ ಸಲ್ಲಿಕೆಗೆ ಕೆಲವೇ ದಿನಗಳು ಇರುವಾಗ ಹಿಂದೇಟು ಹಾಕುವುದು ಯಾವ ಕಾರಣಕ್ಕೆ ಎಂಬುದೇ ಅರ್ಥವಾಗುತ್ತಿಲ್ಲ. ಅವರೇ ನಿಲ್ಲದೇ ಹೋದರೆ ಜನರು ಬೇರೆ ರೀತಿಯ ಪ್ರಶ್ನೆ ಕೇಳುವಂತಾಗುತ್ತದೆ ಎಂದರು.

ಚುನಾವಣೆ ಎಂದರೆ ಸೋಲು-ಗೆಲುವು ಇದ್ದದ್ದೇ. ಸೋಲುತ್ತೇನೆ ಎಂದು ಹಿಂದೆ ಸರಿಯುವುದು ರಾಜಕಾರಣಿಯ ಲಕ್ಷಣ ಅಲ್ಲ. ಸೋಲಲಿ ಗೆಲ್ಲಲಿ ಅಖಾಡಕ್ಕೆ ಇಳಿಯಬೇಕು. ಅಖಾಡಕ್ಕೆ ಇಳಿಯದೇ
ಹೋದರೆ ಸರಿ ಆಗುವುದಿಲ್ಲ. ಚುನಾವಣೆಗೆ ಸ್ಪರ್ಧಿಸಿದರೆ ಐಟಿ ದಾಳಿ ಆಗುತ್ತದೆ ಎಂಬ ಹೆದರಿಕೆ ಏನಾದರೂ ಮಲ್ಲಿಕಾರ್ಜುನ್‌ಗೆ ಇದೆಯೇ ಎಂಬ ಅನುಮಾನ ಬರುತ್ತದೆ. ಐಟಿ ದಾಳಿ ಏನಿದ್ದರೂ ಮೈಸೂರು, ಮಂಡ್ಯಕ್ಕೆ ಮಾತ್ರ.ಈ ಕಡೆ ಬರುವುದೇ ಇಲ್ಲ. ಹಾಗಾಗಿ ಮಲ್ಲಿಕಾರ್ಜುನ್‌ ಐಟಿ ದಾಳಿಗೆ ಹೆದರುವ ಅಗತ್ಯವೇ ಇಲ್ಲ. ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಒಬ್ಬ ಆತ್ಮೀಯ ಮಿತ್ರನಾಗಿ ಕೇಳಿಕೊಳ್ಳುತ್ತೇನೆ ಎಂದು ಹೇಳಿದರು.

ಎಸ್‌.ಎಸ್‌. ಮಲ್ಲಿಕಾರ್ಜುನ್‌ ಜಿಲ್ಲಾ ಉಸ್ತುವಾರಿ ಸಚಿವರಾಗಿದ ಸಂದರ್ಭದಲ್ಲಿ ಹರಿಹರ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ಸಾಕಷ್ಟು ತೊಂದರೆ ಮಾಡಿದ್ದಾರೆ. ಆದರೂ, ನಾನು ವಿಶಾಲ ಭಾವನೆಯಿಂದ ಆ ಎಲ್ಲವನ್ನೂ ಮರೆತು ಚುನಾವಣೆಗೆ ನಿಲ್ಲುವಂತೆ ಒತ್ತಾಯ ಮಾಡುತ್ತಿದ್ದೇನೆ. ಮಲ್ಲಿಕಾರ್ಜುನ್‌ ಬಗ್ಗೆ ನನಗೆ ಯಾವುದೇ ವೈಯಕ್ತಿಕ ದ್ವೇಷ ಇಲ್ಲ. ಅವರು ಚುನಾವಣೆಗೆ ನಿಂತರೆ ಗೆಲ್ಲುವ ಅವಕಾಶ ಇದೆ ಎಂದು ಹೇಳಿದರು.

ಚುನಾವಣೆಯಲ್ಲಿ ಗೂಳಿಗೆ ಗೂಳಿಯೇ ಎದುರಾಗಿ ನಿಲ್ಲಬೇಕು. ಅದನ್ನು ಬಿಟ್ಟು ಗೂಳಿ ಮುಂದೆ ಆಡು, ಕುರಿ ನಿಲ್ಲಿಸಿದರೆ ಗೂಳಿಯನ್ನೇ ನೋಡಿಯೇ ಹೆದರಿ ಓಡಿ ಹೋಗುತ್ತದೆ. ಹಾಗಾಗಿ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಇಲ್ಲವೇ ಶಾಮನೂರು ಶಿವಶಂಕರಪ್ಪ ಅವರೇ ನಿಲ್ಲಬೇಕು. ಬೇರೆ ಯಾರೇ ನಿಂತರೂ ಮೈತ್ರಿ ಧರ್ಮ ಪಾಲನೆ ಮಾಡುತ್ತೇವೆ. ಅಚಾತುರ್ಯ, ಮೋಸ ಮಾಡುವುದೇ ಇಲ್ಲ. ಗೆಲ್ಲಿಸುವ ನಿಟ್ಟಿನಲ್ಲಿ ಶ್ರಮಿಸುತ್ತೇವೆ ಎಂದು ತಿಳಿಸಿದರು.

ದಾವಣಗೆರೆ ದಕ್ಷಿಣ ಕ್ಷೇತ್ರದ ಜೆಡಿಎಸ್‌ ಅಧ್ಯಕ್ಷ ಜೆ. ಅಮಾನುಲ್ಲಾಖಾನ್‌ ಮಾತನಾಡಿ, ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ದಲಿತರ ಎಲ್ಲರ ಬೆಂಬಲ ಇದೆ. ಈ ಬಾರಿ ಮಲ್ಲಿಕಾರ್ಜುನ್‌ ಗೆಲುವು ಖಚಿತ. ಆದರೂ, ಅವರು ಕೊನೆ ಕ್ಷಣದಲ್ಲಿ ಸ್ಪರ್ಧೆಗೆ ಹಿಂದೇಟು ಹಾಕುತ್ತಿರುವುದ ನೋಡಿದರೆ ಒಳ ಒಪ್ಪಂದ ಏನಾದರೂ ಆಗಿದೇಯಾ ಎಂಬ ಅನುಮಾನ ಜನರಲ್ಲಿ ಬರುತ್ತದೆ ಎಂದರು. ಜೆಡಿಎಸ್‌ ಜಿಲ್ಲಾ ಅಧ್ಯಕ್ಷ ಬಿ. ಚಿದಾನಂದಪ್ಪ, ದಾವಣಗೆರೆ ಕಡತಿ ಅಂಜಿನಪ್ಪ, ಎಸ್‌. ಓಂಕಾರಪ್ಪ, ಶೀಲಾಕುಮಾರಿ, ದೇವೇಂದ್ರಪ್ಪ, ಗುರುಸಿದ್ದಪ್ಪ, ಕೆ. ಚಂದ್ರಪ್ಪ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.