ಪ್ರತಿಸ್ಪರ್ಧಿ ನೋಡಿ ಮೈಮರೆಯಬೇಡಿ


Team Udayavani, Apr 5, 2019, 12:35 PM IST

Udayavani Kannada Newspaper

ದಾವಣಗೆರೆ: ಪ್ರತಿಸ್ಪರ್ಧಿ ನೋಡಿ ಚುನಾವಣೆಯಲ್ಲಿ ಗೆದ್ದಿದ್ದೇವೆಂದು ಮೈ ಮರೆಯಬೇಡಿ. ಶತ್ರುವನ್ನು ಪೂರ್ಣ ಮಣಿಸಿದ ನಂತರವೇ ಯುದ್ಧದಲ್ಲಿ ಗೆದ್ದಂತೆ ಎಂದು ಬಿಜೆಪಿ ಕಾರ್ಯಕರ್ತರಿಗೆ ಆ ಪಕ್ಷದ ಜಿಲ್ಲಾ ಉಸ್ತುವಾರಿ ಆಯನೂರು ಮಂಜುನಾಥ್‌ ಎಚ್ಚರಿಸಿದ್ದಾರೆ.

ಗುರುವಾರ, ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ ನಂತರ ನಡೆದ ಮೆರವಣಿಗೆ ವೇಳೆ ನಗರದ ರಾಮ್‌ ಆ್ಯಂಡ್‌ ಕೋ ಸರ್ಕಲ್‌ನಲ್ಲಿ ಕಾರ್ಯಕರ್ತನ್ನುದ್ದೇಶಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಎದುರಾಳಿ ನೋಡಿ ನಾವು ಗೆದ್ದಂತೆ ಎಂಬುದಾಗಿ ಭಾವಿಸಬಾರದು. ಮೈಮರೆತರೆ ಬೆನ್ನಿಗೆ ಬಾಣ ಬಿಡುವ ಸಾಧ್ಯತೆ ಇದೆ. ಆದ್ದರಿಂದ ಶತ್ರುವನ್ನು ಸಂಪೂರ್ಣ ಮಣಿಸಿದ ಮೇಲೆ ನಾವು ಜಯ ಸಾಧಿಸಿದಂತೆ ಎಂದು ಕಿವಿಮಾತು ಹೇಳಿದರು.

ಈ ಚುನಾವಣೆ ಯಾವುದೇ ವ್ಯಕ್ತಿಗಾಗಲ್ಲ, ದೇಶಕ್ಕಾಗಿ. 70 ವರ್ಷದಲ್ಲಿ ಭಾರತ ಎಷ್ಟು ಬಲಿಷ್ಠ ಎಂಬುದನ್ನು ಸಾಬೀತು ಮಾಡುವ ಚುನಾವಣೆ. ಸೊಕ್ಕಿನ ಮಾತಾಡುವ ನೆರೆ ರಾಷ್ಟ್ರ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ ನರೇಂದ್ರ ಮೋದಿಯವರನ್ನು ಮತ್ತೂಮ್ಮೆ ಪ್ರಧಾನಿ ಮಾಡುವ ಮಹತ್ವದ ಚುನಾವಣೆ ಎಂದು ವಿಶ್ಲೇಷಿಸಿದರು.

10 ವರ್ಷಗಳ ಕಾಲ ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದಾಗ ಪಾಕಿಸ್ತಾನ ಕ್ಯಾತೆ ತೆಗೆಯುತ್ತಿತ್ತು. ಅವರು ಎಂದೂ ಹೊಡೆಯಲು ಮುಂದಾಗಲಿಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ
ಹೊಡೆಯುವುದೇಗೆ ಎಂಬುದನ್ನು ತೋರಿಸಿಕೊಟ್ಟ ಗಂಡೆದೆಯವರು. ಈಗ ಆ ದೇಶ ಉಸಿರೆತ್ತುವುದು ಕಷ್ಟ. ಭಾರತಕ್ಕೆ ಘನತೆ, ಗೌರವ ತಂದು ಕೊಟ್ಟು ಇಡೀ ವಿಶ್ವವೇ ಮೆಚ್ಚುವಂತೆ ಮಾಡಿದ ಮಾಡಿದ ನರೇಂದ್ರ ಮೋದಿಯವರು ಮತ್ತೂಮ್ಮೆ ಪ್ರಧಾನಿಯಾಗಲು ಈ ಕ್ಷೇತ್ರದಲ್ಲಿ ಜಿ.ಎಂ.ಸಿದ್ದೇಶ್ವರ್‌ ಗೆಲ್ಲಲೇಬೇಕು. ಅದಕ್ಕಾಗಿ ಕಾರ್ಯಕರ್ತರು ಹೆಚ್ಚು ಶ್ರಮಿಸಬೇಕು ಎಂದು ಮನವಿ
ಮಾಡಿದರು.

ಏರ್‌ಸ್ಟ್ರೆಕ್‌ ಬಗ್ಗೆ ಇಡೀ ಭಾರತವೇ ಮೋದಿಯವರಿಗೆ ಜೈಕಾರ ಹಾಕುತ್ತಿದ್ದರೆ, ಕಾಂಗ್ರೆಸ್‌ನವರು ಆ ದಾಳಿಯ ಸಾಕ್ಷ್ಯ ಕೇಳುತ್ತಿದ್ದಾರೆ. ನಮ್ಮ ಸೈನಿಕರು ಹೋಗಿದ್ದು ಹನಿಮೂನ್‌ಗಲ್ಲ, ಗಡಿ ದಾಟಿ ಶತ್ರಗಳ ನಾಶಕ್ಕೆ ಎಂಬುದು ಕೂಡ ಕಾಂಗ್ರೆಸ್ಸಿಗರಿಗೆ ಅರ್ಥವಾಗುತ್ತಿಲ್ಲ ಎಂದು ವಾಗ್ಧಾಳಿ ನಡೆಸಿದ ಆಯನೂರು, ಇಂತಹ ಮನಸ್ಥಿತಿಯ ಕಾಂಗ್ರೆಸ್‌ನವರು ದೇಶದ್ರೋಹದ ಚಿಂತನೆಯವರು. ಕಾಂಗ್ರೆಸ್‌ ಗುಲಾಮಗಿರಿಯ ಸಂತಾನ. ಆದರೆ, ಬಿಜೆಪಿಯಲ್ಲಿ ಚಾಯ್‌ ಮಾರುವ ಹುಡುಗ ಕೂಡ ಪ್ರಧಾನಿಯಾಗಬಲ್ಲ ಎಂಬುದು ಸಾಬೀತಾಗಿದೆ. ಬಗ್ಗುವ ಪ್ರಪಂಚವನ್ನು ಬಗ್ಗಿಸುವ ನಾಯಕ ಬೇಕಾಗಿದೆ. ಹಾಗಾಗಿ ದೇಶದ ಸ್ವಾಭಿಮಾನ, ಘನತೆ, ದೇಶಭಕ್ತಿ ಎತ್ತಿಹಿಡಿದ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಬೇಕಿದೆ. ಅದಕ್ಕಾಗಿ ರಾಜ್ಯದಲ್ಲಿ ಈ ಚುನಾವಣೆಯಲ್ಲಿ 22ಕ್ಕೂ ಹೆಚ್ಚು ಅಧಿಕ ಸ್ಥಾನಗಳನ್ನು ಬಿಜೆಪಿ ಗೆಲ್ಲಬೇಕಿದೆ ಎಂದರು.

ನರೇಂದ್ರ ಮೋದಿಗಾಗಿ ತ್ಯಾಗ: ರಾಜಕೀಯ ಪಕ್ಷಗಳಲ್ಲಿ ಎಲ್ಲರೂ ಕೆಟ್ಟವರಿಲ್ಲ. ಕೆಲವರು ಒಳ್ಳೆಯವರೂ ಇದ್ದಾರೆ. ಅಂತಹವರು ಈ ಬಾರಿ ಲೋಕಸಭಾ ದಾವಣಗೆರೆ ಕ್ಷೇತ್ರದಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ದೇಶ ಹಾಗೂ ಮೋದಿಗಾಗಿ ಚುನಾವಣೆಯಿಂದ ಹಿಂದೆ ಸರಿದ ಮಹಾನ್‌ ವ್ಯಕ್ತಿಗಳಿಗೆ ನಿಜಕ್ಕೂ ನಾನು ಧನ್ಯವಾದ ಹೇಳಬೇಕು. ಅವರ ಸಹಕಾರ ಹೀಗೆ ಇರಲಿ, ಅದು ಮುಂದುವರಿಯಲಿ ಎಂದು ಶಾಮನೂರು ಕುಟುಂಬದವರ ಹೆಸರು ಪ್ರಸ್ತಾಪಿಸದೇ ಇದೇ ಸಂದರ್ಭದಲ್ಲಿ ಆಯನೂರು ಮಂಜುನಾಥ್‌
ಮಾರ್ಮಿಕವಾಗಿ ಹೇಳಿದರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.